ಆಂದೋಲನ ಪುರವಣಿ

ಯೋಗ ಕ್ಷೇಮ: ಇಲ್ಲಿ ಮಧುಮೇಹಕ್ಕೆ ಸಮಗ್ರ ಚಿಕಿತ್ಸೆ

ಮೈಸೂರು : ಎಲ್ಲ ವಿಶೇಷತೆಗಳೊಂದಿಗೆ ಸಮಗ್ರ ಮಧುಮೇಹ ಚಿಕಿತ್ಸಾ ಕೇಂದ್ರವಾಗಿರುವ ನಗರದ ನ್ಯೂ ಡಯಾಕೇರ್ ಸೆಂಟರ್ ಪಾನಿ ಕ್ಲಿನಿಕ್, ನವಾಯು ಕೇರ್ ಸೆಂಟರ್ ಎರಡು ವರ್ಷಗಳನ್ನು ಪೂರೈಸಿದ್ದು, ಅಲೋಪತಿ ಹಾಗೂ ಆಯುರ್ವೇದ ಎರಡೂ ಚಿಕಿತ್ಸೆಗಳನ್ನು ಒಂದೇ ಸೂರಿನಲ್ಲಿ ಒದಗಿಸುವ ಮೈಸೂರಿನ ಏಕೈಕ ಕೇಂದ್ರ ಇದಾಗಿದೆ.
ವಿ.ವಿ.ಮೊಹಲ್ಲಾದ ಗೋಕುಲಂ ರಸ್ತೆಯ ೬ನೇ ಮುಖ್ಯ ರಸ್ತೆಯ ಕಬ್ಸ್ ಬೇಕರಿ ಮುಂಭಾಗ ಇರುವ ಈ ಕೇಂದ್ರವನ್ನು ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮಧುಮೇಹ ತಜ್ಞರಾದ ಡಾ.ಎ.ಆರ್.ರೇಣುಕಾ ಪ್ರಸಾದ್ ಹಾಗೂ ಸಿಇಒ ಆಯುರ್ವೇದ ತಜ್ಞರಾದ ಡಾ.ಪಿ.ನವ್ಯಾ ಅವರು ನಿರ್ವಹಣೆ ಮಾಡುತ್ತಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಅನೇಕ ಸಂಘ-ಸಂಸ್ಥೆಗಳಿಂದ ಸಾಕಷ್ಟು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

ಇಲ್ಲಿ ಲಭ್ಯವಿರುವ ತಪಾಸಣಾ ಸೌಲಭ್ಯಗಳು : ಸಂಪೂರ್ಣ ಮಧುಮೇಹಿಗಳ ಆರೈಕೆ, ಮಧುಮೇಹಿಗಳ ಕಣ್ಣಿನ ಘಟಕ, ಪಾದ ರಕ್ಷಣಾ ಘಟಕ, ಹೃದ್ರೋಗ, ಮೂತ್ರಪಿಂಡ ನ್ಯೂರೋಕೇರ್, ಆರ್ಥೋಕೇರ್ ಮನೋವೈದ್ಯರ ಸಮಾಲೋಚನೆ, ಆಹಾರ ಪದ್ಧತಿ ಮತ್ತು ಪೋಷಣೆ, ಇತರ ವಿಶೇಷ ತಜ್ಞರೊಡನೆ ಸಮಾಲೋಚನೆ, ಮಧುಮೇಹ ಸ್ನೇಹಿ ಆಹಾರ ಉತ್ಪನ್ನಗಳು, ಆಯುರ್ವೇದ ತಜ್ಞರೊಡನೆ ಸಮಾಲೋಚನೆ, ಪಂಚಕರ್ಮ ಥೆರಪಿ, ನೇತ್ರ ತರ್ಪಣ, ಬೊಜ್ಜುತನದ ನಿರ್ವಹಣೆ, ಪಾರ್ಶ್ವವಾಯ ಹಾಗೂ ರಕ್ತದೊತ್ತಡ ನಿರ್ವಹಣೆಗಳನ್ನು ಒಳಗೊಂಡಿದ್ದು , ವಿಶೇಷವಾಗಿ ಉತ್ತಮವಾದ ಪ್ರಯೋಗಾಲಯ ಮತ್ತು ಔಷಧಾಲಯ ವನ್ನು ಮನೆ ಮನೆಗೆ ಹೋಗಿ ರಕ್ತಸಂಗ್ರಹಣೆ ಹಾಗೂ ಔಷಧಿ ವಿತರಣೆ ಸೌಲಭ್ಯಗಳನ್ನು ನೀಡುತ್ತಿದೆ.

ಶಿಬಿರಗಳು : ಕೇವಲ ಚಿಕಿತ್ಸೆ ನೀಡುವುದರಲ್ಲಿ ಮಾತ್ರವಲ್ಲದೇ ಸಾಮಾಜಿಕ ಕಳಕಳಿಯನ್ನು ಹೊಂದಿದ್ದು ಅನೇಕ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ನೂರಾರು ಉಚಿತ ಮಧುಮೇಹದ ಶಿಬಿರಗಳನ್ನು ಹಮ್ಮಿಕೊಂಡು ಸಾವಿರಾರು ಜನರಿಗೆ ತಪಾಸಣೆ ನಡೆಸಿ, ಮಧುಮೇಹದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ಆಧುನಿಕ ವಿಧಾನವಾದ ಸಿಜಿಎಂಎಸ್ (ಕಂಟಿನಿಯಸ್ ಗುಲ್ಕೋಸ್ ಮಾನಿಟರಿಂಗ್ ಸಿಸ್ಟಮ್-ಇಎಖ – ನಿರಂತರವಾಗಿ ರಕ್ತದಲ್ಲಿನ ಸಕ್ಕರೆ ಅಂಶವನ್ನು ಅರಿಯುವ ಸಾಧನ) ಬಳಸಲಾಗುತ್ತಿದ್ದು, ಕಳೆದ ೫ ವರ್ಷಗಳಲ್ಲಿ ಸಾವಿರಾರು ಮಂದಿ ಅಪ್ಲಿಕೇಷನ್ ಪ್ರಯೋಜನ ಪಡೆದಿದ್ದಾರೆ. ಸಮುದಾಯದೊಂದಿಗೂ ಕೆಲಸ ಮಾಡುತ್ತಾ, ಜನರಲ್ಲಿ ಇರುವ ಮಧುಮೇಹದ ಬಗೆಗಿನ ಭಯವನ್ನು ಹೋಗಲಾಡಿಸುವ ಕೆಲಸ ಮಾಡಲಾಗುತ್ತಿದೆ.

ವಿಶೇಷತೆಗಳೇನು ?

* ಮಧುಮೇಹಕ್ಕೆ ಸಂಬಂಧಿಸಿದ ಇದುವರೆಗಿನ ಎಲ್ಲ ರೀತಿಯ ಅತ್ಯಾಧುನಿಕ ವಿಧಾನಗಳಲ್ಲಿ ಚಿಕಿತ್ಸೆ ಸಿಗುತ್ತದೆ.

*ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಮಧುಮೇಹಿಗಳನ್ನು ಪ್ರೇರೆಪಿಸಲು ಉತ್ತಮ ನಿಯಂತ್ರಿತ ಮಧುಮೇಹಿಗಳಿಗೆ ಬಹುಮಾನ ನೀಡಲಾಗುತ್ತದೆ.

* ಬಹಳ ವರ್ಷಗಳ ಕಾಲ ಮಧುಮೇಹವಿದ್ದರೂ ಯಾವುದೇ ದುಷ್ಪರಿಣಾಮಗಳಗಳನ್ನು ಹೊಂದಿಲ್ಲದ ಮಧುಮೇಹಿಗಳನ್ನು ಗುರುತಿಸಿ ‘ಮಧುಮೇಹದ ರಾಯಭಾರಿ’ ಪ್ರಶಸ್ತಿಯನ್ನು ವಿಶ್ವಮಧುಮೇಹ ದಿನದಂದು ನೀಡುತ್ತಾ , ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.

* ಮಧುಮೇಹಿಗಳಿಗೆ ಪ್ರತಿ ಮೂರು ತಿಂಗಳಿಗೆ ಒಮ್ಮೆ ಕರೆ ಮಾಡಿ ಫಾಲೋಅಪ್ ಮಾಡಲಾಗುತ್ತದೆ. ವಾಟ್ಸ್‌ಅಪ್ ಗ್ರೂಪ್ ಮೂಲಕ ಮಧುಮೇಹಕ್ಕೆ ಸಂಬಂಧಿಸಿದಂತೆ ಪ್ರತಿದಿನ ಟಿಪ್ಸ್‌ಗಳನ್ನು ತಿಳಿಸಲಾಗುತ್ತದೆ.

*ಮುಂದಿನ ತಿಂಗಳಿಂದ ಪ್ರತಿ ತಿಂಗಳ ಮೂರನೇ ಭಾನುವಾರ ಸಂಸ್ಥೆಯು ಕಾರ್ಯನಿರ್ವಹಿಸಲಿದ್ದು ಆ ದಿನ ಉಚಿತವಾಗಿ ಮಧುಮೇಹಿಗಳಿಗೆ ಸಮಾಲೋಚನೆ ಮಾಡಲಾಗುತ್ತದೆ.

* ಪ್ರಾಥಮಿಕ ಹಂತದಲ್ಲೇ ಸೂಕ್ತ ಪರೀಕ್ಷೆಗಳ ಮೂಲಕ ತಪಾಸಣೆ ನಡೆಸಿ , ಮುಂದಿನ ದಿನಗಳಲ್ಲಿ ಮಧುಮೇಹದಿಂದ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು.

*ಮುಂದಿನ ದಿನಗಳಲ್ಲಿ ಟೈಪ್ ೧ ಮಧುಮೇಹಿಗಳಿಗೆ (ಮಕ್ಕಳಿಗೆ) ಉಚಿತವಾಗಿ ಸಮಾಲೋಚನೆ ನೀಡಲಿದ್ದು ಅಗತ್ಯ ಇದ್ದಲ್ಲಿ ಉಚಿತವಾಗಿ ಇನ್ಸುಲಿನ್ ಔಷಧಿಗಳನ್ನು ನೀಡಲಾಗುತ್ತದೆ ಎಂದು ಸಂಸ್ಥೆಯ ಡಾ.ರೇಣುಕಾಪ್ರಸಾದ. ಎ ಆರ್ ಅವರು ಹೇಳಿದ್ದಾರೆ.

*ಜೂಮ್ /ಫೇಸ್ಬುಕ್ ಲೈವ್ ಮೂಲಕ ಮಧುಮೇಹ ಗಳು ಹಾಗೂ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲಾಗುತಿದೆ.

 ಅನೇಕರಿಗೆ ಮಧುಮೇಹದ ಬಗ್ಗೆ ಸರಿಯಾದ ಅರಿವು ಇಲ್ಲದಿರುವುದು. ಅರಿವಿದ್ದರೂ ಸಹ ವೈದ್ಯರಲ್ಲಿ ಹೋಗಿ ಸಮಾಲೋಚನೆ ಪಡೆಯಲು ಇರುವ ತಾತ್ಸಾರ ಮನೋಭಾವ ದಿಂದಾಗಿ ಇಂದು ಭಾರತ ಮಧುಮೇಹದ ರಾಜಧಾನಿಯಾಗುತ್ತಿದೆ. ನಮ್ಮ ನ್ಯೂ ಡಯಾಕೇರ್ ಸೆಂಟರ್, ನವಾಯು ಕೇರ್ ಸೆಂಟರ್ ಮಧುಮೇಹಕ್ಕೆ ಸಂಬಂಧಿಸಿದ ಇದುವರೆಗಿನ ಎಲ್ಲ ರೀತಿಯ ಅತ್ಯಾಧುನಿಕ ವಿಧಾನಗಳನ್ನು ಒಳಗೊಂಡಿದ್ದು, ಆಯುರ್ವೇದ ಮತ್ತು ಅಲೋಪತಿ ಎರಡೂ ರೀತಿಯ ಚಿಕಿತ್ಸೆಯನ್ನು ನೀಡುತ್ತಿದೆ ಮತ್ತು ಅರ್ಪಣ ಮನೋಭಾವದಿಂದ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದೆ. – ಡಾ.ಎ.ಆರ್.ರೇಣುಕಾಪ್ರಸಾದ್, ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಮಧುಮೇಹ ತಜ್ಞರು.

 

 

andolana

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

8 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

8 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

8 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

21 hours ago