ಆಂದೋಲನ ಪುರವಣಿ

ಡಿ. 2, 3ರಂದು ವಿ.ಸಿ.ಫಾರಂನಲ್ಲಿ ಕೃಷಿ ಮೇಳ

ಸುಧಾರಿತ ತಳಿಗಳು ಮತ್ತು ಬೇಸಾಯಗಳ ಪ್ರಾತ್ಯಕ್ಷಿಕೆ

ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗಳು ಮೈಸೂರು, ಹಾಸನ, ಚಾಮರಾಜನಗರ, ತುಮಕೂರು ಹಾಗೂ ಕಾಡಾ ಸಹಯೋಗದಲ್ಲಿ ಏರ್ಪಡಿಸಿರುವ ಈ ಬಾರಿಯ ಕೃಷಿ ಮೇಳ ಸಾಕಷ್ಟು ವೈವಿಧ್ಯಕ್ಕೆ ಸಾಕ್ಷಿಯಾಗಲಿದೆ ಎಂಬುದು ಕೃಷಿ ಮಹಾವಿದ್ಯಾಲಯದ ಮುಖ್ಯಸ್ಥರಾದ ಡಾ.ಎಸ್.ಎಸ್.ಪ್ರಕಾಶ್ ಅಭಿಪ್ರಾಯ.

ಪ್ರಮುಖ ಆಕರ್ಷಣೆಗಳು

  • ಭತ್ತದ ಸುಧಾರಿತ ತಳಿಗಳ ಹಾಗೂ ಹೈಬ್ರಿಡ್‌ಗಳ ಪ್ರಾತ್ಯಕ್ಷಿಕೆ, ಶ್ರೀಪದ್ಧತಿ ಹಾಗೂ ಏರೋಬಿಕ್ ಭತ್ತದ ಬೇಸಾಯ ಪ್ರಾತ್ಯಕ್ಷಿಕೆ, ಡ್ರಂಸೀಡರ್‌ನಿಂದ ಹಾಗೂ ಯಂತ್ರಚಾಲಿತ ನಾಟಿ ಪ್ರಾತ್ಯಕ್ಷಿಕೆ.
  • ನೂತನ ರಾಗಿ ತಳಿಗಳ ಪ್ರಾತ್ಯಕ್ಷಿಕೆ, ಮುಸುಕಿನ ಜೋಳ ಮತ್ತು ಶಕ್ತಿಮಾನ್ ಜೋಳದ ನೂತನ ಹೈಬ್ರಿಡ್ ತಳಿಗಳ ಪ್ರಾತ್ಯಕ್ಷಿಕೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ.
  • ಸುಧಾರಿತ ಕಬ್ಬಿನ ತಳಿಗಳು, ಅಂಗಾಂಶ ಕೃಷಿ ತಂತ್ರಜ್ಞಾನದಲ್ಲಿ ರೋಗಮುಕ್ತ ಕಬ್ಬಿನ ಸಸಿಗಳ ಉತ್ಪಾದನೆ, ಕಬ್ಬಿನಲ್ಲಿ ಆಧುನಿಕ ಬೇಸಾಯ ತಾಂತ್ರಿಕತೆಗಳು, ರಾಸಾಯನಿಕ ಮುಕ್ತ ಬೆಲ್ಲ ತಯಾರಿಕೆಯ ಪ್ರಾತ್ಯಕ್ಷಿಕೆ.
  • ಕಬ್ಬು ನಾಟಿ ಮಾಡುವ ಹಾಗೂ ತರಗು ಪುಡಿ ಮಾಡುವ ಯಂತ್ರಗಳ ಪ್ರಾತ್ಯಕ್ಷಿಕೆ ಹಾಗೂ ವಿವಿಧ ಹತ್ತಿ ತಳಿಗಳ ಪ್ರಾತ್ಯಕ್ಷಿಕೆ
  • ಮೇವಿನ ಬೆಳೆಗಳ ಸುಧಾರಿತ ತಳಿಗಳು, ರಸಮೇವು, ಜಲ ಕೃಷಿಯಲ್ಲಿ ಮೇವು ಉತ್ಪಾದನೆ ದ್ವಿದಳ ಧಾನ್ಯ ಮತ್ತು ಎಣ್ಣೆ ಕಾಳು ಬೇಳೆಗಳು, ನೀರು ನಿರ್ವಹಣಾ ತಂತ್ರಜ್ಞಾನ, ದೂರ ಸಂವೇದಿ ನೀರಾವರಿ ಪದ್ಧತಿ, ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ, ಕೃಷಿ ವಸ್ತು ಪ್ರದರ್ಶನ, ಸಮಗ್ರ ಮೀನುಸಾಕಾಣಿಕೆ, ವಿವಿಧ ಸೊಪ್ಪು, ತರಕಾರಿ, ಹೂವಿನ ಬೆಳೆಗಳ ಪ್ರಾತ್ಯಕ್ಷಿಕೆ.
andolana

Recent Posts

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

10 mins ago

ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ಜಿಲ್ಲೆಯ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…

34 mins ago

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ. ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ…

1 hour ago

ಜೋಳದ ಫಸಲು ಕಾಯುವ ವೇಳೆ ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ…

2 hours ago

ಓದುಗರ ಪತ್ರ: ಸ್ವಾಗತಾರ್ಹ ತೀರ್ಪು!

ಅಧಿಕ ಸುಂಕ ಹೇರಿಕೆ ಚಟ ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ ವಿವಿಧ ದೇಶಗಳನು ನಿಯಂತ್ರಿಸಲು! ಆದರೀಗ ರದ್ದುಗೊಳಿಸಿದೆ ಅಮೆರಿಕದ ಸುಪ್ರೀಂ ಕೋರ್ಟ್ ಅಽಕ…

2 hours ago

ಓದುಗರ ಪತ್ರ: ಮಕ್ಕಳಿಗೆ ಮೊಬೈಲ್ ನಿಷೇಧದ ಚಿಂತನೆ: ಸ್ವಾಗತಾರ್ಹ

ರಾಜ್ಯದಲ್ಲಿ ೧೬ ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿರುವುದು ಸ್ವಾಗತಾರ್ಹ.…

2 hours ago