ಕೆಲ ದಿನಗಳ ಹಿಂದೆ ಕೆ.ಆರ್.ಜಿ. ಸ್ಟುಡಿಯೋಸ್ ‘ಉತ್ತರಕಾಂಡ’ ಎನ್ನುವ ಟೈಟಲ್ ಅಡಿಯಲ್ಲಿ ಅಪ್ಪಟ ಉತ್ತರ ಕರ್ನಾಟಕದ ಗ್ಯಾಂಗ್ಸ್ಟರ್ ಕತೆ ಹೇಳಲು ತೀರ್ಮಾನಿಸಿತ್ತು. ಆದರೆ ಚಿತ್ರಕ್ಕೆ ನಾಯಕ ಯಾರು ಎನ್ನುವ ಪ್ರಶ್ನೆ ಉತ್ತರ ಸಿಕ್ಕಿರಲಿಲ್ಲ.
ಇದೀಗ ಡಾಲಿ ಧನಂಜಯ್ ಅವರ ಹುಟ್ಟುಹಬ್ಬದ ದಿನವೇ ಡಾಲಿಯೇ ನಾಯಕ ಎಂದು ಘೋಷಿಸಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ರಕ್ತಸಿಕ್ತ ಕೈಯಲ್ಲಿ ಸಿಗಾರ್, ಒಂದು ಬದಿ ಒಡೆದ ಕನ್ನಡಕ ಧರಿಸಿ, ಉದ್ದ ಗಡ್ಡ ಬಿಟ್ಟಿರುವ ಡಾಲಿ ಅಪ್ಪಟ ಗ್ಯಾಂಗ್ಸ್ಟರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಫಸ್ಟ್ಲುಕ್ನಲ್ಲಿ ಇರುವ ಗಡಸುತ ಚಿತ್ರದ ನಿರೀಕ್ಷೆಯನ್ನು ಹೆಚ್ಚಿಸಿದೆ. ಈ ಹಿಂದೆ ‘ದಯವಿಟ್ಟು ಗಮನಿಸಿ’, ‘ರತ್ನನ್ ್ರಪಂಚ’ ರೀತಿಯ ವಿಶಿಷ್ಟ ಸಿನಿಮಾಗಳ ನಿರ್ದೇಶನ ಮಾಡಿದ್ದ ರೋಹಿತ್ ಪದಕಿ ನಿರ್ದೇಶನದ ಹಿನ್ನೆಲೆಯಲ್ಲಿಯೂ ಕಾತರತೆ ಹೆಚ್ಚಿದೆ.
ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯಲಿದ್ದು, ಡಾಲಿ ಅವರ ‘ಹೊಯ್ಸಳ’ ಚಿತ್ರದ ನಂತರ ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದು, ಮುಂದಿನ ಅಪ್ಡೇಟ್ಸ್ಗಳಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.
ಚರಣ್ ರಾಜ್ ಸಂಗೀತ, ಸ್ವಾಮಿ ಛಾಯಾಗ್ರಹಣ, ವಿಶ್ವಾಸ್ ಕಲಾ ನಿರ್ದೇಶನ ಚಿತ್ರಕ್ಕಿರಲಿದೆ.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…