ಪುನೀತ್ ರಾಜ್ಕುಮಾರ್ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಕಾರಣಕ್ಕೆ ‘ಲಕ್ಕಿಮ್ಯಾನ್’ ಚಿತ್ರ ನಿರೀಕ್ಷೆ ಹೆಚ್ಚಿಸಿಕೊಂಡಿದೆ. ಮೂಗೂರು ಸುಂದರಂ ಅವರ ಮೊಮ್ಮಗ ನಾಗೇಂದ್ರ ಪ್ರಸಾದ್ ಮೊದಲ ಬಾರಿಗೆ ಕನ್ನಡದಲ್ಲಿ ನಿರ್ದೇಶನಕ್ಕೆ ಇಳಿದಿರುವುದು ಚಿತ್ರದ ಮತ್ತೊಂದು ವಿಶೇಷ.
ಮೊನ್ನೆ ಮೊನ್ನೆ ಪುನೀತ್ರಾಜ್ಕುಮಾರ್ ಮತ್ತು ಪ್ರಭುದೇವ ಅವರು ಒಟ್ಟಿಗೆ ಡ್ಯಾನ್ಸ್ ಮಾಡಿರುವ ಹಾಡೊಂದು ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ಗಳಿಸಿದೆ. ಸೆ. ೯ರಂದು ತೆರೆಗೆ ಬರಲು ಸಿದ್ಧತೆ ನಡೆಸಿರುವ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕ, ಸಂಗೀತ ಶೃಂಗೇರಿ, ರೋಶಿಣಿ ನಾಯಕಿಯರು.
ತಮಿಳಿನ ‘ಓ ಮೈ ಕಡವಳೇ’ (ಓ ನನ್ನ ದೇವರೆ) ಚಿತ್ರದ ರೀಮೇಕ್ ಆದ ‘ಲಕ್ಕಿ ಮ್ಯಾನ್’ ಹಲವು ಆಯಾಮಗಳಲ್ಲಿ ಪ್ರಾಮುಖ್ಯತೆ ಪಡೆದುಕೊಂಡಿದೆ. ಒಂದು ಕಡೆ ಪುನೀತ್ ರಾಜ್ಕುಮಾರ್, ಪ್ರಭುದೇವ ಒಟ್ಟಿಗೆ ಕಾಣಿಸಿಕೊಂಡಿರುವುದು, ಡಾರ್ಲಿಂಗ್ ಕೃಷ್ಣ ಅವರ ಮೇಲಿನ ನಿರೀಕ್ಷೆ, ನಾಗೇಂದ್ರ ಪ್ರಸಾದ್ ಅವರ ಕನ್ನಡದ ಚೊಚ್ಚಲ ನಿರ್ದೇಶನ ನಿರೀಕ್ಷೆಗಳನ್ನು ಹೆಚ್ಚಿಸಿದೆ.
ಮೀನಾಕ್ಷಿ ಸುಂದರಂ, ಸುಂದರ ಕಾಮರಾಜ್ ನಿರ್ಮಾಣದ ಚಿತ್ರಕ್ಕೆ ಶುಭ ಹಾರೈಸಲು ಆಗಮಿಸಿದ್ದ ದೊಡ್ಡ ತಾರಾಬಳಗವೇ ಪುನೀತ್ ಅವರ ಸ್ಮರಣೆಯಲ್ಲಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕಿಚ್ಚ ಸುದೀಪ್, ಅಪ್ಪು ಅಭಿನಯದ ಈ ಚಿತ್ರವನ್ನು ಅಪ್ಪಿಕೊಳ್ಳುವ ಅವಕಾಶ ಒಮ್ಮೆ ಮಾತ್ರ ಇದೆ, ಎಲ್ಲರೂ ಅಪ್ಪಿಕೊಳ್ಳಿ ಎಂದು ಕರೆ ನೀಡಿದರು. ಅಪ್ಪು ಅವರ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ವೃತ್ತಿ ಜೀವನ ಆರಂಭಿಸಿದ ತಮಗೆ ಅವರೊಂದಿಗೆ ನಟಿಸುವ ಅವಕಾಶ ಸಿಕ್ಕಿದ್ದು ಅದೃಷ್ಟ ಎಂದರು ನಾಯಕ ಡಾಲಿರ್ಂಗ್ ಕೃಷ್ಣ.
ಸುಂದರ್ ರಾಜ್, ಸಾಧುಕೋಕಿಲ, ರಂಗಾಯಣ ರಘು, ನಾಗಭೂಷಣ, ಮಾಳವಿಕ ಅವಿನಾಶ್, ಸುಧಾ ಬೆಳವಾಡಿ ಸೇರಿ ಹಲವರ ತಾರಾಗಣ ಚಿತ್ರದಲ್ಲಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…