ಆಂದೋಲನ ಪುರವಣಿ

ಯೋಗ ಕ್ಷೇಮ : ವಿಟಮಿನ್ ‘ಎ’ ಕೊರತೆಯಾಗದಿರಲಿ

ಆಹಾರವೇ ಆರೋಗ್ಯದ ಗುಟ್ಟು. ಎಲ್ಲ ಜೀವಸತ್ವಗಳನ್ನು ಒಳಗೊಂಡ ಆಹಾರ ಸೇವನೆಯಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಕೆಲವು ಬಾರಿ ದೇಹದಲ್ಲಿ ಕೆಲವು ವಿಟಮಿನ್‌ಗಳ ಕೊರತೆಯಾದಾಗ ಅದು ಬೇರೆ ಬೇರೆ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.

ಎ,ಬಿ,ಸಿ,ಡಿ ಹೀಗೆ ದೇಹಕ್ಕೆ ಬೇಕಾದ ಜೀವಸತ್ವಗಳನ್ನು ವಿಂಗಡಣೆ ಮಾಡಲಾಗಿದೆ. ಇವುಗಳನ್ನು ಒಂದೊಂದರ ಕೊರತೆಯೂ, ಹೆಚ್ಚು ಆಗುವುದೂ ಸಮಸ್ಯೆಗಳಿಗೆ ಎಡೆಮಾಡಕೊಡುತ್ತದೆ.

ಈಗ ನಮ್ಮ ದೇಹಕ್ಕೆ ವಿಟಮಿನ್ ಎ ಎಷ್ಟು ಮುಖ್ಯ, ಅದರ ಕೊರತೆಯಿಂದ ಏನೇನು ಸಮಸ್ಯೆ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ.

ವಿಟಮಿನ್ ಎ ಕೊರತೆಯು ಕಣ್ಣುಗಳು, ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

* ಕಣ್ಣಿನ ಸಮಸ್ಯೆಗಳು: ದೃಷ್ಟಿ ಮಂಜಾಗುವುದು, ಕಣ್ಣುಗಳು ಒಣಗಿದಂತಾಗುವುದು, ಕುರುಡುತನ , ಕಾರ್ನಿಯಾಗೆ ಇದು ದಾರಿಯಾಗಬಹುದು. ದೀರ್ಘಕಾಲದವರೆಗೆ ದೇಹದಲ್ಲಿ ವಿಟಮಿನ್ ಎ ಕೊರತೆಯುಂಟಾದರೆ ಅದರಿಂದ ಇರುಳುಗಣ್ಣು ಸಮಸ್ಯೆ ಉಂಟಾಗುತ್ತದೆ.

*ಚರ್ಮದ ಸಮಸ್ಯೆಗಳು: ಚರ್ಮದ ಕೋಶಗಳಿಗೆ ವಿಟಮಿನ್ ಎ ಅತ್ಯವಶ್ಯಕ. ಇದರ ಕೊರತೆಯಿಂದ ಎಸ್ಜಿಮಾ ಅಥವಾ ಒಣ ಚರ್ಮದಂತಹ ಕಾಯಿಲೆ ಉಂಟಾಗಬಹುದು.

ಕೊರತೆ ನಿವಾರಣೆ ಹೇಗೆ?

ಕೆಲವು ಹಣ್ಣು, ತರಕಾರಿ, ಆಹಾರ ಪದಾರ್ಥಗಳಲ್ಲಿ ವಿಟಮಿನ್ ಎ ಹೇರಳವಾಗಿ ಇದ್ದು, ಇವುಗಳ ಸೇವನೆಯಿಂದ ಈ ಜೀವಸತ್ವವನ್ನು ಪಡೆದುಕೊಳ್ಳಬಹುದು.
ಕ್ಯಾರೆಟ್, ಸಿಹಿ ಗೆಣಸು, ಸೊಪ್ಪು, ಹಸಿರು ತರಕಾರಿಗಳು, ಮೊಟ್ಟೆ, ಬೆಣ್ಣೆ ಹಣ್ಣು, ಪಪ್ಪಾಯಿ, ಸೀಬೆಹಣ್ಣು, ಮೀನು, ಮಾಂಸಗಳಲ್ಲಿ ವಿಟಮಿನ್ ಎ ಪ್ರಮಾಣ ಇದೆ.

andolana

Recent Posts

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

25 mins ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

31 mins ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

2 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

3 hours ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

5 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

5 hours ago