ಆಹಾರವೇ ಆರೋಗ್ಯದ ಗುಟ್ಟು. ಎಲ್ಲ ಜೀವಸತ್ವಗಳನ್ನು ಒಳಗೊಂಡ ಆಹಾರ ಸೇವನೆಯಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಕೆಲವು ಬಾರಿ ದೇಹದಲ್ಲಿ ಕೆಲವು ವಿಟಮಿನ್ಗಳ ಕೊರತೆಯಾದಾಗ ಅದು ಬೇರೆ ಬೇರೆ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.
ಎ,ಬಿ,ಸಿ,ಡಿ ಹೀಗೆ ದೇಹಕ್ಕೆ ಬೇಕಾದ ಜೀವಸತ್ವಗಳನ್ನು ವಿಂಗಡಣೆ ಮಾಡಲಾಗಿದೆ. ಇವುಗಳನ್ನು ಒಂದೊಂದರ ಕೊರತೆಯೂ, ಹೆಚ್ಚು ಆಗುವುದೂ ಸಮಸ್ಯೆಗಳಿಗೆ ಎಡೆಮಾಡಕೊಡುತ್ತದೆ.
ಈಗ ನಮ್ಮ ದೇಹಕ್ಕೆ ವಿಟಮಿನ್ ಎ ಎಷ್ಟು ಮುಖ್ಯ, ಅದರ ಕೊರತೆಯಿಂದ ಏನೇನು ಸಮಸ್ಯೆ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ.
ವಿಟಮಿನ್ ಎ ಕೊರತೆಯು ಕಣ್ಣುಗಳು, ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
* ಕಣ್ಣಿನ ಸಮಸ್ಯೆಗಳು: ದೃಷ್ಟಿ ಮಂಜಾಗುವುದು, ಕಣ್ಣುಗಳು ಒಣಗಿದಂತಾಗುವುದು, ಕುರುಡುತನ , ಕಾರ್ನಿಯಾಗೆ ಇದು ದಾರಿಯಾಗಬಹುದು. ದೀರ್ಘಕಾಲದವರೆಗೆ ದೇಹದಲ್ಲಿ ವಿಟಮಿನ್ ಎ ಕೊರತೆಯುಂಟಾದರೆ ಅದರಿಂದ ಇರುಳುಗಣ್ಣು ಸಮಸ್ಯೆ ಉಂಟಾಗುತ್ತದೆ.
*ಚರ್ಮದ ಸಮಸ್ಯೆಗಳು: ಚರ್ಮದ ಕೋಶಗಳಿಗೆ ವಿಟಮಿನ್ ಎ ಅತ್ಯವಶ್ಯಕ. ಇದರ ಕೊರತೆಯಿಂದ ಎಸ್ಜಿಮಾ ಅಥವಾ ಒಣ ಚರ್ಮದಂತಹ ಕಾಯಿಲೆ ಉಂಟಾಗಬಹುದು.
ಕೊರತೆ ನಿವಾರಣೆ ಹೇಗೆ?
ಕೆಲವು ಹಣ್ಣು, ತರಕಾರಿ, ಆಹಾರ ಪದಾರ್ಥಗಳಲ್ಲಿ ವಿಟಮಿನ್ ಎ ಹೇರಳವಾಗಿ ಇದ್ದು, ಇವುಗಳ ಸೇವನೆಯಿಂದ ಈ ಜೀವಸತ್ವವನ್ನು ಪಡೆದುಕೊಳ್ಳಬಹುದು.
ಕ್ಯಾರೆಟ್, ಸಿಹಿ ಗೆಣಸು, ಸೊಪ್ಪು, ಹಸಿರು ತರಕಾರಿಗಳು, ಮೊಟ್ಟೆ, ಬೆಣ್ಣೆ ಹಣ್ಣು, ಪಪ್ಪಾಯಿ, ಸೀಬೆಹಣ್ಣು, ಮೀನು, ಮಾಂಸಗಳಲ್ಲಿ ವಿಟಮಿನ್ ಎ ಪ್ರಮಾಣ ಇದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…