ಆಹಾರವೇ ಆರೋಗ್ಯದ ಗುಟ್ಟು. ಎಲ್ಲ ಜೀವಸತ್ವಗಳನ್ನು ಒಳಗೊಂಡ ಆಹಾರ ಸೇವನೆಯಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಕೆಲವು ಬಾರಿ ದೇಹದಲ್ಲಿ ಕೆಲವು ವಿಟಮಿನ್ಗಳ ಕೊರತೆಯಾದಾಗ ಅದು ಬೇರೆ ಬೇರೆ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.
ಎ,ಬಿ,ಸಿ,ಡಿ ಹೀಗೆ ದೇಹಕ್ಕೆ ಬೇಕಾದ ಜೀವಸತ್ವಗಳನ್ನು ವಿಂಗಡಣೆ ಮಾಡಲಾಗಿದೆ. ಇವುಗಳನ್ನು ಒಂದೊಂದರ ಕೊರತೆಯೂ, ಹೆಚ್ಚು ಆಗುವುದೂ ಸಮಸ್ಯೆಗಳಿಗೆ ಎಡೆಮಾಡಕೊಡುತ್ತದೆ.
ಈಗ ನಮ್ಮ ದೇಹಕ್ಕೆ ವಿಟಮಿನ್ ಎ ಎಷ್ಟು ಮುಖ್ಯ, ಅದರ ಕೊರತೆಯಿಂದ ಏನೇನು ಸಮಸ್ಯೆ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ.
ವಿಟಮಿನ್ ಎ ಕೊರತೆಯು ಕಣ್ಣುಗಳು, ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
* ಕಣ್ಣಿನ ಸಮಸ್ಯೆಗಳು: ದೃಷ್ಟಿ ಮಂಜಾಗುವುದು, ಕಣ್ಣುಗಳು ಒಣಗಿದಂತಾಗುವುದು, ಕುರುಡುತನ , ಕಾರ್ನಿಯಾಗೆ ಇದು ದಾರಿಯಾಗಬಹುದು. ದೀರ್ಘಕಾಲದವರೆಗೆ ದೇಹದಲ್ಲಿ ವಿಟಮಿನ್ ಎ ಕೊರತೆಯುಂಟಾದರೆ ಅದರಿಂದ ಇರುಳುಗಣ್ಣು ಸಮಸ್ಯೆ ಉಂಟಾಗುತ್ತದೆ.
*ಚರ್ಮದ ಸಮಸ್ಯೆಗಳು: ಚರ್ಮದ ಕೋಶಗಳಿಗೆ ವಿಟಮಿನ್ ಎ ಅತ್ಯವಶ್ಯಕ. ಇದರ ಕೊರತೆಯಿಂದ ಎಸ್ಜಿಮಾ ಅಥವಾ ಒಣ ಚರ್ಮದಂತಹ ಕಾಯಿಲೆ ಉಂಟಾಗಬಹುದು.
ಕೊರತೆ ನಿವಾರಣೆ ಹೇಗೆ?
ಕೆಲವು ಹಣ್ಣು, ತರಕಾರಿ, ಆಹಾರ ಪದಾರ್ಥಗಳಲ್ಲಿ ವಿಟಮಿನ್ ಎ ಹೇರಳವಾಗಿ ಇದ್ದು, ಇವುಗಳ ಸೇವನೆಯಿಂದ ಈ ಜೀವಸತ್ವವನ್ನು ಪಡೆದುಕೊಳ್ಳಬಹುದು.
ಕ್ಯಾರೆಟ್, ಸಿಹಿ ಗೆಣಸು, ಸೊಪ್ಪು, ಹಸಿರು ತರಕಾರಿಗಳು, ಮೊಟ್ಟೆ, ಬೆಣ್ಣೆ ಹಣ್ಣು, ಪಪ್ಪಾಯಿ, ಸೀಬೆಹಣ್ಣು, ಮೀನು, ಮಾಂಸಗಳಲ್ಲಿ ವಿಟಮಿನ್ ಎ ಪ್ರಮಾಣ ಇದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…