ಆಂದೋಲನ ಪುರವಣಿ

ಯೋಗ ಕ್ಷೇಮ : ವಿಟಮಿನ್ ‘ಎ’ ಕೊರತೆಯಾಗದಿರಲಿ

ಆಹಾರವೇ ಆರೋಗ್ಯದ ಗುಟ್ಟು. ಎಲ್ಲ ಜೀವಸತ್ವಗಳನ್ನು ಒಳಗೊಂಡ ಆಹಾರ ಸೇವನೆಯಿಂದ ಆರೋಗ್ಯವನ್ನು ಸ್ಥಿರವಾಗಿ ಇಟ್ಟುಕೊಳ್ಳಬಹುದು. ಕೆಲವು ಬಾರಿ ದೇಹದಲ್ಲಿ ಕೆಲವು ವಿಟಮಿನ್‌ಗಳ ಕೊರತೆಯಾದಾಗ ಅದು ಬೇರೆ ಬೇರೆ ರೀತಿಯ ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ.

ಎ,ಬಿ,ಸಿ,ಡಿ ಹೀಗೆ ದೇಹಕ್ಕೆ ಬೇಕಾದ ಜೀವಸತ್ವಗಳನ್ನು ವಿಂಗಡಣೆ ಮಾಡಲಾಗಿದೆ. ಇವುಗಳನ್ನು ಒಂದೊಂದರ ಕೊರತೆಯೂ, ಹೆಚ್ಚು ಆಗುವುದೂ ಸಮಸ್ಯೆಗಳಿಗೆ ಎಡೆಮಾಡಕೊಡುತ್ತದೆ.

ಈಗ ನಮ್ಮ ದೇಹಕ್ಕೆ ವಿಟಮಿನ್ ಎ ಎಷ್ಟು ಮುಖ್ಯ, ಅದರ ಕೊರತೆಯಿಂದ ಏನೇನು ಸಮಸ್ಯೆ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳೋಣ.

ವಿಟಮಿನ್ ಎ ಕೊರತೆಯು ಕಣ್ಣುಗಳು, ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

* ಕಣ್ಣಿನ ಸಮಸ್ಯೆಗಳು: ದೃಷ್ಟಿ ಮಂಜಾಗುವುದು, ಕಣ್ಣುಗಳು ಒಣಗಿದಂತಾಗುವುದು, ಕುರುಡುತನ , ಕಾರ್ನಿಯಾಗೆ ಇದು ದಾರಿಯಾಗಬಹುದು. ದೀರ್ಘಕಾಲದವರೆಗೆ ದೇಹದಲ್ಲಿ ವಿಟಮಿನ್ ಎ ಕೊರತೆಯುಂಟಾದರೆ ಅದರಿಂದ ಇರುಳುಗಣ್ಣು ಸಮಸ್ಯೆ ಉಂಟಾಗುತ್ತದೆ.

*ಚರ್ಮದ ಸಮಸ್ಯೆಗಳು: ಚರ್ಮದ ಕೋಶಗಳಿಗೆ ವಿಟಮಿನ್ ಎ ಅತ್ಯವಶ್ಯಕ. ಇದರ ಕೊರತೆಯಿಂದ ಎಸ್ಜಿಮಾ ಅಥವಾ ಒಣ ಚರ್ಮದಂತಹ ಕಾಯಿಲೆ ಉಂಟಾಗಬಹುದು.

ಕೊರತೆ ನಿವಾರಣೆ ಹೇಗೆ?

ಕೆಲವು ಹಣ್ಣು, ತರಕಾರಿ, ಆಹಾರ ಪದಾರ್ಥಗಳಲ್ಲಿ ವಿಟಮಿನ್ ಎ ಹೇರಳವಾಗಿ ಇದ್ದು, ಇವುಗಳ ಸೇವನೆಯಿಂದ ಈ ಜೀವಸತ್ವವನ್ನು ಪಡೆದುಕೊಳ್ಳಬಹುದು.
ಕ್ಯಾರೆಟ್, ಸಿಹಿ ಗೆಣಸು, ಸೊಪ್ಪು, ಹಸಿರು ತರಕಾರಿಗಳು, ಮೊಟ್ಟೆ, ಬೆಣ್ಣೆ ಹಣ್ಣು, ಪಪ್ಪಾಯಿ, ಸೀಬೆಹಣ್ಣು, ಮೀನು, ಮಾಂಸಗಳಲ್ಲಿ ವಿಟಮಿನ್ ಎ ಪ್ರಮಾಣ ಇದೆ.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago