ಆಂದೋಲನ ಪುರವಣಿ

ಬಾಳು ಕಟ್ಟಿಕೊಂಡಾಯ್ತು, ಬಯಸಿದ್ದೀಗ ದಕ್ಕಾಯ್ತು…

ಶಿಕ್ಷಕರಾಗಿ ಆಯ್ಕೆಯಾದ ಮೂವರು ತೃತೀಯ ಲಿಂಗಿಗಳು; ಪೂಜಾ ಅಂತರಂಗದ ಅನಾವರಣ

-ಸೌಮ್ಯ ಹೆಗ್ಗಡಹಳ್ಳಿ

ಅಪಮಾನ, ಅಸಮಾನತೆಗೆ ತುತ್ತಾಗಿ ಹಿಂದೆ ಬೀಳುತ್ತಿದ್ದ ತೃತೀಯ ಲಿಂಗಿಗಳು ಈಗ ಮುನ್ನೆಲೆಗೆ ಬರುತ್ತಿದ್ದಾರೆ. ಇದಕ್ಕೆ ಅವರಲ್ಲಿರುವ ಛಲ, ಎಲ್ಲರಂತೆಯೇ ನಾವುಗಳೂ ಎನ್ನುವ ದೃಢ ನಿಲುವು ಕಾರಣ. ಇದರ ಜೊತೆಗೆ ಸಮಾಜದ ವರ್ತನೆಯಲ್ಲಿಯೂ ತುಸು ಬದಲಾವಣೆಯಾಗುತ್ತಿದೆ. ಇದೆಲ್ಲರ ಒಟ್ಟಂದ ಎಂಬಂತೆ ಇಂದು ತೃತೀಯ ಲಿಂಗಿಗಳು ಸಾಕಷ್ಟು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಅದರಂತೆ ಇದೀಗ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮೂವರು ತೃತೀಯ ಲಿಂಗಿಗಳು ಆಯ್ಕೆಯಾಗಿದ್ದು, ರಾಜ್ಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದಾರೆ.

ಈ ಬಾರಿಯ ಪ್ರಾಥಮಿಕ ಶಾಲಾ ಶಿಕ್ಷಕರ ಪರೀಕ್ಷೆ ಬರೆದವರಲ್ಲಿ ಹತ್ತು ಮಂದಿ ತೃತೀಯ ಲಿಂಗಿಗಳಿದ್ದರು. ಇವರಲ್ಲಿ ರಾಯಚೂರು ಜಿಲ್ಲೆಯ ಅಶ್ವಥ ಪೂಜಾ, ಚಿಕ್ಕಬಳ್ಳಾಪುರದ ಸುರೇಶ್ ಬಾಬು, ಮಧುಗಿರಿಯ ರವಿಕುಮಾರ್ ವೈ.ಆರ್. ಶಿಕ್ಷಕರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಸಾಧನೆಯ ಬಗ್ಗೆ ಹೆಮ್ಮೆಯಿಂದ ಮಾತನಾಡುವ ಪೂಜಾ ಅವರು, ಅಪಮಾನವೇ ಆವರಿಸಿಕೊಂಡಿದ್ದ ಹೊತ್ತಿನಲ್ಲಿ ನಾನು ದೇವರನ್ನು ಕೇಳಿಕೊಳ್ಳುತ್ತಿದ್ದದ್ದು ಎಲ್ಲವನ್ನೂ ಗೆಲ್ಲುವ ಶಕ್ತಿ ಕೊಡು ಎಂದು. ಓದಿನಿಂದಲೇ ನಾನು ಮುಂದೆ ಬರಲು ಸಾಧ್ಯ ಎಂಬುದರ ಅರಿವಾಗಿ ಓದಿನಲ್ಲಿ ತೊಡಗಿಸಿಕೊಂಡೆ. ಅದರ ಫಲವಾಗಿ ಈ ಮಟ್ಟಕ್ಕೆ ಬಂದಿದ್ದೇನೆ. ಇದು ಇಲ್ಲಿಗೆ ನಿಲ್ಲುವುದಿಲ್ಲ. ಇನ್ನೂ ಮುಂದಿನ ಹಂತಕ್ಕೆ ಹೋಗಲು ನಾನು ಶ್ರಮಿಸುತ್ತಲೇ ಇರುತ್ತೇನೆ. ಈ ನಿಟ್ಟಿನಲ್ಲಿ ನಾನು ಸದಾ ವಿದ್ಯಾರ್ಥಿ ಎನ್ನುತ್ತಾರೆ ಪೂಜಾ.

ಮೀಸಲಾತಿ ನೀಡಿದ ಧೈರ್ಯ

ಸದಾ ಮಕ್ಕಳೊಂದಿಗೆ ಬರೆಯುತ್ತಿದ್ದ ನಾನು ಮಕ್ಕಳ ನಡುವಲ್ಲೇ ಇರಬೇಕು ಎಂದು ಬಯಸಿದ್ದೆ. ಅದಕ್ಕೆ ತಕ್ಕುದಾಗಿ ಶಿಕ್ಷಕಿಯೇ ಆಗಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದೆ. ಇದಕ್ಕೆ ಸಹಕಾರ ನೀಡಿದ್ದು ತೃತೀಯ ಲಿಂಗಿಗಳಿಗೆ ನೀಡಿದ ಮೀಸಲಾತಿ. ನಿರಂತರ ಓದಿನಲ್ಲಿ ತೊಡಗಿಸಿಕೊಂಡ ನಾನು ಗೆದ್ದರೆ ನಮ್ಮ ಸಮುದಾಯದ ಎಲ್ಲರಲ್ಲೂ ಹೊಸ ಭರವಸೆಯನ್ನು ಹುಟ್ಟಿಸಬಹುದು ಎನ್ನುವ ಆಶಾಭಾವನೆ ಇಟ್ಟುಕೊಂಡಿದ್ದೆ. ಅದು ಇಂದು ನನಸಾಗಿದೆ.

ನನಗೆ ನಾನೇ ಸ್ಫೂರ್ತಿ

ಹೆಣ್ಣಾಗಿ ಅಥವಾ ಗಂಡಾಗಿ ಸಾಧನೆ ಮಾಡುವುದು ಬೇರೆ. ಅವರಿಗೆ ಕೆಲವಷ್ಟು ಅವಕಾಶಗಳು ಇರುತ್ತವೆ. ಆದರೆ ತೃತೀಯ ಲಿಂಗಿಯಾದ ನನಗೆ ಕೆಲವಾರು ಕಡೆಗಳಲ್ಲಿ ಸೂಕ್ತ ಅವಕಾಶವೇ ಇರುತ್ತಿರಲಿಲ್ಲ. ಹೀಗಾಗಿ ನಾನು ಯಾವುದೇ ಕೋಚಿಂಗ್ ಸೆಂಟರ್‌ಗೆ ಹೋಗಿಲ್ಲ, ಸಿಲಬಸ್‌ಗೆ ಅನುಗುಣವಾಗಿ ಹಳೆಯ ಪ್ರಶ್ನೆ ಪತ್ರಿಕೆಗಳು, ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯುಕ್ತವಾದ ಪುಸ್ತಕಗಳನ್ನು ಓದುತ್ತಿದ್ದೆ. ನಿತ್ಯವೂ ೬ ಗಂಟೆಗಳ ಕಾಲ ಓದಿಗೆ ಮೀಸಲಿಟ್ಟಿದ್ದೆ. ಇದೇ ನನ್ನನ್ನು ಶಿಕ್ಷಕಿಯನ್ನಾಗಿ ಮಾಡಿದೆ. ಈ ಲೆಕ್ಕದಲ್ಲಿ ನನಗೆ ನಾನೇ ಸ್ಫೂರ್ತಿ.


ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ನೀರಮಾನವಿ ಗ್ರಾಮದ ಪೂಜಾ ಬಿಎಡ್, ಎಂಎ ಮಾಡಿದ್ದಾರೆ. ಹುಟ್ಟುತ್ತಾ ಗಂಡಾಗಿ, ೫ನೇ ತರಗತಿಗೆ ಬರುವಷ್ಟರಲ್ಲಿ ಹೆಣ್ಣಿನ ಗುಣ ಲಕ್ಷಣಗಳನ್ನು ಹೊಂದಿದ ಪೂಜಾ ಎದುರಾದ ಹೀಯಾಳಿಕೆಗಳನ್ನೇ ಸವಾಲಾಗಿ ಸ್ವೀಕಾರ ಮಾಡಿ ಈ ಹಂತಕ್ಕೆ ಬಂದಿದ್ದಾರೆ. ಮೊದಲ ಬಾರಿಗೇ ಪರೀಕ್ಷೆ ಬರೆದು ಪಾಸ್ ಮಾಡಿದ್ದಾರೆ.


 ಮಂಗಳಮುಖಿಯರು ಹಲವಾರು ಸವಾಲುಗಳ ನಡುವೆ ಶಿಕ್ಷಣ ಪಡೆದು ಸಾಧನೆ ಮಾಡಿರುವುದು ಖುಷಿ ತಂದಿದೆ. ಸಮಾಜದಲ್ಲಿ ಇದು ಉತ್ತಮ ಬದಲಾವಣೆ. ತೃತಿಯ ಲಿಂಗಿಗಳ ಆಸಕ್ತಿಗೆ ಅನುಗುಣವಾಗಿ ಸಮಾಜ ಸಹಕಾರ ನೀಡಬೇಕು. ಈಗ ಶಿಕ್ಷಕರಾಗಿ ಆಯ್ಕೆಯಾಗಿರುವವರು ನಮ್ಮ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. -ಪ್ರಣತಿ ಪ್ರಕಾಶ್, ಅಧ್ಯಕ್ಷರು, ಲೈಂಗಿಕ ಅಲ್ಪಸಂಖ್ಯಾತರ ಘಟಕ, ಮೈಸೂರು ಗ್ರಾಮಾಂತರ ಕಾಂಗ್ರೆಸ್ ವಿಭಾಗ

ಶಿಕ್ಷಕರಾಗಿ ಆಯ್ಕೆಯಾಗಿರುವ ತೃತೀಯ ಲಿಂಗಿಗಳ ಮೇಲೆ ಜವಾಬ್ದಾರಿ ಹೆಚ್ಚಿದೆ. ಮಕ್ಕಳು, ಸಹೋದ್ಯೋಗಿಗಳು, ಪೋಷಕರು ಮುಂದೆ ಇವರನ್ನು ಹೇಗೆ ನೋಡುತ್ತಾರೆ ಎನ್ನುವುದೂ ಮುಖ್ಯವಾಗುತ್ತದೆ. ಉತ್ತಮ ಓದಿನಿಂದ ಉತ್ತಮ ಹಂತಕ್ಕೆ ತಲುಪಲು ಸಾಧ್ಯವಾಗುತ್ತದೆ ಎಂಬುದನ್ನು ಇವರು ತೋರಿಸಿದ್ದಾರೆ. ಇದು ಇತರ ಅಲ್ಪಸಂಖ್ಯಾತರ ಮನೋಬಲ ಹೆಚ್ಚಿಸಲಿದೆ. – ಅಕ್ಕಯ್‌ ಪದ್ಮಶಾಲಿ, ಸಾವಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿ

ಸರ್ಕಾರಿ ಉದ್ಯೋಗದಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಬೇಕು ಎನ್ನುವ ಹೋರಾಟ ನಮ್ಮದಾಗಿತ್ತು. ಅದು ಈಗ ಈಡೇರುತ್ತಿದೆ. ಇದರ ಪ್ರಯೋಜನ ಪಡೆದು ಶಿಕ್ಷಕರಾಗಿರುವವರು ಉತ್ತಮ ಸಾಧನೆ ಮಾಡಬೇಕು. ಈ ಮೂಲಕ ಬೇರೆ ಬೇರೆ ಇಲಾಖೆಗಳಲ್ಲಿಯೂ ತೃತೀಯ ಲಿಂಗಿಗಳಿಗೆ ಅವಕಾಶ ಸಿಗುವಂತೆ ನೋಡಿಕೊಳ್ಳಬೇಕು. – ನಿಶಾ ಗುಲೂರು, ನಿರ್ದೇಶಕರು, ಸಂಗಮ ಸಂಸ್ಥೆ

andolana

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago