ಆಂದೋಲನ ಪುರವಣಿ

ಈ ಮನವೇಕೊ ಬಯಸಿದೇ ನಿನ್ನನ್ನೆ

ಗೋಪಾಲಸ್ವಾಮಿ ಬೆಟ್ಟದ ಕಡೆಗೆ ಪ್ರಯಾಣ

ಮನಸ್ಸು ಮತ್ತೆ ಮತ್ತೆ ನಿನ್ನನೇ ಬೇಡಿದೆ. ಎಷ್ಟು ಬೇಗ ನಿನ್ನೊಡಲ ಸೇರಿ ತಣ್ಣಗೆ ಮಲಗಲಿ ಎನ್ನಿಸುತ್ತಿದೆ. ಹೀಗೆಲ್ಲಾ ಹೇಳಿದ ತಕ್ಷಣ ವಿವಿಧ ಭಾವಗಳು ಮೂಡುವುದು ಸಹಜ. ಅದಕ್ಕೆ ಮೊದಲೇ ಬ್ರೇಕ್ ಹಾಕಬೇಕು ಎಂದೇ ನಾನು ಹೇಳುತ್ತಿರುವುದು ಚಾರಣದ ಬಗ್ಗೆ ಎಂದು ಖಚಿತಪಡಿಸುತ್ತೇನೆ.
ತಿಂಗಳಿಗೆ ಒಮ್ಮೆಯಾದರೂ ಗೆಳೆಯರೊಡನೆಯೊ, ಏಕಾಂಗಿಯಾಗಿಯೋ ಚಾರಣ ಹೋಗಬೇಕು, ಬೆಟ್ಟ ಹತ್ತಿ ಇಳಿಯಬೇಕು, ಗಾಳಿಗೆ ಮೈ ಒಡ್ಡಿ, ಹಸಿರ ರಾಶಿಯನ್ನು ಕಣ್ಣಿಗೆ ತುಂಬಬೇಕು. ಇಲ್ಲದೇ ಇದ್ದರೆ ಮನಸ್ಸು ಮತ್ತೆ ಮತ್ತೆ ತಿವಿಯುತ್ತಲೇ ಇರುತ್ತದೆ. ಜೇಬಿನ ತೂಕ, ಕಷ್ಟ, ನಷ್ಟಗಳ, ಕಮೀಟ್ ಮೆಂಟ್ ಗಳ ಗೊಡವೆ ಅದಕ್ಕೆ ಬೇಕಿಲ್ಲ. ಚಂದದ ಚಾರಣ ಒಂದು ದೊರೆತರೆ ಮುಂದಿನ ದಿನಗಳೆಲ್ಲಾ ಹರುಷಮಯ. ಇದೊಂದು ರೀತಿಯ ರೀಫ್ರೆಶ್ಮೆಂಟ್.

ಹಿಂದೆ ಹತ್ತಾರ ಬಾರಿ ವಿವಿಧ ಸ್ಥಳಗಳಿಗೆ ಚಾರಣ ಹೋಗಿದ್ದೇನೆ. ಒಮ್ಮೊಮ್ಮೆ ಒಬ್ಬನೇ, ಕೆಲವೊಮ್ಮೆ ಗೆಳೆಯರು, ಫ್ಯಾಮಿಲಿ ಜೊತೆಗೆ. ಒಂದೊಂದೂ ರೋಚಕ ಅನುಭವ. ಕೆಲವರಲ್ಲಿ ಕಹಿಯೂ ಇದೆ. ಆದರೆ ಒಟ್ಟಾಗಿ ಸೇರಿಸಿ ಅರೆದರೆ ಅದೊಂದು ರಸಪಾಕವೇ ಸೈ. ಅದಕ್ಕಾಗಿಯೇ ಬೆಟ್ಟ ಸುತ್ತುವುದು, ಕಾಡಲ್ಲಿ ಅಲೆಯುವುದು, ನೀರ ತಟದಲ್ಲಿ ಮೌನವಾಗಿ ಕೂತುಬಿಡುವುದು ನನಗೆ ಇಷ್ಟ. ಈ ಇಷ್ಟಕ್ಕಾಗಿಯೇ ಮನ ತುಡಿಯುವುದು. ಸಂತೋಷದ ಕಡೆಗೆ ಜೀವ ಜೀಕುವುದು ಎಂದರೆ ಇದೆನಾ? ಎಂದು ಹಲವಾರು ಬಾರಿ ಅನ್ನಿಸಿದೆ. ಅದು ನಿಜವೋ ಸುಳ್ಳೋ ಆದರೆ ನನ್ನ ಪಾಲಿಗೆ ಬರಿದಾದ ಬ್ಯಾಟರಿಗೆ ಕಾಡು, ಮೇಡು ಜಾರ್ಜಿಂಗ್ ಪಾಯಿಂಟ್.

ಈಗ ತಿಂಗಳು ತುಂಬುತ್ತಾ ಬಂದಿದೆ ಕಡೆಯ ಸಾವನದುರ್ಗದ ಚಾರಣಕ್ಕೆ‌. ಮುಂದೆ ಎಲ್ಲಿಗೆ ಹೋಗಬೇಕು ಎನ್ನುವ ಪಟ್ಟಿಯಲ್ಲಿ ನೂರಾರು ಸ್ಥಳಗಳಿವೆ. ಆದರೆ ಈ ಮಳೆಗಾಲದಲ್ಲಿ ಎಲ್ಲೆಲ್ಲೊ ಪ್ಲ್ಯಾನ್ ಬೇಡ ಎಂಬುದು ಕುಟುಂಬದವರ, ಸ್ನೇಹಿತರ ಸಲಹೆ. ಅದಕ್ಕಾಗಿಯೇ ನಾನು ಅಳೆದು ತೂಗಿ ಚಾಮರಾಜನಗರದ, ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗುವ ಮನಸ್ಸು ಮಾಡಿರುವೆ. ಅಲ್ಲಿ ಚಾರಣಕ್ಕೆ ಅವಕಾಶ ಇಲ್ಲ. ಸರ್ಕಾರಿ ಬಸ್ಸಿನಲ್ಲೇ ಬೆಟ್ಟಕ್ಕೆ ಹೋಗಬೇಕು ಎಂಬುದು ಗೊತ್ತಿದೆ. ಅದು ಸಣ್ಣ ಬೇಸರ. ಆದರೂ ಹೊಸ ಅನುಭವ ಇರಲಿ ಅಲ್ಲವೇ. ಬಸ್ಸಿನಲ್ಲಿಯೇ ಬೆಟ್ಟವೇರಿದರೂ ಬೆಟ್ಟದ ತುದಿಯಲ್ಲಿನ ತಂಪು, ಹಿತವಾದ ಗಾಳಿ, ಹಸಿರು ಹೊದ್ದ ಬೆಟ್ಟಗಳನ್ನು ಎಷ್ಟೊತ್ತಿಗೆ ನೋಡಲಿ ಎನ್ನುವ ತವಕ. ಅದೃಷ್ಟವಿದ್ದರೆ ಜಿಂಕೆ, ಆನೆಗಳ ಹಿಂಡು ಕಾಣುತ್ತವೆಯಂತೆ. ಆ ಅದೃಷ್ಟ ನನ್ನದಾಗಲಿ. ಹಿಮವನ್ನೇ ಹೊದ್ದಿರುವ ಗೋಪಾಲಸ್ವಾಮಿ ಮೈ ಮೇಲಿನ ಹಿಮ ನನ್ನನ್ನೂ ತುಸು ಸ್ಪರ್ಶಿಸಲಿ ಎನ್ನುವ ತುಡಿತ.

– ದೀಕ್ಷಿತ್ ಬಿ.ಎಸ್., ಎಸ್.ಬಿ.ಎಂ.ಲೇಔಟ್, ಮೈಸೂರು

andolanait

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

7 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

7 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

7 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

7 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

7 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

7 hours ago