ಆಂದೋಲನ ಪುರವಣಿ

ಈ ಮನವೇಕೊ ಬಯಸಿದೇ ನಿನ್ನನ್ನೆ

ಗೋಪಾಲಸ್ವಾಮಿ ಬೆಟ್ಟದ ಕಡೆಗೆ ಪ್ರಯಾಣ

ಮನಸ್ಸು ಮತ್ತೆ ಮತ್ತೆ ನಿನ್ನನೇ ಬೇಡಿದೆ. ಎಷ್ಟು ಬೇಗ ನಿನ್ನೊಡಲ ಸೇರಿ ತಣ್ಣಗೆ ಮಲಗಲಿ ಎನ್ನಿಸುತ್ತಿದೆ. ಹೀಗೆಲ್ಲಾ ಹೇಳಿದ ತಕ್ಷಣ ವಿವಿಧ ಭಾವಗಳು ಮೂಡುವುದು ಸಹಜ. ಅದಕ್ಕೆ ಮೊದಲೇ ಬ್ರೇಕ್ ಹಾಕಬೇಕು ಎಂದೇ ನಾನು ಹೇಳುತ್ತಿರುವುದು ಚಾರಣದ ಬಗ್ಗೆ ಎಂದು ಖಚಿತಪಡಿಸುತ್ತೇನೆ.
ತಿಂಗಳಿಗೆ ಒಮ್ಮೆಯಾದರೂ ಗೆಳೆಯರೊಡನೆಯೊ, ಏಕಾಂಗಿಯಾಗಿಯೋ ಚಾರಣ ಹೋಗಬೇಕು, ಬೆಟ್ಟ ಹತ್ತಿ ಇಳಿಯಬೇಕು, ಗಾಳಿಗೆ ಮೈ ಒಡ್ಡಿ, ಹಸಿರ ರಾಶಿಯನ್ನು ಕಣ್ಣಿಗೆ ತುಂಬಬೇಕು. ಇಲ್ಲದೇ ಇದ್ದರೆ ಮನಸ್ಸು ಮತ್ತೆ ಮತ್ತೆ ತಿವಿಯುತ್ತಲೇ ಇರುತ್ತದೆ. ಜೇಬಿನ ತೂಕ, ಕಷ್ಟ, ನಷ್ಟಗಳ, ಕಮೀಟ್ ಮೆಂಟ್ ಗಳ ಗೊಡವೆ ಅದಕ್ಕೆ ಬೇಕಿಲ್ಲ. ಚಂದದ ಚಾರಣ ಒಂದು ದೊರೆತರೆ ಮುಂದಿನ ದಿನಗಳೆಲ್ಲಾ ಹರುಷಮಯ. ಇದೊಂದು ರೀತಿಯ ರೀಫ್ರೆಶ್ಮೆಂಟ್.

ಹಿಂದೆ ಹತ್ತಾರ ಬಾರಿ ವಿವಿಧ ಸ್ಥಳಗಳಿಗೆ ಚಾರಣ ಹೋಗಿದ್ದೇನೆ. ಒಮ್ಮೊಮ್ಮೆ ಒಬ್ಬನೇ, ಕೆಲವೊಮ್ಮೆ ಗೆಳೆಯರು, ಫ್ಯಾಮಿಲಿ ಜೊತೆಗೆ. ಒಂದೊಂದೂ ರೋಚಕ ಅನುಭವ. ಕೆಲವರಲ್ಲಿ ಕಹಿಯೂ ಇದೆ. ಆದರೆ ಒಟ್ಟಾಗಿ ಸೇರಿಸಿ ಅರೆದರೆ ಅದೊಂದು ರಸಪಾಕವೇ ಸೈ. ಅದಕ್ಕಾಗಿಯೇ ಬೆಟ್ಟ ಸುತ್ತುವುದು, ಕಾಡಲ್ಲಿ ಅಲೆಯುವುದು, ನೀರ ತಟದಲ್ಲಿ ಮೌನವಾಗಿ ಕೂತುಬಿಡುವುದು ನನಗೆ ಇಷ್ಟ. ಈ ಇಷ್ಟಕ್ಕಾಗಿಯೇ ಮನ ತುಡಿಯುವುದು. ಸಂತೋಷದ ಕಡೆಗೆ ಜೀವ ಜೀಕುವುದು ಎಂದರೆ ಇದೆನಾ? ಎಂದು ಹಲವಾರು ಬಾರಿ ಅನ್ನಿಸಿದೆ. ಅದು ನಿಜವೋ ಸುಳ್ಳೋ ಆದರೆ ನನ್ನ ಪಾಲಿಗೆ ಬರಿದಾದ ಬ್ಯಾಟರಿಗೆ ಕಾಡು, ಮೇಡು ಜಾರ್ಜಿಂಗ್ ಪಾಯಿಂಟ್.

ಈಗ ತಿಂಗಳು ತುಂಬುತ್ತಾ ಬಂದಿದೆ ಕಡೆಯ ಸಾವನದುರ್ಗದ ಚಾರಣಕ್ಕೆ‌. ಮುಂದೆ ಎಲ್ಲಿಗೆ ಹೋಗಬೇಕು ಎನ್ನುವ ಪಟ್ಟಿಯಲ್ಲಿ ನೂರಾರು ಸ್ಥಳಗಳಿವೆ. ಆದರೆ ಈ ಮಳೆಗಾಲದಲ್ಲಿ ಎಲ್ಲೆಲ್ಲೊ ಪ್ಲ್ಯಾನ್ ಬೇಡ ಎಂಬುದು ಕುಟುಂಬದವರ, ಸ್ನೇಹಿತರ ಸಲಹೆ. ಅದಕ್ಕಾಗಿಯೇ ನಾನು ಅಳೆದು ತೂಗಿ ಚಾಮರಾಜನಗರದ, ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗುವ ಮನಸ್ಸು ಮಾಡಿರುವೆ. ಅಲ್ಲಿ ಚಾರಣಕ್ಕೆ ಅವಕಾಶ ಇಲ್ಲ. ಸರ್ಕಾರಿ ಬಸ್ಸಿನಲ್ಲೇ ಬೆಟ್ಟಕ್ಕೆ ಹೋಗಬೇಕು ಎಂಬುದು ಗೊತ್ತಿದೆ. ಅದು ಸಣ್ಣ ಬೇಸರ. ಆದರೂ ಹೊಸ ಅನುಭವ ಇರಲಿ ಅಲ್ಲವೇ. ಬಸ್ಸಿನಲ್ಲಿಯೇ ಬೆಟ್ಟವೇರಿದರೂ ಬೆಟ್ಟದ ತುದಿಯಲ್ಲಿನ ತಂಪು, ಹಿತವಾದ ಗಾಳಿ, ಹಸಿರು ಹೊದ್ದ ಬೆಟ್ಟಗಳನ್ನು ಎಷ್ಟೊತ್ತಿಗೆ ನೋಡಲಿ ಎನ್ನುವ ತವಕ. ಅದೃಷ್ಟವಿದ್ದರೆ ಜಿಂಕೆ, ಆನೆಗಳ ಹಿಂಡು ಕಾಣುತ್ತವೆಯಂತೆ. ಆ ಅದೃಷ್ಟ ನನ್ನದಾಗಲಿ. ಹಿಮವನ್ನೇ ಹೊದ್ದಿರುವ ಗೋಪಾಲಸ್ವಾಮಿ ಮೈ ಮೇಲಿನ ಹಿಮ ನನ್ನನ್ನೂ ತುಸು ಸ್ಪರ್ಶಿಸಲಿ ಎನ್ನುವ ತುಡಿತ.

– ದೀಕ್ಷಿತ್ ಬಿ.ಎಸ್., ಎಸ್.ಬಿ.ಎಂ.ಲೇಔಟ್, ಮೈಸೂರು

andolanait

Recent Posts

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

7 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

8 hours ago

ಲಕ್ನೋ: ನಿರ್ಮಾಣ ಹಂತದ ಸೇತುವೆ ಕುಸಿದು 6 ಕಾರ್ಮಿಕರು ಸಾವು

ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…

9 hours ago