ಮಂಡ್ಯ ಪಕ್ಕದ ಬಸರಾಳಿನ ಕಾಲೇಜು ಬೀದಿಯಲ್ಲಿ ಬದುಕುತ್ತಿರುವ ತಂಬೂರಿ ಜವರಯ್ಯನವರಿಗೆ ಈಗ ೮೨ ವರ್ಷ. ಅರವತ್ತು ವರ್ಷಗಳ ಹಿಂದೆ ಅವರನ್ನು ಪತಿಪುರುಷನೆಂದು ಸ್ವೀಕರಿಸಿದ ಮಡದಿ ಬೋರಮ್ಮನವರಿಗೆ ೭೭ ವರ್ಷ. ಇವರಿಬ್ಬರು ಸೇರಿ ತಂಬೂರಿ ಪದ ಹಾಡುತ್ತಾ ದೇಶಾಟನೆ, ಭಿಕ್ಷಾಟನೆ ಗೈಯಲು ತೊಡಗಿ ಹತ್ತಿರ ಹತ್ತಿರ ೫೦ ವರ್ಷ. ಒಂದು ಕಾಲದಲ್ಲಿ ಕೋಳಿಮೊಟ್ಟೆ ಮಾರುತ್ತಾ, ತಿಗಣೆ ಔಷಧಿ ಹೊಡೆಯುತ್ತಾ ಊರೂರು ತಿರುಗುತ್ತಾ ಓಡಾಡುತ್ತಿದ್ದ ಜವರಯ್ಯನವರ ಮಾಮೂಲಿ ಜೀವನದ ಒಂದು ದೊಡ್ಡ ಘಟನೆ ನಾಗಮಂಗಲ ತಾಲ್ಲೂಕು ಮದ್ದನಟ್ಟಿಯ ಯುವತಿ ಬೋರಮ್ಮಳನ್ನು ಮದುವೆ ಆಗಿದ್ದು. ಇನ್ನೊಂದು ಹೊಳೆ ನರಸೀಪುರ ಬಳಿಯ ಬಂಟ್ ಶೆಟ್ಟಳ್ಳಿ ರುದ್ರಮುನಿ ಸ್ವಾಮಿಯವರಿಂದ ಗುರು ದೀಕ್ಷೆ ಪಡೆದು ಹಾಡಲು ತೊಡಗಿದ್ದು. ಇವೆರಡಕ್ಕಿಂತ ಬಹಳ ದೊಡ್ಡ ಘಟನೆ ರಾಜ್ಯೋತ್ಸವ ಪ್ರಶಸ್ತಿ ಬಂದ ಹಣದಲ್ಲಿ ಸೋರುತ್ತಿದ್ದ ಮನೆಯ ದುರಸ್ತಿ ಮಾಡಿದ್ದು ಮತ್ತು ಮಡದಿ ಬೋರಮ್ಮನಿಗೆ ಚಿನ್ನದ ಓಲೆ ಮಾಡಿಕೊಟ್ಟಿದ್ದು.
ಬಡತನ ಬಡತನವೇ ಅಲ್ಲ. ಹಸಿವು ಹಸಿವೇ ಅಲ್ಲ ಎಂದು ಹಾಡುತ್ತ ಬದುಕುತ್ತಿರುವ ಈ ತತ್ವಪದದ ಜೋಡಿಗೆ ಯಾರಾದರೂ ಹಾಡುಕೇಳಿ ನಾಲ್ಕು ಒಳ್ಳೆ ಮಾತನಾಡಿದರೆ ಅದೇ ಸಂತೋಷ. ಒಳ್ಳೆ ಮಾತನಾಡಿ ಸಹಾಯವನ್ನೂ ನೀಡಿದರೆ ಅದೇ ಆ ಹೊತ್ತಿನ ಆಹಾರ.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…