ಮಂಡ್ಯ ಪಕ್ಕದ ಬಸರಾಳಿನ ಕಾಲೇಜು ಬೀದಿಯಲ್ಲಿ ಬದುಕುತ್ತಿರುವ ತಂಬೂರಿ ಜವರಯ್ಯನವರಿಗೆ ಈಗ ೮೨ ವರ್ಷ. ಅರವತ್ತು ವರ್ಷಗಳ ಹಿಂದೆ ಅವರನ್ನು ಪತಿಪುರುಷನೆಂದು ಸ್ವೀಕರಿಸಿದ ಮಡದಿ ಬೋರಮ್ಮನವರಿಗೆ ೭೭ ವರ್ಷ. ಇವರಿಬ್ಬರು ಸೇರಿ ತಂಬೂರಿ ಪದ ಹಾಡುತ್ತಾ ದೇಶಾಟನೆ, ಭಿಕ್ಷಾಟನೆ ಗೈಯಲು ತೊಡಗಿ ಹತ್ತಿರ ಹತ್ತಿರ ೫೦ ವರ್ಷ. ಒಂದು ಕಾಲದಲ್ಲಿ ಕೋಳಿಮೊಟ್ಟೆ ಮಾರುತ್ತಾ, ತಿಗಣೆ ಔಷಧಿ ಹೊಡೆಯುತ್ತಾ ಊರೂರು ತಿರುಗುತ್ತಾ ಓಡಾಡುತ್ತಿದ್ದ ಜವರಯ್ಯನವರ ಮಾಮೂಲಿ ಜೀವನದ ಒಂದು ದೊಡ್ಡ ಘಟನೆ ನಾಗಮಂಗಲ ತಾಲ್ಲೂಕು ಮದ್ದನಟ್ಟಿಯ ಯುವತಿ ಬೋರಮ್ಮಳನ್ನು ಮದುವೆ ಆಗಿದ್ದು. ಇನ್ನೊಂದು ಹೊಳೆ ನರಸೀಪುರ ಬಳಿಯ ಬಂಟ್ ಶೆಟ್ಟಳ್ಳಿ ರುದ್ರಮುನಿ ಸ್ವಾಮಿಯವರಿಂದ ಗುರು ದೀಕ್ಷೆ ಪಡೆದು ಹಾಡಲು ತೊಡಗಿದ್ದು. ಇವೆರಡಕ್ಕಿಂತ ಬಹಳ ದೊಡ್ಡ ಘಟನೆ ರಾಜ್ಯೋತ್ಸವ ಪ್ರಶಸ್ತಿ ಬಂದ ಹಣದಲ್ಲಿ ಸೋರುತ್ತಿದ್ದ ಮನೆಯ ದುರಸ್ತಿ ಮಾಡಿದ್ದು ಮತ್ತು ಮಡದಿ ಬೋರಮ್ಮನಿಗೆ ಚಿನ್ನದ ಓಲೆ ಮಾಡಿಕೊಟ್ಟಿದ್ದು.
ಬಡತನ ಬಡತನವೇ ಅಲ್ಲ. ಹಸಿವು ಹಸಿವೇ ಅಲ್ಲ ಎಂದು ಹಾಡುತ್ತ ಬದುಕುತ್ತಿರುವ ಈ ತತ್ವಪದದ ಜೋಡಿಗೆ ಯಾರಾದರೂ ಹಾಡುಕೇಳಿ ನಾಲ್ಕು ಒಳ್ಳೆ ಮಾತನಾಡಿದರೆ ಅದೇ ಸಂತೋಷ. ಒಳ್ಳೆ ಮಾತನಾಡಿ ಸಹಾಯವನ್ನೂ ನೀಡಿದರೆ ಅದೇ ಆ ಹೊತ್ತಿನ ಆಹಾರ.
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…