ಮಂಡ್ಯ ಪಕ್ಕದ ಬಸರಾಳಿನ ಕಾಲೇಜು ಬೀದಿಯಲ್ಲಿ ಬದುಕುತ್ತಿರುವ ತಂಬೂರಿ ಜವರಯ್ಯನವರಿಗೆ ಈಗ ೮೨ ವರ್ಷ. ಅರವತ್ತು ವರ್ಷಗಳ ಹಿಂದೆ ಅವರನ್ನು ಪತಿಪುರುಷನೆಂದು ಸ್ವೀಕರಿಸಿದ ಮಡದಿ ಬೋರಮ್ಮನವರಿಗೆ ೭೭ ವರ್ಷ. ಇವರಿಬ್ಬರು ಸೇರಿ ತಂಬೂರಿ ಪದ ಹಾಡುತ್ತಾ ದೇಶಾಟನೆ, ಭಿಕ್ಷಾಟನೆ ಗೈಯಲು ತೊಡಗಿ ಹತ್ತಿರ ಹತ್ತಿರ ೫೦ ವರ್ಷ. ಒಂದು ಕಾಲದಲ್ಲಿ ಕೋಳಿಮೊಟ್ಟೆ ಮಾರುತ್ತಾ, ತಿಗಣೆ ಔಷಧಿ ಹೊಡೆಯುತ್ತಾ ಊರೂರು ತಿರುಗುತ್ತಾ ಓಡಾಡುತ್ತಿದ್ದ ಜವರಯ್ಯನವರ ಮಾಮೂಲಿ ಜೀವನದ ಒಂದು ದೊಡ್ಡ ಘಟನೆ ನಾಗಮಂಗಲ ತಾಲ್ಲೂಕು ಮದ್ದನಟ್ಟಿಯ ಯುವತಿ ಬೋರಮ್ಮಳನ್ನು ಮದುವೆ ಆಗಿದ್ದು. ಇನ್ನೊಂದು ಹೊಳೆ ನರಸೀಪುರ ಬಳಿಯ ಬಂಟ್ ಶೆಟ್ಟಳ್ಳಿ ರುದ್ರಮುನಿ ಸ್ವಾಮಿಯವರಿಂದ ಗುರು ದೀಕ್ಷೆ ಪಡೆದು ಹಾಡಲು ತೊಡಗಿದ್ದು. ಇವೆರಡಕ್ಕಿಂತ ಬಹಳ ದೊಡ್ಡ ಘಟನೆ ರಾಜ್ಯೋತ್ಸವ ಪ್ರಶಸ್ತಿ ಬಂದ ಹಣದಲ್ಲಿ ಸೋರುತ್ತಿದ್ದ ಮನೆಯ ದುರಸ್ತಿ ಮಾಡಿದ್ದು ಮತ್ತು ಮಡದಿ ಬೋರಮ್ಮನಿಗೆ ಚಿನ್ನದ ಓಲೆ ಮಾಡಿಕೊಟ್ಟಿದ್ದು.
ಬಡತನ ಬಡತನವೇ ಅಲ್ಲ. ಹಸಿವು ಹಸಿವೇ ಅಲ್ಲ ಎಂದು ಹಾಡುತ್ತ ಬದುಕುತ್ತಿರುವ ಈ ತತ್ವಪದದ ಜೋಡಿಗೆ ಯಾರಾದರೂ ಹಾಡುಕೇಳಿ ನಾಲ್ಕು ಒಳ್ಳೆ ಮಾತನಾಡಿದರೆ ಅದೇ ಸಂತೋಷ. ಒಳ್ಳೆ ಮಾತನಾಡಿ ಸಹಾಯವನ್ನೂ ನೀಡಿದರೆ ಅದೇ ಆ ಹೊತ್ತಿನ ಆಹಾರ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…