ಮಂಡ್ಯ ಪಕ್ಕದ ಬಸರಾಳಿನ ಕಾಲೇಜು ಬೀದಿಯಲ್ಲಿ ಬದುಕುತ್ತಿರುವ ತಂಬೂರಿ ಜವರಯ್ಯನವರಿಗೆ ಈಗ ೮೨ ವರ್ಷ. ಅರವತ್ತು ವರ್ಷಗಳ ಹಿಂದೆ ಅವರನ್ನು ಪತಿಪುರುಷನೆಂದು ಸ್ವೀಕರಿಸಿದ ಮಡದಿ ಬೋರಮ್ಮನವರಿಗೆ ೭೭ ವರ್ಷ. ಇವರಿಬ್ಬರು ಸೇರಿ ತಂಬೂರಿ ಪದ ಹಾಡುತ್ತಾ ದೇಶಾಟನೆ, ಭಿಕ್ಷಾಟನೆ ಗೈಯಲು ತೊಡಗಿ ಹತ್ತಿರ ಹತ್ತಿರ ೫೦ ವರ್ಷ. ಒಂದು ಕಾಲದಲ್ಲಿ ಕೋಳಿಮೊಟ್ಟೆ ಮಾರುತ್ತಾ, ತಿಗಣೆ ಔಷಧಿ ಹೊಡೆಯುತ್ತಾ ಊರೂರು ತಿರುಗುತ್ತಾ ಓಡಾಡುತ್ತಿದ್ದ ಜವರಯ್ಯನವರ ಮಾಮೂಲಿ ಜೀವನದ ಒಂದು ದೊಡ್ಡ ಘಟನೆ ನಾಗಮಂಗಲ ತಾಲ್ಲೂಕು ಮದ್ದನಟ್ಟಿಯ ಯುವತಿ ಬೋರಮ್ಮಳನ್ನು ಮದುವೆ ಆಗಿದ್ದು. ಇನ್ನೊಂದು ಹೊಳೆ ನರಸೀಪುರ ಬಳಿಯ ಬಂಟ್ ಶೆಟ್ಟಳ್ಳಿ ರುದ್ರಮುನಿ ಸ್ವಾಮಿಯವರಿಂದ ಗುರು ದೀಕ್ಷೆ ಪಡೆದು ಹಾಡಲು ತೊಡಗಿದ್ದು. ಇವೆರಡಕ್ಕಿಂತ ಬಹಳ ದೊಡ್ಡ ಘಟನೆ ರಾಜ್ಯೋತ್ಸವ ಪ್ರಶಸ್ತಿ ಬಂದ ಹಣದಲ್ಲಿ ಸೋರುತ್ತಿದ್ದ ಮನೆಯ ದುರಸ್ತಿ ಮಾಡಿದ್ದು ಮತ್ತು ಮಡದಿ ಬೋರಮ್ಮನಿಗೆ ಚಿನ್ನದ ಓಲೆ ಮಾಡಿಕೊಟ್ಟಿದ್ದು.
ಬಡತನ ಬಡತನವೇ ಅಲ್ಲ. ಹಸಿವು ಹಸಿವೇ ಅಲ್ಲ ಎಂದು ಹಾಡುತ್ತ ಬದುಕುತ್ತಿರುವ ಈ ತತ್ವಪದದ ಜೋಡಿಗೆ ಯಾರಾದರೂ ಹಾಡುಕೇಳಿ ನಾಲ್ಕು ಒಳ್ಳೆ ಮಾತನಾಡಿದರೆ ಅದೇ ಸಂತೋಷ. ಒಳ್ಳೆ ಮಾತನಾಡಿ ಸಹಾಯವನ್ನೂ ನೀಡಿದರೆ ಅದೇ ಆ ಹೊತ್ತಿನ ಆಹಾರ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…