ಅನ್ನದಾತರ ಅಂಗಳ

ಕೃಷಿ ಕಾಯಕದಲ್ಲಿ ಹಾದನೂರಿನ ಪ್ರಕಾಶ್

ಓದಿದ್ದು ಬಿಎ ಪದವಿಯಾಗಿದ್ದರೂ ಕೃಷಿಯ ಮೇಲಿನ ವ್ಯಾಮೋಹದಿಂದ ಹುಟ್ಟೂರಿನಲ್ಲಿಯೇ ಉಳಿದು, ಬೇಸಾಯವನ್ನೇ ಉದ್ಯೋಗವಾಗಿಸಿಕೊಂಡು ಅದರಲ್ಲಿಯೇ ಉತ್ತಮ ಲಾಭ ಗಳಿಸುತ್ತ ಬದುಕುಕಟ್ಟಿಕೊಂಡು ಸಾಧಕ ಕೃಷಿಕ ಅನಿಸಿಕೊಂಡಿದ್ದಾರೆ ಹಾದನೂರು ಗ್ರಾಮದ ರೈತ ಪ್ರಕಾಶ್.

ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದ ರೈತ ಪ್ರಕಾಶ್ ವಿದ್ಯಾವಂತರಾಗಿದ್ದರೂ ನಗರಗಳತ್ತ ಹೋಗಿ ಉದ್ಯೋಗ ಹುಡುಕದೇ ತಮಗಿದ್ದ ಜಮೀನಿನಲ್ಲಿಯೇ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಕೃಷಿ ಮಾಡುತ್ತಾ ಮಾದರಿ ರೈತ ಎನಿಸಿಕೊಂಡಿದ್ದಾರೆ. ಹಾದನೂರು ಗ್ರಾಮವು ಕಾಡಂಚಿನ ಪ್ರದೇಶವಾದ್ದರಿಂದ ಇಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ರೈತರು ಬೆಳೆದ ಬೆಳೆಗಳ ಶೇ.50ರಷ್ಟು ಕಾಡುಪ್ರಾಣಿಗಳೇ ನಾಶ ಮಾಡಿಬಿಡುತ್ತವೆ. ಇವುಗಳನ್ನೆಲ್ಲ ಎದುರಿಸಿ ನಾವು ಬೆಳೆ ಬೆಳೆಯಬೇಕು. ಆಧುನಿಕ ಶೈಲಿಯಲ್ಲಿ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡರೆ ಎಲ್ಲವೂ ಸಾಧ್ಯ ಎನ್ನುತ್ತಾರೆ ರೈತ ಪ್ರಕಾಶ್.

ಪ್ರಕಾಶ್ ತಮ್ಮ 4 ಎಕರೆ 30 ಗುಂಟೆ ಜಮೀನಿನಲ್ಲಿ ಹತ್ತಿ ಬೆಳೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಮೆಣಸಿನಕಾಯಿ ಹಾಗೂ ರಾಗಿ ಬೆಳೆದಿದ್ದಾರೆ. ಕಳೆದ ಬಾರಿ ಮಳೆ ಕಡಿಮೆಯಾಗಿದ್ದರಿಂದ ಹತ್ತಿ ಬೆಳೆಯುವವರ ಸಂಖ್ಯೆಯೂ ಕಡಿಮೆಯಾಗಿದೆ. ಅಲ್ಲದೆ ನಮ್ಮ ಜಮೀನು ಕಾಡಿನ ಅಂಚಿನಲ್ಲಿಯೇ ಇರುವುದರಿಂದ ಕಾಡುಪ್ರಾಣಿಗಳ ಹಾವಳಿಯನ್ನು ತಪ್ಪಿಸಲು ಹತ್ತಿ ಮತ್ತು ಮೆಣಸಿನಕಾಯಿ ಹಾಗೂ ರಾಗಿಯನ್ನು ಬೆಳೆಯನ್ನು ಬೆಳೆಯುತ್ತಿದ್ದೇನೆ ಇದರಿಂದ ನನಗೆ ಲಾಭವಾಗಿದೆ ಎನ್ನುತ್ತಾರೆ ಪ್ರಕಾಶ್.

ಪ್ರಕಾಶ್ ಬಿ.ಎ. ವ್ಯಾಸಂಗ ಮಾಡಿದ್ದರೂ ಇತರೆ ಉದ್ಯೋಗಗಳಿಗೆ ಹೋಗದೆ, ತಮ್ಮ ತಂದೆಯ ಹಾದಿಯಲ್ಲಿ ಸಾಗಿದರು. ಅವರೊಂದಿಗೆ ಜಮೀನಿನಲ್ಲಿ ಕೆಲಸ ಮಾಡುತ್ತಾ ಕೃಷಿಯ ಬಗ್ಗೆ ಒಲವು ತೋರಿದರು. ಬಳಿಕ ತಂದೆಯ ನಂತರ ಈಗ ಕೃಷಿಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದು, ಉತ್ತಮ ಬದುಕುಕಟ್ಟಿಕೊಂಡಿದ್ದಾರೆ. ಆ ಮೂಲಕ ಕೃಷಿ ಬಿಟ್ಟು ನಗರಗಳತ್ತ ಮುಖ ಮಾಡುವ ಯುವಕರಿಗೆ ಮಾದರಿಯಾಗಿದ್ದಾರೆ. ಜಮೀನಿನಲ್ಲಿಯೇ ಕೊಳವೆ ಬಾವಿ ಇರುವುದರಿಂದ ಇವರು ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದು, ಆಧುನಿಕ ಶೈಲಿಯ ವ್ಯವಸಾಯ ಮಾಡುತ್ತಿದ್ದಾರೆ.

ಪತ್ನಿ, ತಾಯಿ, ತಮ್ಮ ಹಾಗೂ ತಮ್ಮನ ಹೆಂಡತಿಯೂ ಇವರೊಂದಿಗೆ ದುಡಿಯುವುದರಿಂದ ಒಟ್ಟಾಗಿ ದುಡಿದು ಉತ್ತಮ ಬದುಕು ನಡೆಸುತ್ತಿದ್ದಾರೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಈ ಬಾರಿಯೂ ಹತ್ತಿ, ಮೆಣಸಿನ ಕಾಯಿಯ ಜೊತೆಗೆ ಬಾಳೆ ಬೆಳೆಯನ್ನು ಬೆಳೆದಿದ್ದಾರೆ. ಈ ಬಾರಿಯೂ ಉತ್ತಮ ಫಲ ತೆಗೆಯುವ ನಿರೀಕ್ಷೆಯಲ್ಲಿದ್ದಾರೆ ಪ್ರಕಾಶ್. ಪ್ರಕಾಶ್‌ರವರಿಗೆ ಕೃಷಿಯೊಂದಿಗೆ ರಾಜಕೀಯದಲ್ಲಿಯೂ ಒಲವು ಇದ್ದು, 2 ಬಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಈ ಬಾರಿಯೂ ಹಾದನೂರು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿರುವ ಇವರು, ಗ್ರಾಮದ ಸೇವೆಯೊಂದಿಗೆ ಕೃಷಿಯಲ್ಲಿಯೂ ಶ್ರಮಿಸಿ ಉತ್ತಮ ಬದುಕು ಕಟ್ಟಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ.

ಇದರೊಂದಿಗೆ ನಮ್ಮದು ಕಾಡಂಚಿನ ಗ್ರಾಮವಾದ್ದರಿಂದ ಇಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚು. ಅವುಗಳಿಂದ ತಪ್ಪಿಸಿಕೊಂಡು ಕೃಷಿ ಮಾಡಬೇಕು. ಮಳೆ ಕಡಿಮೆ ಇದ್ದರಿಂದ ನಮ್ಮಲ್ಲಿ ಹತ್ತಿ ಬೆಳೆಯುವವರ ಸಂಖ್ಯೆಯೂ ಕಡಿಮೆಯಾಗಿತ್ತು. ಹೀಗಾಗಿ ಕೃಷಿ ಇಲಾಖೆಯೂ ರೈತರಿಗೆ ಹತ್ತಿ ಬೆಳೆಯುವ ಬಗ್ಗೆ ತರಬೇತಿ ನೀಡುವುದರೊಂದಿಗೆ ಪ್ರೋತ್ಸಾಹ ನೀಡಬೇಕು. ಪ್ರತಿ ತಾಲ್ಲೂಕಿನಲ್ಲಿ ಹತ್ತಿ ಮಾರುಕಟ್ಟೆ ಪ್ರಾರಂಭಿಸಬೇಕು. ಇದರಿಂದ ಮಧ್ಯ ವರ್ತಿಗಳ ಹಾವಳಿ ತಪ್ಪುತ್ತದೆ. -ಹಾದನೂರು ಪ್ರಕಾಶ್

ಅನಿಲ್‌ ಅಂತರಸಂತೆ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ವಾಸಿಸುತ್ತಿರುವ ನಾನು 2019ರಲ್ಲಿ ಮೈಸೂರಿನ ಮಾನಸಗಂಗೋತ್ರಿ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ನನ್ನ ವಿದ್ಯಾಭ್ಯಾಸದ ಬಳಿಕ ಮೈಸೂರಿನ 'ಆಂದೋಲನ' ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಇದರೊಂದಿಗೆ ನಾನು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕನಾಗಿದ್ದು, ದೇಶದ ವಿವಿಧ ಕಾಡುಗಳಲ್ಲಿ ಸಫಾರಿ ಮಾಡಿ ವನ್ಯಜೀವಿಗಳ ಛಾಯಾಚಿತ್ರ ಸೆರೆಹಿಡಿದು ಅವುಗಳ ಮೇಲೆ ಲೇಖನಗಳನ್ನು ಬರೆಯುವುದು, ಪ್ರವಾಸಿ ಲೇಖನಗಳನ್ನು ಬರೆಯುವುದು, ವನ್ಯಜೀವಿ ಸಂಬಂಧಿತ ಪುಸ್ತಕಗಳನ್ನು ಓದುವುದು ನನ್ನ ಹವ್ಯಾಸ.

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

10 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

12 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

13 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

14 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

16 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

16 hours ago