ಅನ್ನದಾತರ ಅಂಗಳ

ಗೃಹಲಕ್ಷ್ಮಿಯ ಕಾಸಿನಿಂದ ಬಂಗಾರದಂತಹ ಬೆಳೆ

ಸುತ್ತೂರು ನಂಜುಂಡ ನಾಯಕ

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ  ಯೋಜನೆಯಡಿ ನೀಡಲಾಗುವ ಮಾಸಿಕ ೨,೦೦೦ ರೂ.ಗಳನ್ನು ಕೃಷಿಗೆ ವಿನಿಯೋಗಿಸಿ ಬಂಗಾರದಂತಹ ಬೆಳೆ ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ ನಂಜನಗೂಡಿನ ಮೂಡಳ್ಳಿ ಗ್ರಾಮದ ರೈತ ದಂಪತಿ ಬಸವಣ್ಣ ಮತ್ತು ಚಂದ್ರಮ್ಮ.

ನಂಜನಗೂಡು ತಾಲ್ಲೂಕಿನ ಮೂಡಳ್ಳಿ ಗ್ರಾಮದ ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷಿ  ಯೋಜನೆಯಡಿ ನೀಡುವ ಮಾಸಿಕ ೨,೦೦೦ ರೂ.ಗಳನ್ನು ಕೂಡಿಟ್ಟುಕೊಂಡ ಅದನ್ನು ಕೃಷಿಗೆ ಬಳಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.

ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಹಾಗೂ ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಂಡಿದ್ದಾರೆ. ಯಾವುದೇ ರಾಸಾಯನಿಕವನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಪದ್ಧತಿ ಮೂಲಕ ಕೃಷಿ ಮಾಡುವ ಇವರು, ಗುಣಮಟ್ಟದ ಬೆಳೆ ಬೆಳೆದು ಉತ್ತಮ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸಿದ್ದಾರೆ.

ಕೊಟ್ಟಿಗೆ ಗೊಬ್ಬರವನ್ನೇ ಹೆಚ್ಚಾಗಿ ಬಳಸಿಕೊಂಡು ಬಾಳೆ, ಪಪ್ಪಾಯ, ತೊಗರಿ, ರಾಗಿ ಮುಂತಾದ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸುವತ್ತ ಹೆಜ್ಜೆ ಇಟ್ಟಿದ್ದು, ಮಾದರಿ ರೈತ ದಂಪತಿ ಎನಿಸಿಕೊಂಡಿದ್ದಾರೆ.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಬದುಕು ಉತ್ತಮಗೊಳ್ಳುತ್ತದೆ ಎಂಬುದಕ್ಕೆ ಈ ದಂಪತಿಯೇ ಸಾಕ್ಷಿಯಾಗಿದ್ದಾರೆ. ತಮ್ಮ ಪತ್ನಿಗೆ ಬರುವ ೨,೦೦೦ ರೂ.ಗಳನ್ನು ಕೃಷಿಗೆ ಬಂಡವಾಳವಾಗಿ ಬಳಸಿಕೊಂಡ ಬಸವಣ್ಣ ಈಗ ಕೃಷಿಯಲ್ಲಿ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸುವೆಡೆ ಮುಂದಡಿಯಿಟ್ಟು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ೫೦,೦೦೦ ರೂ.ಗಳನ್ನು ಖರ್ಚು ಮಾಡಿ ಕೃಷಿ ಕಾಯಕ ಆರಂಭಿಸಿದೆ. ಸಂಪೂರ್ಣ ಸಾವಯವ ಕೃಷಿ ಪದ್ಧತಿಯಾಗಿ ರುವುದರಿಂದ ಬೆಳೆ ಕೈಸೇರುವವರೆಗೆ ೬ ಲಕ್ಷ ರೂ. ಗಳ ಆದಾಯ ಬರುತ್ತದೆ ಎಂದು ನಂಬಿದ್ದೇವೆ.

ಕಾಂಗ್ರೆಸ್ ಸರ್ಕಾರದ ಈ ಯೋಜನೆಯು ರೈತಾಪಿಗಳಾದ ನಮ್ಮ ಬದುಕನ್ನು ರೂಪಿಸಿಕೊಳ್ಳುವಲ್ಲಿ ತುಂಬಾ ಸಹಕಾರಿಯಾಗಿದೆ. ಅಲ್ಲದೆ ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲವಾಗಿದೆ. ಎನ್ನುತ್ತಾರೆ ಈ ರೈತ ದಂಪತಿ. ಸರ್ಕಾರ ಇವರನ್ನು ಗುರುತಿಸಿ ಅಭಿನಂದಿಸಿದರೆ ಯೋಜನೆಯ ಫಲಾನುಭವಿಗಳಿಗೆ ಮತ್ತಷ್ಟು ಉತ್ಸಾಹ ಮೂಡುವುದಂತೂ ಸತ್ಯ. ಇವರ ಸಂಪರ್ಕ ಸಂಖ್ಯೆ ೯೫೯೧೦-೧೮೫೪೬

ನಮ್ಮ ಒಂದು ಎಕರೆ ಹೊಲದಲ್ಲಿ ಬಾಳೆ, ತೊಗರಿ, ಪಪ್ಪಾಯ ಬೆಳೆಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದಿದ್ದೇವೆ. ಅವುಗಳನ್ನು ನಮ್ಮ ಜಮೀನಿನಲ್ಲಿಯೇ ಮಾರಾಟ ಮಾಡುತ್ತೇವೆ. ಸಾವಯವ ಪದ್ಧತಿಯಾದ್ದರಿಂದ ಬೆಳೆಗಳನ್ನು ನಮ್ಮ ಜಮೀನಿಗೇ ಬಂದು ಖರೀದಿ ಮಾಡುತ್ತಾರೆ. ಇದರಿಂದ ಉತ್ತಮ ಆದಾಯ ಗಳಿಸಲು ಸಾಧ್ಯವಾಗಿದ್ದು, ನಮ್ಮ ಬದುಕು ಸುಂದರವಾಗಲು ಗೃಹಲಕ್ಷಿ  ಯೋಜನೆಯೇ ಕಾರಣ. ಆ ಯೋಜನೆಯಿಂದ ಬಂದ ಹಣವೇ ಈಗ ಕೃಷಿಗೆ ಬಂಡವಾಳ ಆಗಿದೆ.

-ಬಸವಣ್ಣ, ರೈತ

ಆಂದೋಲನ ಡೆಸ್ಕ್

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

4 hours ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

5 hours ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

5 hours ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

5 hours ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

5 hours ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

6 hours ago