ಅನ್ನದಾತರ ಅಂಗಳ

ಗೃಹಲಕ್ಷ್ಮಿಯ ಕಾಸಿನಿಂದ ಬಂಗಾರದಂತಹ ಬೆಳೆ

ಸುತ್ತೂರು ನಂಜುಂಡ ನಾಯಕ

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ  ಯೋಜನೆಯಡಿ ನೀಡಲಾಗುವ ಮಾಸಿಕ ೨,೦೦೦ ರೂ.ಗಳನ್ನು ಕೃಷಿಗೆ ವಿನಿಯೋಗಿಸಿ ಬಂಗಾರದಂತಹ ಬೆಳೆ ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ ನಂಜನಗೂಡಿನ ಮೂಡಳ್ಳಿ ಗ್ರಾಮದ ರೈತ ದಂಪತಿ ಬಸವಣ್ಣ ಮತ್ತು ಚಂದ್ರಮ್ಮ.

ನಂಜನಗೂಡು ತಾಲ್ಲೂಕಿನ ಮೂಡಳ್ಳಿ ಗ್ರಾಮದ ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷಿ  ಯೋಜನೆಯಡಿ ನೀಡುವ ಮಾಸಿಕ ೨,೦೦೦ ರೂ.ಗಳನ್ನು ಕೂಡಿಟ್ಟುಕೊಂಡ ಅದನ್ನು ಕೃಷಿಗೆ ಬಳಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.

ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಹಾಗೂ ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಂಡಿದ್ದಾರೆ. ಯಾವುದೇ ರಾಸಾಯನಿಕವನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಪದ್ಧತಿ ಮೂಲಕ ಕೃಷಿ ಮಾಡುವ ಇವರು, ಗುಣಮಟ್ಟದ ಬೆಳೆ ಬೆಳೆದು ಉತ್ತಮ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸಿದ್ದಾರೆ.

ಕೊಟ್ಟಿಗೆ ಗೊಬ್ಬರವನ್ನೇ ಹೆಚ್ಚಾಗಿ ಬಳಸಿಕೊಂಡು ಬಾಳೆ, ಪಪ್ಪಾಯ, ತೊಗರಿ, ರಾಗಿ ಮುಂತಾದ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸುವತ್ತ ಹೆಜ್ಜೆ ಇಟ್ಟಿದ್ದು, ಮಾದರಿ ರೈತ ದಂಪತಿ ಎನಿಸಿಕೊಂಡಿದ್ದಾರೆ.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಬದುಕು ಉತ್ತಮಗೊಳ್ಳುತ್ತದೆ ಎಂಬುದಕ್ಕೆ ಈ ದಂಪತಿಯೇ ಸಾಕ್ಷಿಯಾಗಿದ್ದಾರೆ. ತಮ್ಮ ಪತ್ನಿಗೆ ಬರುವ ೨,೦೦೦ ರೂ.ಗಳನ್ನು ಕೃಷಿಗೆ ಬಂಡವಾಳವಾಗಿ ಬಳಸಿಕೊಂಡ ಬಸವಣ್ಣ ಈಗ ಕೃಷಿಯಲ್ಲಿ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸುವೆಡೆ ಮುಂದಡಿಯಿಟ್ಟು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ೫೦,೦೦೦ ರೂ.ಗಳನ್ನು ಖರ್ಚು ಮಾಡಿ ಕೃಷಿ ಕಾಯಕ ಆರಂಭಿಸಿದೆ. ಸಂಪೂರ್ಣ ಸಾವಯವ ಕೃಷಿ ಪದ್ಧತಿಯಾಗಿ ರುವುದರಿಂದ ಬೆಳೆ ಕೈಸೇರುವವರೆಗೆ ೬ ಲಕ್ಷ ರೂ. ಗಳ ಆದಾಯ ಬರುತ್ತದೆ ಎಂದು ನಂಬಿದ್ದೇವೆ.

ಕಾಂಗ್ರೆಸ್ ಸರ್ಕಾರದ ಈ ಯೋಜನೆಯು ರೈತಾಪಿಗಳಾದ ನಮ್ಮ ಬದುಕನ್ನು ರೂಪಿಸಿಕೊಳ್ಳುವಲ್ಲಿ ತುಂಬಾ ಸಹಕಾರಿಯಾಗಿದೆ. ಅಲ್ಲದೆ ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲವಾಗಿದೆ. ಎನ್ನುತ್ತಾರೆ ಈ ರೈತ ದಂಪತಿ. ಸರ್ಕಾರ ಇವರನ್ನು ಗುರುತಿಸಿ ಅಭಿನಂದಿಸಿದರೆ ಯೋಜನೆಯ ಫಲಾನುಭವಿಗಳಿಗೆ ಮತ್ತಷ್ಟು ಉತ್ಸಾಹ ಮೂಡುವುದಂತೂ ಸತ್ಯ. ಇವರ ಸಂಪರ್ಕ ಸಂಖ್ಯೆ ೯೫೯೧೦-೧೮೫೪೬

ನಮ್ಮ ಒಂದು ಎಕರೆ ಹೊಲದಲ್ಲಿ ಬಾಳೆ, ತೊಗರಿ, ಪಪ್ಪಾಯ ಬೆಳೆಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದಿದ್ದೇವೆ. ಅವುಗಳನ್ನು ನಮ್ಮ ಜಮೀನಿನಲ್ಲಿಯೇ ಮಾರಾಟ ಮಾಡುತ್ತೇವೆ. ಸಾವಯವ ಪದ್ಧತಿಯಾದ್ದರಿಂದ ಬೆಳೆಗಳನ್ನು ನಮ್ಮ ಜಮೀನಿಗೇ ಬಂದು ಖರೀದಿ ಮಾಡುತ್ತಾರೆ. ಇದರಿಂದ ಉತ್ತಮ ಆದಾಯ ಗಳಿಸಲು ಸಾಧ್ಯವಾಗಿದ್ದು, ನಮ್ಮ ಬದುಕು ಸುಂದರವಾಗಲು ಗೃಹಲಕ್ಷಿ  ಯೋಜನೆಯೇ ಕಾರಣ. ಆ ಯೋಜನೆಯಿಂದ ಬಂದ ಹಣವೇ ಈಗ ಕೃಷಿಗೆ ಬಂಡವಾಳ ಆಗಿದೆ.

-ಬಸವಣ್ಣ, ರೈತ

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

46 mins ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

3 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

3 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

3 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

4 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

4 hours ago