ಅನ್ನದಾತರ ಅಂಗಳ

ಗೃಹಲಕ್ಷ್ಮಿಯ ಕಾಸಿನಿಂದ ಬಂಗಾರದಂತಹ ಬೆಳೆ

ಸುತ್ತೂರು ನಂಜುಂಡ ನಾಯಕ

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ  ಯೋಜನೆಯಡಿ ನೀಡಲಾಗುವ ಮಾಸಿಕ ೨,೦೦೦ ರೂ.ಗಳನ್ನು ಕೃಷಿಗೆ ವಿನಿಯೋಗಿಸಿ ಬಂಗಾರದಂತಹ ಬೆಳೆ ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ ನಂಜನಗೂಡಿನ ಮೂಡಳ್ಳಿ ಗ್ರಾಮದ ರೈತ ದಂಪತಿ ಬಸವಣ್ಣ ಮತ್ತು ಚಂದ್ರಮ್ಮ.

ನಂಜನಗೂಡು ತಾಲ್ಲೂಕಿನ ಮೂಡಳ್ಳಿ ಗ್ರಾಮದ ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷಿ  ಯೋಜನೆಯಡಿ ನೀಡುವ ಮಾಸಿಕ ೨,೦೦೦ ರೂ.ಗಳನ್ನು ಕೂಡಿಟ್ಟುಕೊಂಡ ಅದನ್ನು ಕೃಷಿಗೆ ಬಳಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.

ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಹಾಗೂ ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಂಡಿದ್ದಾರೆ. ಯಾವುದೇ ರಾಸಾಯನಿಕವನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಪದ್ಧತಿ ಮೂಲಕ ಕೃಷಿ ಮಾಡುವ ಇವರು, ಗುಣಮಟ್ಟದ ಬೆಳೆ ಬೆಳೆದು ಉತ್ತಮ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸಿದ್ದಾರೆ.

ಕೊಟ್ಟಿಗೆ ಗೊಬ್ಬರವನ್ನೇ ಹೆಚ್ಚಾಗಿ ಬಳಸಿಕೊಂಡು ಬಾಳೆ, ಪಪ್ಪಾಯ, ತೊಗರಿ, ರಾಗಿ ಮುಂತಾದ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸುವತ್ತ ಹೆಜ್ಜೆ ಇಟ್ಟಿದ್ದು, ಮಾದರಿ ರೈತ ದಂಪತಿ ಎನಿಸಿಕೊಂಡಿದ್ದಾರೆ.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಬದುಕು ಉತ್ತಮಗೊಳ್ಳುತ್ತದೆ ಎಂಬುದಕ್ಕೆ ಈ ದಂಪತಿಯೇ ಸಾಕ್ಷಿಯಾಗಿದ್ದಾರೆ. ತಮ್ಮ ಪತ್ನಿಗೆ ಬರುವ ೨,೦೦೦ ರೂ.ಗಳನ್ನು ಕೃಷಿಗೆ ಬಂಡವಾಳವಾಗಿ ಬಳಸಿಕೊಂಡ ಬಸವಣ್ಣ ಈಗ ಕೃಷಿಯಲ್ಲಿ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸುವೆಡೆ ಮುಂದಡಿಯಿಟ್ಟು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ೫೦,೦೦೦ ರೂ.ಗಳನ್ನು ಖರ್ಚು ಮಾಡಿ ಕೃಷಿ ಕಾಯಕ ಆರಂಭಿಸಿದೆ. ಸಂಪೂರ್ಣ ಸಾವಯವ ಕೃಷಿ ಪದ್ಧತಿಯಾಗಿ ರುವುದರಿಂದ ಬೆಳೆ ಕೈಸೇರುವವರೆಗೆ ೬ ಲಕ್ಷ ರೂ. ಗಳ ಆದಾಯ ಬರುತ್ತದೆ ಎಂದು ನಂಬಿದ್ದೇವೆ.

ಕಾಂಗ್ರೆಸ್ ಸರ್ಕಾರದ ಈ ಯೋಜನೆಯು ರೈತಾಪಿಗಳಾದ ನಮ್ಮ ಬದುಕನ್ನು ರೂಪಿಸಿಕೊಳ್ಳುವಲ್ಲಿ ತುಂಬಾ ಸಹಕಾರಿಯಾಗಿದೆ. ಅಲ್ಲದೆ ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲವಾಗಿದೆ. ಎನ್ನುತ್ತಾರೆ ಈ ರೈತ ದಂಪತಿ. ಸರ್ಕಾರ ಇವರನ್ನು ಗುರುತಿಸಿ ಅಭಿನಂದಿಸಿದರೆ ಯೋಜನೆಯ ಫಲಾನುಭವಿಗಳಿಗೆ ಮತ್ತಷ್ಟು ಉತ್ಸಾಹ ಮೂಡುವುದಂತೂ ಸತ್ಯ. ಇವರ ಸಂಪರ್ಕ ಸಂಖ್ಯೆ ೯೫೯೧೦-೧೮೫೪೬

ನಮ್ಮ ಒಂದು ಎಕರೆ ಹೊಲದಲ್ಲಿ ಬಾಳೆ, ತೊಗರಿ, ಪಪ್ಪಾಯ ಬೆಳೆಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದಿದ್ದೇವೆ. ಅವುಗಳನ್ನು ನಮ್ಮ ಜಮೀನಿನಲ್ಲಿಯೇ ಮಾರಾಟ ಮಾಡುತ್ತೇವೆ. ಸಾವಯವ ಪದ್ಧತಿಯಾದ್ದರಿಂದ ಬೆಳೆಗಳನ್ನು ನಮ್ಮ ಜಮೀನಿಗೇ ಬಂದು ಖರೀದಿ ಮಾಡುತ್ತಾರೆ. ಇದರಿಂದ ಉತ್ತಮ ಆದಾಯ ಗಳಿಸಲು ಸಾಧ್ಯವಾಗಿದ್ದು, ನಮ್ಮ ಬದುಕು ಸುಂದರವಾಗಲು ಗೃಹಲಕ್ಷಿ  ಯೋಜನೆಯೇ ಕಾರಣ. ಆ ಯೋಜನೆಯಿಂದ ಬಂದ ಹಣವೇ ಈಗ ಕೃಷಿಗೆ ಬಂಡವಾಳ ಆಗಿದೆ.

-ಬಸವಣ್ಣ, ರೈತ

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

2 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

2 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

2 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

2 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

2 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

2 hours ago