ಅನ್ನದಾತರ ಅಂಗಳ

ಗೃಹಲಕ್ಷ್ಮಿಯ ಕಾಸಿನಿಂದ ಬಂಗಾರದಂತಹ ಬೆಳೆ

ಸುತ್ತೂರು ನಂಜುಂಡ ನಾಯಕ

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ  ಯೋಜನೆಯಡಿ ನೀಡಲಾಗುವ ಮಾಸಿಕ ೨,೦೦೦ ರೂ.ಗಳನ್ನು ಕೃಷಿಗೆ ವಿನಿಯೋಗಿಸಿ ಬಂಗಾರದಂತಹ ಬೆಳೆ ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ ನಂಜನಗೂಡಿನ ಮೂಡಳ್ಳಿ ಗ್ರಾಮದ ರೈತ ದಂಪತಿ ಬಸವಣ್ಣ ಮತ್ತು ಚಂದ್ರಮ್ಮ.

ನಂಜನಗೂಡು ತಾಲ್ಲೂಕಿನ ಮೂಡಳ್ಳಿ ಗ್ರಾಮದ ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷಿ  ಯೋಜನೆಯಡಿ ನೀಡುವ ಮಾಸಿಕ ೨,೦೦೦ ರೂ.ಗಳನ್ನು ಕೂಡಿಟ್ಟುಕೊಂಡ ಅದನ್ನು ಕೃಷಿಗೆ ಬಳಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.

ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಹಾಗೂ ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಂಡಿದ್ದಾರೆ. ಯಾವುದೇ ರಾಸಾಯನಿಕವನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಪದ್ಧತಿ ಮೂಲಕ ಕೃಷಿ ಮಾಡುವ ಇವರು, ಗುಣಮಟ್ಟದ ಬೆಳೆ ಬೆಳೆದು ಉತ್ತಮ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸಿದ್ದಾರೆ.

ಕೊಟ್ಟಿಗೆ ಗೊಬ್ಬರವನ್ನೇ ಹೆಚ್ಚಾಗಿ ಬಳಸಿಕೊಂಡು ಬಾಳೆ, ಪಪ್ಪಾಯ, ತೊಗರಿ, ರಾಗಿ ಮುಂತಾದ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸುವತ್ತ ಹೆಜ್ಜೆ ಇಟ್ಟಿದ್ದು, ಮಾದರಿ ರೈತ ದಂಪತಿ ಎನಿಸಿಕೊಂಡಿದ್ದಾರೆ.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಬದುಕು ಉತ್ತಮಗೊಳ್ಳುತ್ತದೆ ಎಂಬುದಕ್ಕೆ ಈ ದಂಪತಿಯೇ ಸಾಕ್ಷಿಯಾಗಿದ್ದಾರೆ. ತಮ್ಮ ಪತ್ನಿಗೆ ಬರುವ ೨,೦೦೦ ರೂ.ಗಳನ್ನು ಕೃಷಿಗೆ ಬಂಡವಾಳವಾಗಿ ಬಳಸಿಕೊಂಡ ಬಸವಣ್ಣ ಈಗ ಕೃಷಿಯಲ್ಲಿ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸುವೆಡೆ ಮುಂದಡಿಯಿಟ್ಟು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ೫೦,೦೦೦ ರೂ.ಗಳನ್ನು ಖರ್ಚು ಮಾಡಿ ಕೃಷಿ ಕಾಯಕ ಆರಂಭಿಸಿದೆ. ಸಂಪೂರ್ಣ ಸಾವಯವ ಕೃಷಿ ಪದ್ಧತಿಯಾಗಿ ರುವುದರಿಂದ ಬೆಳೆ ಕೈಸೇರುವವರೆಗೆ ೬ ಲಕ್ಷ ರೂ. ಗಳ ಆದಾಯ ಬರುತ್ತದೆ ಎಂದು ನಂಬಿದ್ದೇವೆ.

ಕಾಂಗ್ರೆಸ್ ಸರ್ಕಾರದ ಈ ಯೋಜನೆಯು ರೈತಾಪಿಗಳಾದ ನಮ್ಮ ಬದುಕನ್ನು ರೂಪಿಸಿಕೊಳ್ಳುವಲ್ಲಿ ತುಂಬಾ ಸಹಕಾರಿಯಾಗಿದೆ. ಅಲ್ಲದೆ ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲವಾಗಿದೆ. ಎನ್ನುತ್ತಾರೆ ಈ ರೈತ ದಂಪತಿ. ಸರ್ಕಾರ ಇವರನ್ನು ಗುರುತಿಸಿ ಅಭಿನಂದಿಸಿದರೆ ಯೋಜನೆಯ ಫಲಾನುಭವಿಗಳಿಗೆ ಮತ್ತಷ್ಟು ಉತ್ಸಾಹ ಮೂಡುವುದಂತೂ ಸತ್ಯ. ಇವರ ಸಂಪರ್ಕ ಸಂಖ್ಯೆ ೯೫೯೧೦-೧೮೫೪೬

ನಮ್ಮ ಒಂದು ಎಕರೆ ಹೊಲದಲ್ಲಿ ಬಾಳೆ, ತೊಗರಿ, ಪಪ್ಪಾಯ ಬೆಳೆಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದಿದ್ದೇವೆ. ಅವುಗಳನ್ನು ನಮ್ಮ ಜಮೀನಿನಲ್ಲಿಯೇ ಮಾರಾಟ ಮಾಡುತ್ತೇವೆ. ಸಾವಯವ ಪದ್ಧತಿಯಾದ್ದರಿಂದ ಬೆಳೆಗಳನ್ನು ನಮ್ಮ ಜಮೀನಿಗೇ ಬಂದು ಖರೀದಿ ಮಾಡುತ್ತಾರೆ. ಇದರಿಂದ ಉತ್ತಮ ಆದಾಯ ಗಳಿಸಲು ಸಾಧ್ಯವಾಗಿದ್ದು, ನಮ್ಮ ಬದುಕು ಸುಂದರವಾಗಲು ಗೃಹಲಕ್ಷಿ  ಯೋಜನೆಯೇ ಕಾರಣ. ಆ ಯೋಜನೆಯಿಂದ ಬಂದ ಹಣವೇ ಈಗ ಕೃಷಿಗೆ ಬಂಡವಾಳ ಆಗಿದೆ.

-ಬಸವಣ್ಣ, ರೈತ

ಆಂದೋಲನ ಡೆಸ್ಕ್

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

10 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

10 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

10 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

10 hours ago