ಅನ್ನದಾತರ ಅಂಗಳ

ಗೃಹಲಕ್ಷ್ಮಿಯ ಕಾಸಿನಿಂದ ಬಂಗಾರದಂತಹ ಬೆಳೆ

ಸುತ್ತೂರು ನಂಜುಂಡ ನಾಯಕ

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿ  ಯೋಜನೆಯಡಿ ನೀಡಲಾಗುವ ಮಾಸಿಕ ೨,೦೦೦ ರೂ.ಗಳನ್ನು ಕೃಷಿಗೆ ವಿನಿಯೋಗಿಸಿ ಬಂಗಾರದಂತಹ ಬೆಳೆ ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ ನಂಜನಗೂಡಿನ ಮೂಡಳ್ಳಿ ಗ್ರಾಮದ ರೈತ ದಂಪತಿ ಬಸವಣ್ಣ ಮತ್ತು ಚಂದ್ರಮ್ಮ.

ನಂಜನಗೂಡು ತಾಲ್ಲೂಕಿನ ಮೂಡಳ್ಳಿ ಗ್ರಾಮದ ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿಯ ಗೃಹಲಕ್ಷಿ  ಯೋಜನೆಯಡಿ ನೀಡುವ ಮಾಸಿಕ ೨,೦೦೦ ರೂ.ಗಳನ್ನು ಕೂಡಿಟ್ಟುಕೊಂಡ ಅದನ್ನು ಕೃಷಿಗೆ ಬಳಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ.

ಬಸವಣ್ಣ ಮತ್ತು ಚಂದ್ರಮ್ಮ ದಂಪತಿ ತಮ್ಮ ಒಂದು ಎಕರೆ ಕೃಷಿ ಭೂಮಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಹಾಗೂ ಹನಿ ನೀರಾವರಿ ಯೋಜನೆಯನ್ನು ಅಳವಡಿಸಿಕೊಂಡಿದ್ದಾರೆ. ಯಾವುದೇ ರಾಸಾಯನಿಕವನ್ನು ಬಳಸದೆ ಸಂಪೂರ್ಣ ಸಾವಯವ ಕೃಷಿ ಪದ್ಧತಿ ಮೂಲಕ ಕೃಷಿ ಮಾಡುವ ಇವರು, ಗುಣಮಟ್ಟದ ಬೆಳೆ ಬೆಳೆದು ಉತ್ತಮ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸಿದ್ದಾರೆ.

ಕೊಟ್ಟಿಗೆ ಗೊಬ್ಬರವನ್ನೇ ಹೆಚ್ಚಾಗಿ ಬಳಸಿಕೊಂಡು ಬಾಳೆ, ಪಪ್ಪಾಯ, ತೊಗರಿ, ರಾಗಿ ಮುಂತಾದ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಆದಾಯ ಗಳಿಸುವತ್ತ ಹೆಜ್ಜೆ ಇಟ್ಟಿದ್ದು, ಮಾದರಿ ರೈತ ದಂಪತಿ ಎನಿಸಿಕೊಂಡಿದ್ದಾರೆ.

ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಬದುಕು ಉತ್ತಮಗೊಳ್ಳುತ್ತದೆ ಎಂಬುದಕ್ಕೆ ಈ ದಂಪತಿಯೇ ಸಾಕ್ಷಿಯಾಗಿದ್ದಾರೆ. ತಮ್ಮ ಪತ್ನಿಗೆ ಬರುವ ೨,೦೦೦ ರೂ.ಗಳನ್ನು ಕೃಷಿಗೆ ಬಂಡವಾಳವಾಗಿ ಬಳಸಿಕೊಂಡ ಬಸವಣ್ಣ ಈಗ ಕೃಷಿಯಲ್ಲಿ ಲಾಭ ಗಳಿಸುವ ಮೂಲಕ ಆರ್ಥಿಕ ಸಬಲತೆ ಸಾಧಿಸುವೆಡೆ ಮುಂದಡಿಯಿಟ್ಟು ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ೫೦,೦೦೦ ರೂ.ಗಳನ್ನು ಖರ್ಚು ಮಾಡಿ ಕೃಷಿ ಕಾಯಕ ಆರಂಭಿಸಿದೆ. ಸಂಪೂರ್ಣ ಸಾವಯವ ಕೃಷಿ ಪದ್ಧತಿಯಾಗಿ ರುವುದರಿಂದ ಬೆಳೆ ಕೈಸೇರುವವರೆಗೆ ೬ ಲಕ್ಷ ರೂ. ಗಳ ಆದಾಯ ಬರುತ್ತದೆ ಎಂದು ನಂಬಿದ್ದೇವೆ.

ಕಾಂಗ್ರೆಸ್ ಸರ್ಕಾರದ ಈ ಯೋಜನೆಯು ರೈತಾಪಿಗಳಾದ ನಮ್ಮ ಬದುಕನ್ನು ರೂಪಿಸಿಕೊಳ್ಳುವಲ್ಲಿ ತುಂಬಾ ಸಹಕಾರಿಯಾಗಿದೆ. ಅಲ್ಲದೆ ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲವಾಗಿದೆ. ಎನ್ನುತ್ತಾರೆ ಈ ರೈತ ದಂಪತಿ. ಸರ್ಕಾರ ಇವರನ್ನು ಗುರುತಿಸಿ ಅಭಿನಂದಿಸಿದರೆ ಯೋಜನೆಯ ಫಲಾನುಭವಿಗಳಿಗೆ ಮತ್ತಷ್ಟು ಉತ್ಸಾಹ ಮೂಡುವುದಂತೂ ಸತ್ಯ. ಇವರ ಸಂಪರ್ಕ ಸಂಖ್ಯೆ ೯೫೯೧೦-೧೮೫೪೬

ನಮ್ಮ ಒಂದು ಎಕರೆ ಹೊಲದಲ್ಲಿ ಬಾಳೆ, ತೊಗರಿ, ಪಪ್ಪಾಯ ಬೆಳೆಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದಿದ್ದೇವೆ. ಅವುಗಳನ್ನು ನಮ್ಮ ಜಮೀನಿನಲ್ಲಿಯೇ ಮಾರಾಟ ಮಾಡುತ್ತೇವೆ. ಸಾವಯವ ಪದ್ಧತಿಯಾದ್ದರಿಂದ ಬೆಳೆಗಳನ್ನು ನಮ್ಮ ಜಮೀನಿಗೇ ಬಂದು ಖರೀದಿ ಮಾಡುತ್ತಾರೆ. ಇದರಿಂದ ಉತ್ತಮ ಆದಾಯ ಗಳಿಸಲು ಸಾಧ್ಯವಾಗಿದ್ದು, ನಮ್ಮ ಬದುಕು ಸುಂದರವಾಗಲು ಗೃಹಲಕ್ಷಿ  ಯೋಜನೆಯೇ ಕಾರಣ. ಆ ಯೋಜನೆಯಿಂದ ಬಂದ ಹಣವೇ ಈಗ ಕೃಷಿಗೆ ಬಂಡವಾಳ ಆಗಿದೆ.

-ಬಸವಣ್ಣ, ರೈತ

ಆಂದೋಲನ ಡೆಸ್ಕ್

Recent Posts

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆರಂಭಿಕ ಮುನ್ನಡೆ

ಕೋಲ್ಕತ್ತಾ: ತೀವ್ರ ಹಣಾಹಣಿ ಏರ್ಪಟ್ಟಿರುವ ಪಶ್ಚಿಮ ಬಂಗಾಳ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.…

5 mins ago

ಸಿಎಂ ತವರಲ್ಲಿ ಬೇಸಿಗೆ ಕಾಲದಲ್ಲೂ ಕ್ಷೀರ ಕ್ರಾಂತಿ

ಕೆ.ಬಿ.ರಮೇಶನಾಯಕ ಪ್ರತಿನಿತ್ಯ ೯.೨೭ ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಸಕ್ತ ಸಾಲಿನಲ್ಲಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ  ಮೈಸೂರು: ಹೈನುಗಾರಿಕೆಯನ್ನು ನಂಬಿರುವ…

11 mins ago

ರಾಜ್ಯದ 2 ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶುರು

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ…

20 mins ago

ಭವಾನಿಪುರದಲ್ಲಿ ಭಾರೀ ಭದ್ರತೆ ; ಮತ ಎಣಿಕೆಗೂ ಮುನ್ನ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಿದ ದೀದಿ

ಕೊಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ 2026ರ ಫಲಿತಾಂಶ ಹಿನ್ನೆಲೆಯಲ್ಲಿ, ಮಮತಾ ಬ್ಯಾನರ್ಜಿ ಭವಾನಿಪುರದ ಮಾ ಬಾಗಲಮುಖಿ ದೇವಸ್ಥಾನದಲ್ಲಿ ನಿನ್ನೆ…

39 mins ago

ಪಂಚರಾಜ್ಯ ಚುನಾವಣೆ ಫಲಿತಾಂಶ ; ಮತ ಎಣಿಕೆಗೆ ಕ್ಷಣಗಣನೆ

ಬೆಂಗಳೂರು : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ.…

48 mins ago