ಅನ್ನದಾತರ ಅಂಗಳ

ಕಾಫಿಯ ಕೊಡಗಿನಲ್ಲಿ ಸೋಲಾರ್‌ ಕ್ರಾಂತಿ

ಕೃಷ್ಣ ಸಿದ್ದಾಪುರ

ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ರೈತರಿಗೆ ಕಾರ್ಮಿಕರ ಕೊರತೆ, ಕಾಡು ಪ್ರಾಣಿಗಳ ಹಾವಳಿ, ಹವಾಮಾನ ವೈಪರೀತ್ಯ, ದರ ಕುಸಿತದಂತಹ ಹತ್ತಾರು ಸಮಸ್ಯೆಗಳೊಂದಿಗೆ ವಿದ್ಯುತ್ ಸಮಸ್ಯೆ ಕೂಡ ಕಾಡುತ್ತದೆ. ಇದೀಗ ವಿದ್ಯುತ್ ಸಮಸ್ಯೆಗೆ ಪರಿಹಾರವಾಗಿ ಸೋಲಾರ್ ಬಳಸಲಾಗುತ್ತಿದ್ದು, ಕೃಷಿಕರು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ.

ಕಾಡು ಪ್ರಾಣಿಗಳ ಭಯದ ನಡುವೆ ಕೃಷಿ ಫಸಲುಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರಿನ ವ್ಯವಸ್ಥೆ ಇಲ್ಲದೆ ಅದೆಷ್ಟೋ ರೈತರು ಕೃಷಿಯಿಂದ ವಿಮುಖರಾಗಿ ದೂರ ಉಳಿದಿದ್ದಾರೆ. ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಇಲ್ಲದೆ ನೀರಿನ ಅಭಾವದಿಂದಾಗಿ ಕೃಷಿ ಫಸಲು ತೆಗೆಯಲು ಸಾಧ್ಯವಾಗದಂತಹ ಸ್ಥಿತಿ ಬಹುತೇಕ ಕಡೆಗಳಲ್ಲಿ ನಿರ್ಮಾಣವಾಗಿದೆ. ಕೆಲವು ಕಡೆಗಳಲ್ಲಿ ದುಬಾರಿ ವೆಚ್ಚದೊಂದಿಗೆ ಡೀಸೆಲ್ ಪಂಪ್‌ಗಳನ್ನು ಬಳಸಿ ಕೃಷಿ ಫಸಲಿಗೆ ನೀರು ಹಾಯಿಸಲಾಗುತ್ತಿದೆ. ರೈತರು ಈ ಸಮಸ್ಯೆಗಳಿಂದ ಮುಕ್ತಿ ಹೊಂದಲು ಕಡಿಮೆ ಖರ್ಚಿನಲ್ಲಿ ಸೋಲಾರ್ ಪಂಪುಗಳನ್ನು ಅಳವಡಿಸುವುದರೊಂದಿಗೆ ಇದೀಗ ಸ್ವಂತ ಸೋಲಾರ್ ಬಳಕೆಯಿಂದ ದಿನವಿಡೀ ತೋಟಕ್ಕೆ ನೀರು ಹಾಯಿಸುವ ಮೂಲಕ ಕೃಷಿ ಫಸಲಿನ ಫಲವತ್ತತೆಯೊಂದಿಗೆ ಉತ್ತಮ ಇಳುವರಿ ಪಡೆಯುವ ಮೂಲಕ ವಿದ್ಯುತ್ ಸಮಸ್ಯೆಗಳಿಂದ ದೂರವಾಗಿ ನೆಮ್ಮದಿಯ ಜೀವನ ನಡೆಸಲು ಮುಂದಾಗಿದ್ದಾರೆ.

ವಿದ್ಯುತ್ ಸಂಪರ್ಕವೇ ಇಲ್ಲದೆ ಕಾಫಿ ತೋಟದಲ್ಲೇ ಸೋಲಾರ್ ಪ್ಯಾನೆಲ್‌ನೊಂದಿಗೆ ಕೊಳವೆ ಬಾವಿಗೆ ಮೋಟರ್ ಅಳವಡಿಸಿ ಕೃಷಿ ಬೆಳೆಗಳಿಗೆ ದಿನನಿತ್ಯ ನೀರು ಹಾಯಿಸುವ ಮೂಲಕ ಬೆಳೆಗಾರ ಸೂದನ ಸತೀಶ್ ಯಶಸ್ವಿಯಾಗಿದ್ದಾರೆ. ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟಳ್ಳಿಯಲ್ಲಿ ೨ ಎಕರೆ ಕಾಫಿತೋಟಕ್ಕೆ ಸೋಲಾರ್ ಪಂಪ್‌ಸೆಟ್‌ನ್ನು ಅಳವಡಿಸಿದ್ದಾರೆ. ಡಿಜಿಟಲ್ ತಂತ್ರಜ್ಞಾನದ ಮೂಲಕ ಮೊಬೈಲ್‌ನಲ್ಲೂ ನಿಯಂತ್ರಿಸಬಹುದಾದ ೫ ಹೆಚ್‌ಪಿ ಪಂಪ್‌ಸೆಟ್‌ನಲ್ಲಿ ಮೂರು ಜೆಟ್ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದು, ಬೆಳಿಗ್ಗೆಯಿಂದ ಸಂಜೆವರೆಗೆ ಕೃಷಿ ಬೆಳೆಗಳಿಗೆ ನೀರು ಹಾಯಿಸಲಾಗುತ್ತಿದೆ. ಈ ಹೊಸ ಸೋಲಾರ್ ವಿದ್ಯುತ್ ಆವಿಷ್ಕಾರವನ್ನು ಮೈಸೂರಿನ ಎಸ್ಸಾರ್ ಸೋಲಾರ್ ಕಂಪೆನಿ ಪರಿಚಯಿಸಿದ್ದು, ಈಗಾಗಲೇ ಪಾಲಿಬೆಟ್ಟ, ಗೋಣಿಕೊಪ್ಪ, ಸಿದ್ದಾಪುರ, ಚಟ್ಟಳ್ಳಿ, ಕುಶಾಲನಗರ ಸೇರಿದಂತೆ ಹಲವೆಡೆ ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿ ಯಶಸ್ಸು ಕಂಡಿದೆ.

ಕೊಡಗಿನಲ್ಲಿ ಕಾಫಿ ಕೊಯ್ಲು ಪ್ರಾರಂಭವಾಗಿದ್ದು, ಕೊಯ್ಲಿನ ನಂತರ ತೋಟಗಳಿಗೆ ನೀರು ಹಾಯಿಸ ಬೇಕಾಗುತ್ತದೆ. ಗುಡ್ಡಗಾಡು ಪ್ರದೇಶವಾದ ಜಿಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದ್ದು, ವೋಲ್ಟೇಜ್ ಸಮಸ್ಯೆಯು ರೈತರನ್ನು ಕಾಡುತ್ತಿದೆ. ಇದರೊಂದಿಗೆ ಪೈಪ್‌ಲೈನ್ ಅಳವಡಿಕೆ ಕಾರ್ಯಕ್ಕೆ ರಾತ್ರಿ ವೇಳೆಯಲ್ಲಿ ಕಾರ್ಮಿಕರು ಕಾಡು ಪ್ರಾಣಿಗಳ ಭಯ ದಿಂದ ತೋಟಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮೊಬೈಲ್ ಮೂಲಕವೂ ಆನ್ ಅಂಡ್ ಆಫ್ ಮಾಡುವ ಮೂಲಕ ನೀರು ಹಾಯಿಸುವ ಹೊಸ ತಂತ್ರಜ್ಞಾನವನ್ನು ಪರಿಚಯಿಸಿ ಸಮಸ್ಯೆಗೆ ಪರಿಹಾರ ಒದಗಿಸಿದೆ.

ಕಾಫಿ ತೋಟ ದೂರದಲ್ಲಿರುವುದರಿಂದ ವಿದ್ಯುತ್ ಅಳವಡಿಕೆ ಮಾಡಲು ಅಂದಾಜು ಹತ್ತು ಲಕ್ಷ ರೂ. ಗಳಷ್ಟು ಖರ್ಚು ಮಾಡಬೇಕಾಗಿತ್ತು. ಆದರೆ ಕಡಿಮೆ ಖರ್ಚಿನಲ್ಲಿ ಎಸ್ಸಾರ್ ಸೋಲಾರ್ ಕಂಪೆನಿಯಿಂದ ತೋಟದಲ್ಲೇ ಸೋಲಾರ್ ಪ್ಯಾನೆಲ್ ಅಳವಡಿಸಲಾಗಿದೆ. ಜೊತೆಗೆ ಕೊಳವೆ ಬಾವಿಯಿಂದ ತೋಟಕ್ಕೆ ನೀರು ಹಾಯಿಸುವ ಪಂಪ್‌ಸೆಟ್ ಅಳವಡಿಸಿ ಮೊಬೈಲ್ ಫೋನ್‌ನಿಂದಲೂ ನಿಯಂತ್ರಿಸ ಬಹುದಾದ ಹೊಸ ತಂತ್ರಜ್ಞಾನವನ್ನು ರೂಪಿಸಿ ಬೆಳೆಗಳಿಗೆ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಗ್ರಾಮೀಣ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗುವ ಈ ಸೋಲಾರ್ ಪಂಪ್ ಅಳವಡಿಕೆಗೆ ಸರ್ಕಾರ ಸಬ್ಸಿಡಿ ಪ್ರೋತ್ಸಾಹ ನೀಡಬೇಕಾಗಿದೆ. -ನಟರಾಜ್ ಗೌಡ, ವ್ಯವಸ್ಥಾಪಕ , ವಿಸ್ತಾರ್ ಸೋಲಾರ್ ಸಂಸ್ಥೆ

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

6 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

10 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

10 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

10 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

11 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

11 hours ago