ಅನ್ನದಾತರ ಅಂಗಳ

ಕಾಫಿಯ ಕೊಡಗಿನಲ್ಲಿ ಸೋಲಾರ್‌ ಕ್ರಾಂತಿ

ಕೃಷ್ಣ ಸಿದ್ದಾಪುರ

ಗುಡ್ಡಗಾಡು ಪ್ರದೇಶವಾಗಿರುವ ಕೊಡಗು ಜಿಲ್ಲೆಯಲ್ಲಿ ರೈತರಿಗೆ ಕಾರ್ಮಿಕರ ಕೊರತೆ, ಕಾಡು ಪ್ರಾಣಿಗಳ ಹಾವಳಿ, ಹವಾಮಾನ ವೈಪರೀತ್ಯ, ದರ ಕುಸಿತದಂತಹ ಹತ್ತಾರು ಸಮಸ್ಯೆಗಳೊಂದಿಗೆ ವಿದ್ಯುತ್ ಸಮಸ್ಯೆ ಕೂಡ ಕಾಡುತ್ತದೆ. ಇದೀಗ ವಿದ್ಯುತ್ ಸಮಸ್ಯೆಗೆ ಪರಿಹಾರವಾಗಿ ಸೋಲಾರ್ ಬಳಸಲಾಗುತ್ತಿದ್ದು, ಕೃಷಿಕರು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದಾರೆ.

ಕಾಡು ಪ್ರಾಣಿಗಳ ಭಯದ ನಡುವೆ ಕೃಷಿ ಫಸಲುಗಳಿಗೆ ವಿದ್ಯುತ್ ಸಂಪರ್ಕ ಹಾಗೂ ನೀರಿನ ವ್ಯವಸ್ಥೆ ಇಲ್ಲದೆ ಅದೆಷ್ಟೋ ರೈತರು ಕೃಷಿಯಿಂದ ವಿಮುಖರಾಗಿ ದೂರ ಉಳಿದಿದ್ದಾರೆ. ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕವೂ ಇಲ್ಲದೆ ನೀರಿನ ಅಭಾವದಿಂದಾಗಿ ಕೃಷಿ ಫಸಲು ತೆಗೆಯಲು ಸಾಧ್ಯವಾಗದಂತಹ ಸ್ಥಿತಿ ಬಹುತೇಕ ಕಡೆಗಳಲ್ಲಿ ನಿರ್ಮಾಣವಾಗಿದೆ. ಕೆಲವು ಕಡೆಗಳಲ್ಲಿ ದುಬಾರಿ ವೆಚ್ಚದೊಂದಿಗೆ ಡೀಸೆಲ್ ಪಂಪ್‌ಗಳನ್ನು ಬಳಸಿ ಕೃಷಿ ಫಸಲಿಗೆ ನೀರು ಹಾಯಿಸಲಾಗುತ್ತಿದೆ. ರೈತರು ಈ ಸಮಸ್ಯೆಗಳಿಂದ ಮುಕ್ತಿ ಹೊಂದಲು ಕಡಿಮೆ ಖರ್ಚಿನಲ್ಲಿ ಸೋಲಾರ್ ಪಂಪುಗಳನ್ನು ಅಳವಡಿಸುವುದರೊಂದಿಗೆ ಇದೀಗ ಸ್ವಂತ ಸೋಲಾರ್ ಬಳಕೆಯಿಂದ ದಿನವಿಡೀ ತೋಟಕ್ಕೆ ನೀರು ಹಾಯಿಸುವ ಮೂಲಕ ಕೃಷಿ ಫಸಲಿನ ಫಲವತ್ತತೆಯೊಂದಿಗೆ ಉತ್ತಮ ಇಳುವರಿ ಪಡೆಯುವ ಮೂಲಕ ವಿದ್ಯುತ್ ಸಮಸ್ಯೆಗಳಿಂದ ದೂರವಾಗಿ ನೆಮ್ಮದಿಯ ಜೀವನ ನಡೆಸಲು ಮುಂದಾಗಿದ್ದಾರೆ.

ವಿದ್ಯುತ್ ಸಂಪರ್ಕವೇ ಇಲ್ಲದೆ ಕಾಫಿ ತೋಟದಲ್ಲೇ ಸೋಲಾರ್ ಪ್ಯಾನೆಲ್‌ನೊಂದಿಗೆ ಕೊಳವೆ ಬಾವಿಗೆ ಮೋಟರ್ ಅಳವಡಿಸಿ ಕೃಷಿ ಬೆಳೆಗಳಿಗೆ ದಿನನಿತ್ಯ ನೀರು ಹಾಯಿಸುವ ಮೂಲಕ ಬೆಳೆಗಾರ ಸೂದನ ಸತೀಶ್ ಯಶಸ್ವಿಯಾಗಿದ್ದಾರೆ. ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಟ್ಟಳ್ಳಿಯಲ್ಲಿ ೨ ಎಕರೆ ಕಾಫಿತೋಟಕ್ಕೆ ಸೋಲಾರ್ ಪಂಪ್‌ಸೆಟ್‌ನ್ನು ಅಳವಡಿಸಿದ್ದಾರೆ. ಡಿಜಿಟಲ್ ತಂತ್ರಜ್ಞಾನದ ಮೂಲಕ ಮೊಬೈಲ್‌ನಲ್ಲೂ ನಿಯಂತ್ರಿಸಬಹುದಾದ ೫ ಹೆಚ್‌ಪಿ ಪಂಪ್‌ಸೆಟ್‌ನಲ್ಲಿ ಮೂರು ಜೆಟ್ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದ್ದು, ಬೆಳಿಗ್ಗೆಯಿಂದ ಸಂಜೆವರೆಗೆ ಕೃಷಿ ಬೆಳೆಗಳಿಗೆ ನೀರು ಹಾಯಿಸಲಾಗುತ್ತಿದೆ. ಈ ಹೊಸ ಸೋಲಾರ್ ವಿದ್ಯುತ್ ಆವಿಷ್ಕಾರವನ್ನು ಮೈಸೂರಿನ ಎಸ್ಸಾರ್ ಸೋಲಾರ್ ಕಂಪೆನಿ ಪರಿಚಯಿಸಿದ್ದು, ಈಗಾಗಲೇ ಪಾಲಿಬೆಟ್ಟ, ಗೋಣಿಕೊಪ್ಪ, ಸಿದ್ದಾಪುರ, ಚಟ್ಟಳ್ಳಿ, ಕುಶಾಲನಗರ ಸೇರಿದಂತೆ ಹಲವೆಡೆ ಸೋಲಾರ್ ಪಂಪ್‌ಸೆಟ್ ಅಳವಡಿಕೆ ಮಾಡಿ ಯಶಸ್ಸು ಕಂಡಿದೆ.

ಕೊಡಗಿನಲ್ಲಿ ಕಾಫಿ ಕೊಯ್ಲು ಪ್ರಾರಂಭವಾಗಿದ್ದು, ಕೊಯ್ಲಿನ ನಂತರ ತೋಟಗಳಿಗೆ ನೀರು ಹಾಯಿಸ ಬೇಕಾಗುತ್ತದೆ. ಗುಡ್ಡಗಾಡು ಪ್ರದೇಶವಾದ ಜಿಲ್ಲೆಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಶುರುವಾಗಿದ್ದು, ವೋಲ್ಟೇಜ್ ಸಮಸ್ಯೆಯು ರೈತರನ್ನು ಕಾಡುತ್ತಿದೆ. ಇದರೊಂದಿಗೆ ಪೈಪ್‌ಲೈನ್ ಅಳವಡಿಕೆ ಕಾರ್ಯಕ್ಕೆ ರಾತ್ರಿ ವೇಳೆಯಲ್ಲಿ ಕಾರ್ಮಿಕರು ಕಾಡು ಪ್ರಾಣಿಗಳ ಭಯ ದಿಂದ ತೋಟಕ್ಕೆ ತೆರಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮೊಬೈಲ್ ಮೂಲಕವೂ ಆನ್ ಅಂಡ್ ಆಫ್ ಮಾಡುವ ಮೂಲಕ ನೀರು ಹಾಯಿಸುವ ಹೊಸ ತಂತ್ರಜ್ಞಾನವನ್ನು ಪರಿಚಯಿಸಿ ಸಮಸ್ಯೆಗೆ ಪರಿಹಾರ ಒದಗಿಸಿದೆ.

ಕಾಫಿ ತೋಟ ದೂರದಲ್ಲಿರುವುದರಿಂದ ವಿದ್ಯುತ್ ಅಳವಡಿಕೆ ಮಾಡಲು ಅಂದಾಜು ಹತ್ತು ಲಕ್ಷ ರೂ. ಗಳಷ್ಟು ಖರ್ಚು ಮಾಡಬೇಕಾಗಿತ್ತು. ಆದರೆ ಕಡಿಮೆ ಖರ್ಚಿನಲ್ಲಿ ಎಸ್ಸಾರ್ ಸೋಲಾರ್ ಕಂಪೆನಿಯಿಂದ ತೋಟದಲ್ಲೇ ಸೋಲಾರ್ ಪ್ಯಾನೆಲ್ ಅಳವಡಿಸಲಾಗಿದೆ. ಜೊತೆಗೆ ಕೊಳವೆ ಬಾವಿಯಿಂದ ತೋಟಕ್ಕೆ ನೀರು ಹಾಯಿಸುವ ಪಂಪ್‌ಸೆಟ್ ಅಳವಡಿಸಿ ಮೊಬೈಲ್ ಫೋನ್‌ನಿಂದಲೂ ನಿಯಂತ್ರಿಸ ಬಹುದಾದ ಹೊಸ ತಂತ್ರಜ್ಞಾನವನ್ನು ರೂಪಿಸಿ ಬೆಳೆಗಳಿಗೆ ನೀರಿನ ಸಮಸ್ಯೆ ಬಗೆಹರಿಸಲಾಗಿದೆ. ಗ್ರಾಮೀಣ ಭಾಗದ ರೈತರಿಗೆ ಹೆಚ್ಚು ಅನುಕೂಲವಾಗುವ ಈ ಸೋಲಾರ್ ಪಂಪ್ ಅಳವಡಿಕೆಗೆ ಸರ್ಕಾರ ಸಬ್ಸಿಡಿ ಪ್ರೋತ್ಸಾಹ ನೀಡಬೇಕಾಗಿದೆ. -ನಟರಾಜ್ ಗೌಡ, ವ್ಯವಸ್ಥಾಪಕ , ವಿಸ್ತಾರ್ ಸೋಲಾರ್ ಸಂಸ್ಥೆ

ಆಂದೋಲನ ಡೆಸ್ಕ್

Recent Posts

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

25 mins ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

33 mins ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

1 hour ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

1 hour ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

5 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಪ್ರತೀ ವಾರಾಂತ್ಯ 100 ಜನರ ಹಸಿವು ತಣಿಸುವ ಸಂಡೇ ಬ್ರೇಕ್‌ಫಾಸ್ಟ್‌

2023ರಿಂದ "ಮಾತೋಶ್ರೀ ಫೌಂಡೇಶನ್‌"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…

5 hours ago