ಅನ್ನದಾತರ ಅಂಗಳ

ಕೃಷಿ ಪಂಡಿತ ಗೋಪಾಲೇಗೌಡರ ಕುರಿತು

ಭೇರ್ಯ ಮಹೇಶ್‌

ಮೈಸೂರು ಜಿಲ್ಲೆಯಲ್ಲಿ ಭತ್ತ, ರಾಗಿ, ಕಬ್ಬು, ತೆಂಗು, ವಿವಿಧ ಬಗೆಯ ಹೂವುಗಳು ಹೀಗೆ ಕೆಲವೇ ಕೆಲವು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇವುಗಳ ನಡುವೆ ಮಲೆನಾಡಿನಲ್ಲಿ ಬೆಳೆಯುವ ವಾಣಿಜ್ಯ ಬೆಳೆಗಳನ್ನೂ ಕೂಡ ಬೆಳೆಯಬಹುದು ಎಂಬುದನ್ನು ತಾಲ್ಲೂಕಿನ ಮಾಳನಾಯಕನಹಳ್ಳಿ ಗ್ರಾಮದ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕ ತ ಹಾಗೂ ಪ್ರಗತಿಪರ ರೈತ ಗೋಪಾಲೇಗೌಡ ತೋರಿಸಿಕೊಟ್ಟಿದ್ದಾರೆ.

ಕೃಷಿಯೇ ಹಾಗೆ ಅದು ತನ್ನ ಕೈ ಹಿಡಿದವರನ್ನು ಯಾವತ್ತೂ ಬಿಡುವುದಿಲ್ಲ. ಅದನ್ನು ನಿಷ್ಠೆ ಶ್ರದ್ಧೆಯಿಂದ ಮಾಡಬೇಕಷ್ಟೆ. ಅದು ಬಂಡವಾಳ ಹಾಕಿ ಲಾಭ ತೆಗೆಯುವಂತಹದಲ್ಲ. ಅದನ್ನು ಪ್ರೀತಿಸುತ್ತಾ ಶ್ರಮ ಪಡಬೇಕು. ಆಗ ಅದು ಕೈಹಿಡಿಯುತ್ತದೆ. ಅದರ ಬಗ್ಗೆ ಆಸಕ್ತಿ, ಪ್ರೀತಿ ಇಲ್ಲದೆ ಹೋದರೆ ಅದರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಶ್ರಮಪಟ್ಟು ದುಡಿದವರನ್ನು ಕಾಪಾಡುತ್ತದೆ. ಇದಕ್ಕೆ ಸಾಕ್ಷಿ ರೈತ ಗೋಪಾಲೇಗೌಡರು ಎಂದರೆ ತಪ್ಪಾಗಲಾರದು. ಅವರು ಕೃಷಿಯನ್ನು ತಪ್ಪಸ್ಸಿನಂತೆ ಧ್ಯಾನಿಸಿದ ಫಲದಿಂದ ಅದರಲ್ಲಿ ಯಶಸ್ಸು ಕಂಡಿದ್ದಾರೆ.

ಮಾಳನಾಯಕನಹಳ್ಳಿ ಗ್ರಾಮದಲ್ಲಿ ತಮ್ಮಗಿರುವ ಮೂರೂವರೆ ಎಕರೆ ಪ್ರದೇಶದ ತೋಟಕ್ಕೆ ತೆರಳಿದ್ದೇ ಆದರೆ ಅಚ್ಚರಿ ಮೂಡುತ್ತದೆ. ಅಷ್ಟೇ ಅಲ್ಲ ಅದೊಂದು ಕೇವಲ ತೋಟವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಅದು ಹಚ್ಚ ಹಸಿರಿನ ಸ್ವರ್ಗದಂತೆ ಭಾಸವಾಗುತ್ತದೆ. ಕೃಷಿ ಮಾಡಬೇಕೆನ್ನುವವರಿಗೆ ಅದೊಂದು ಸಂಶೋ ಧನಾಲಯದ ಕೇಂದ್ರ ಮತ್ತು ಕಲಿಕೆಯ ಕ್ಷೇತ್ರ ವಾಗಿಯೂ ಕಂಗೊಳಿಸುತ್ತದೆ.

ಗೋಪಾಲೇಗೌಡರ ತೋಟದಲ್ಲಿ ಏನಿದೆ? ಏನಿಲ್ಲ? : ಇಲ್ಲಿ ಏನಿದೆ? ಏನಿಲ್ಲ ಎನ್ನುವುದನ್ನು ಹೇಳ ಲಾಗುವುದಿಲ್ಲ. ಮಲೆನಾಡಿನಲ್ಲಿ ಬೆಳೆಯುವ ಬೆಳೆ ಗಳಾದ ಕರಿಮೆಣಸು, ಏಲಕ್ಕಿ, ಚಕ್ಕೆ, ಜಾಯಿಕಾಯಿ, ಅರಿಶಿನ, ಶುಂಠಿ, ಪನ್ನೀರು, ಇಂಗು, ಕಾಫಿ, ತೆಂಗು, ಅಡಕೆ, ಕೋಕ್, ಸೀಬೆ, ಸಪೋಟ, ಪಪ್ಪಾಯ, ಅಂಜೂರಾ, ಸಿಲ್ವರ್, ತೇಗ ಹೀಗೆ ಒಂದೇ ಎರಡೇ ಹತ್ತಾರು ಬೆಳೆಗಳು ತೋಟದಲ್ಲಿ ಕಳೆಗಟ್ಟಿವೆ. ಈ ಬೆಳೆಯಿಂದ ಅವರು ವರ್ಷಕ್ಕೆ ೧೫ರಿಂದ ೧೮ ಲಕ್ಷ ರೂ. ಗಳಷ್ಟು ಆದಾಯವನ್ನು ಪಡೆಯುತ್ತಿದ್ದಾರೆ. ಇನ್ನು ಇವರು ಕಾಫಿ, ಏಲಕ್ಕಿ, ಚಕ್ಕೆ, ಜಾಕಾಯಿ, ಪತ್ರೆ, ಅಂಜೂರ, ಕಿತ್ತಳೆ, ಸಪೋಟ, ಮಾವು, ತೆಂಗು, ಅಡಕೆ, ಕೋಕ್, ಮೆಣಸು ಹೀಗೆ ಎಲ್ಲ ರೀತಿಯ ಸಾಂಬಾರ ಪದಾರ್ಥ ಗಳನೂ ನೈಸರ್ಗಿಕವಾಗಿ ಸಾವಯವ ಪದ್ಧತಿಯ ಲ್ಲಿಯೇ ಬೆಳೆಯುತ್ತಿರುವುದು ವಿಶೇಷವಾಗಿದೆ.

ಇವರ ಕೃಷಿ ಪದ್ಧತಿ ಹೇಗಿದೆ ಗೊತ್ತಾ: ಇವತ್ತು ಸಾವ ಯವ ಕೃಷಿ ಮಾಡಿ ಎಂದು ಹೇಳುವುದು ಸುಲಭ ಆದರೆ ಅದನ್ನು ಮಾಡಿ ತೋರಿಸುವುದು ಕಷ್ಟ. ಆದರೆ ಗೋಪಾಲೇಗೌಡರು ತಾವು ಸಾವಯವ ಕೃಷಿ ಮಾಡುವ ಮೂಲಕ ಇತರರನ್ನು ಪ್ರೇರೇಪಿಸುತ್ತಿ ರುವುದು ಶ್ಲಾಘನೀಯವಾದದು.

ಕೃಷಿ ಪಂಡಿತ ಪ್ರಶಸ್ತಿ: ಭೂಮಿಯನ್ನು ಗೌರವಿಸಿ ಶ್ರದ್ಧಾ ಭಕ್ತಿಯಿಂದ ಬೇಸಾಯ ಮಾಡಿ ವರ್ಷಕ್ಕೆ ಲಕ್ಷಾಂತರ ರೂ. ಗಳಿಗೂ ಹೆಚ್ಚಿನ ಆದಾಯ ಪಡೆದಿ ದ್ದಾರೆ. ಜತೆಗೆ ಇವತ್ತು ಕೃಷಿಯಿಂದ ವಿಮುಖರಾಗಿ ಬೇಸಾಯ ಚಟುವಟಿಕೆಗಳಿಂದ ದೂರ ಸರಿಯುತ್ತಿ ರುವ ಯುವ ಜನಾಂಗವನ್ನು ಮತ್ತೆ ಬೇಸಾಯಕ್ಕೆ ಕರೆ ತರುವ ಕೆಲಸವನ್ನು ಮಾಡಿದ್ದರಿಂದ ಇವರ ಸೇವೆಗೆ ೨೦೧೫-೧೬ ನೇ ಸಾಲಿನಲ್ಲಿ ಸರ್ಕಾರ ‘ಕೃಷಿ ಪಂಡಿತ’ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ.

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

5 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

5 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

6 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

7 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

7 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

10 hours ago