ಅನ್ನದಾತರ ಅಂಗಳ

ಕೃಷಿ ಪಂಡಿತ ಗೋಪಾಲೇಗೌಡರ ಕುರಿತು

ಭೇರ್ಯ ಮಹೇಶ್‌

ಮೈಸೂರು ಜಿಲ್ಲೆಯಲ್ಲಿ ಭತ್ತ, ರಾಗಿ, ಕಬ್ಬು, ತೆಂಗು, ವಿವಿಧ ಬಗೆಯ ಹೂವುಗಳು ಹೀಗೆ ಕೆಲವೇ ಕೆಲವು ಬೆಳೆಗಳನ್ನು ಬೆಳೆಯಲಾಗುತ್ತಿದ್ದು, ಇವುಗಳ ನಡುವೆ ಮಲೆನಾಡಿನಲ್ಲಿ ಬೆಳೆಯುವ ವಾಣಿಜ್ಯ ಬೆಳೆಗಳನ್ನೂ ಕೂಡ ಬೆಳೆಯಬಹುದು ಎಂಬುದನ್ನು ತಾಲ್ಲೂಕಿನ ಮಾಳನಾಯಕನಹಳ್ಳಿ ಗ್ರಾಮದ ಕೃಷಿ ಪಂಡಿತ ಪ್ರಶಸ್ತಿ ಪುರಸ್ಕ ತ ಹಾಗೂ ಪ್ರಗತಿಪರ ರೈತ ಗೋಪಾಲೇಗೌಡ ತೋರಿಸಿಕೊಟ್ಟಿದ್ದಾರೆ.

ಕೃಷಿಯೇ ಹಾಗೆ ಅದು ತನ್ನ ಕೈ ಹಿಡಿದವರನ್ನು ಯಾವತ್ತೂ ಬಿಡುವುದಿಲ್ಲ. ಅದನ್ನು ನಿಷ್ಠೆ ಶ್ರದ್ಧೆಯಿಂದ ಮಾಡಬೇಕಷ್ಟೆ. ಅದು ಬಂಡವಾಳ ಹಾಕಿ ಲಾಭ ತೆಗೆಯುವಂತಹದಲ್ಲ. ಅದನ್ನು ಪ್ರೀತಿಸುತ್ತಾ ಶ್ರಮ ಪಡಬೇಕು. ಆಗ ಅದು ಕೈಹಿಡಿಯುತ್ತದೆ. ಅದರ ಬಗ್ಗೆ ಆಸಕ್ತಿ, ಪ್ರೀತಿ ಇಲ್ಲದೆ ಹೋದರೆ ಅದರಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಶ್ರಮಪಟ್ಟು ದುಡಿದವರನ್ನು ಕಾಪಾಡುತ್ತದೆ. ಇದಕ್ಕೆ ಸಾಕ್ಷಿ ರೈತ ಗೋಪಾಲೇಗೌಡರು ಎಂದರೆ ತಪ್ಪಾಗಲಾರದು. ಅವರು ಕೃಷಿಯನ್ನು ತಪ್ಪಸ್ಸಿನಂತೆ ಧ್ಯಾನಿಸಿದ ಫಲದಿಂದ ಅದರಲ್ಲಿ ಯಶಸ್ಸು ಕಂಡಿದ್ದಾರೆ.

ಮಾಳನಾಯಕನಹಳ್ಳಿ ಗ್ರಾಮದಲ್ಲಿ ತಮ್ಮಗಿರುವ ಮೂರೂವರೆ ಎಕರೆ ಪ್ರದೇಶದ ತೋಟಕ್ಕೆ ತೆರಳಿದ್ದೇ ಆದರೆ ಅಚ್ಚರಿ ಮೂಡುತ್ತದೆ. ಅಷ್ಟೇ ಅಲ್ಲ ಅದೊಂದು ಕೇವಲ ತೋಟವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಅದು ಹಚ್ಚ ಹಸಿರಿನ ಸ್ವರ್ಗದಂತೆ ಭಾಸವಾಗುತ್ತದೆ. ಕೃಷಿ ಮಾಡಬೇಕೆನ್ನುವವರಿಗೆ ಅದೊಂದು ಸಂಶೋ ಧನಾಲಯದ ಕೇಂದ್ರ ಮತ್ತು ಕಲಿಕೆಯ ಕ್ಷೇತ್ರ ವಾಗಿಯೂ ಕಂಗೊಳಿಸುತ್ತದೆ.

ಗೋಪಾಲೇಗೌಡರ ತೋಟದಲ್ಲಿ ಏನಿದೆ? ಏನಿಲ್ಲ? : ಇಲ್ಲಿ ಏನಿದೆ? ಏನಿಲ್ಲ ಎನ್ನುವುದನ್ನು ಹೇಳ ಲಾಗುವುದಿಲ್ಲ. ಮಲೆನಾಡಿನಲ್ಲಿ ಬೆಳೆಯುವ ಬೆಳೆ ಗಳಾದ ಕರಿಮೆಣಸು, ಏಲಕ್ಕಿ, ಚಕ್ಕೆ, ಜಾಯಿಕಾಯಿ, ಅರಿಶಿನ, ಶುಂಠಿ, ಪನ್ನೀರು, ಇಂಗು, ಕಾಫಿ, ತೆಂಗು, ಅಡಕೆ, ಕೋಕ್, ಸೀಬೆ, ಸಪೋಟ, ಪಪ್ಪಾಯ, ಅಂಜೂರಾ, ಸಿಲ್ವರ್, ತೇಗ ಹೀಗೆ ಒಂದೇ ಎರಡೇ ಹತ್ತಾರು ಬೆಳೆಗಳು ತೋಟದಲ್ಲಿ ಕಳೆಗಟ್ಟಿವೆ. ಈ ಬೆಳೆಯಿಂದ ಅವರು ವರ್ಷಕ್ಕೆ ೧೫ರಿಂದ ೧೮ ಲಕ್ಷ ರೂ. ಗಳಷ್ಟು ಆದಾಯವನ್ನು ಪಡೆಯುತ್ತಿದ್ದಾರೆ. ಇನ್ನು ಇವರು ಕಾಫಿ, ಏಲಕ್ಕಿ, ಚಕ್ಕೆ, ಜಾಕಾಯಿ, ಪತ್ರೆ, ಅಂಜೂರ, ಕಿತ್ತಳೆ, ಸಪೋಟ, ಮಾವು, ತೆಂಗು, ಅಡಕೆ, ಕೋಕ್, ಮೆಣಸು ಹೀಗೆ ಎಲ್ಲ ರೀತಿಯ ಸಾಂಬಾರ ಪದಾರ್ಥ ಗಳನೂ ನೈಸರ್ಗಿಕವಾಗಿ ಸಾವಯವ ಪದ್ಧತಿಯ ಲ್ಲಿಯೇ ಬೆಳೆಯುತ್ತಿರುವುದು ವಿಶೇಷವಾಗಿದೆ.

ಇವರ ಕೃಷಿ ಪದ್ಧತಿ ಹೇಗಿದೆ ಗೊತ್ತಾ: ಇವತ್ತು ಸಾವ ಯವ ಕೃಷಿ ಮಾಡಿ ಎಂದು ಹೇಳುವುದು ಸುಲಭ ಆದರೆ ಅದನ್ನು ಮಾಡಿ ತೋರಿಸುವುದು ಕಷ್ಟ. ಆದರೆ ಗೋಪಾಲೇಗೌಡರು ತಾವು ಸಾವಯವ ಕೃಷಿ ಮಾಡುವ ಮೂಲಕ ಇತರರನ್ನು ಪ್ರೇರೇಪಿಸುತ್ತಿ ರುವುದು ಶ್ಲಾಘನೀಯವಾದದು.

ಕೃಷಿ ಪಂಡಿತ ಪ್ರಶಸ್ತಿ: ಭೂಮಿಯನ್ನು ಗೌರವಿಸಿ ಶ್ರದ್ಧಾ ಭಕ್ತಿಯಿಂದ ಬೇಸಾಯ ಮಾಡಿ ವರ್ಷಕ್ಕೆ ಲಕ್ಷಾಂತರ ರೂ. ಗಳಿಗೂ ಹೆಚ್ಚಿನ ಆದಾಯ ಪಡೆದಿ ದ್ದಾರೆ. ಜತೆಗೆ ಇವತ್ತು ಕೃಷಿಯಿಂದ ವಿಮುಖರಾಗಿ ಬೇಸಾಯ ಚಟುವಟಿಕೆಗಳಿಂದ ದೂರ ಸರಿಯುತ್ತಿ ರುವ ಯುವ ಜನಾಂಗವನ್ನು ಮತ್ತೆ ಬೇಸಾಯಕ್ಕೆ ಕರೆ ತರುವ ಕೆಲಸವನ್ನು ಮಾಡಿದ್ದರಿಂದ ಇವರ ಸೇವೆಗೆ ೨೦೧೫-೧೬ ನೇ ಸಾಲಿನಲ್ಲಿ ಸರ್ಕಾರ ‘ಕೃಷಿ ಪಂಡಿತ’ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

27 mins ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

1 hour ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

7 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

7 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

7 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

7 hours ago