ಅನ್ನದಾತರ ಅಂಗಳ

ಕೃಷಿಕರ ಭವಿಷ್ಯದ ಭರವಸೆ ಕೃಷಿ ಪ್ರವಾಸೋದ್ಯಮ

ಡಿ.ಎನ್. ಹರ್ಷ

ಕಂಡು ಕೇಳರಿಯದ ಕೊರೋನಾ ಎಂಬ ಮಹಾಮಾರಿ ಬಂದು ಹೋದ ಮೇಲೆ, ಸಾಕಷ್ಟು ಜನರ ಚಿತ್ತ ಉತ್ತಮ ಆರೋಗ್ಯ ಸಂಪತ್ತಿನ ಮೇಲೆ ಹರಿದಿದೆ. ಈ ಕಾರಣದಿಂದ ಪ್ರಕೃತಿಯ ಮಡಿಲಿನಲ್ಲಿ ಸಮಯ ಕಳೆಯಬೇಕು ಎನ್ನುವ ಉದ್ದೇಶದಿಂದ ದಿನೇದಿನೇ ಪ್ರವಾಸ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಪ್ರವಾಸೋದ್ಯಮವು ಜಾಗತಿಕವಾಗಿ ವಿವಿಧ ಆರ್ಥಿಕತೆಗಳ ಅವಿಭಾಜ್ಯ ಅಂಗವಾಗಿದೆ. ಇದು ಕೌಶಲ ರಹಿತ ಮತ್ತು ನುರಿತ ವ್ಯಕ್ತಿಗಳಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದೆ.

ಜಪಾನ್, ಅಮೆರಿಕಾ, ಆಸ್ಟ್ರೇಲಿಯಾ, ಕೆನಡಾ ಮೊದಲಾದ ಹಲವಾರು ದೇಶಗಳಲ್ಲಿ ಕೃಷಿ ಪ್ರವಾಸೋದ್ಯಮ ಬೆಳೆಯುತ್ತಿರುವ ಉದ್ಯಮವೆಂದು ಪರಿಗಣಿಸಲಾಗಿದೆ. ಭಾರತದ ಜಿಡಿಪಿಯ ಸರಿಸುಮಾರು ೨೬ ಪ್ರತಿಶತವು ಕೃಷಿಯ ಮೂಲಕ ಬರುತ್ತಾ ಇದೆ. ಇಂದು ನಮ್ಮ ದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಆಹಾರ ಉತ್ಪನ್ನಗಳನ್ನು ಬೆಳೆಯುತ್ತಲಿರುವ ಕಾರಣ, ರೈತ ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎನ್ನುವುದಕ್ಕೆ ಇತ್ತೀಚಿನ ಮಾವು, ಈರುಳ್ಳಿ ಬೆಳೆ ನೋಡಿ ತಿಳಿದುಕೊಳ್ಳಬಹುದು.

ಈ ನಿಟ್ಟಿನಲ್ಲಿ ಆಲೋಚನೆ ಮಾಡಿದರೆ ಕೃಷಿ ಪ್ರವಾಸೋದ್ಯಮವು ಹಳ್ಳಿಗರಿಗೆ ಪರ್ಯಾಯ ಆದಾಯ ಮೂಲಗಳನ್ನು ಸೃಷ್ಟಿಸುವ ವ್ಯವಸ್ಥೆಯೂ ಆಗಿದ್ದು, ಇದು ನಮ್ಮ ದೇಶಿ ಸಂಸ್ಕ ತಿಗಳನ್ನು ಸಂರಕ್ಷಣೆ ಮಾಡುವ ವ್ಯವಸ್ಥೆ ಆಗಿರುವುದು ಹೆಮ್ಮೆಯ ವಿಷಯ.

ಕೃಷಿ-ಪ್ರವಾಸೋದ್ಯಮ ಸಂಸ್ಕ ತಿಯು ಭಾರತೀಯ ಆರ್ಥಿಕತೆಯ ಪರವಾಗಿದ್ದು, ಸರಿಸುಮಾರು ೮೫% ಜನಸಂಖ್ಯೆಯು ನೇರವಾಗಿ ಅಥವಾ ಪರೋಕ್ಷವಾಗಿ ಕೃಷಿ ಮತ್ತು ಇತರ ಚಟುವಟಿಕೆಗಳ ಮೇಲೆ ಅವಲಂಬಿತವಾಗಿರುವ ಕಾರಣ ಭವಿಷ್ಯದಲ್ಲಿ ಹೆಚ್ಚಿನ ಬೇಡಿಕೆ ಇರುವ ಉದ್ಯಮವಾಗಿ ಬೆಳೆಯುವ ಎಲ್ಲಾ ಅವಕಾಶ ಇವೆ.

ಒಂದು ಸರ್ವೇ ಪ್ರಕಾರ ನಗರಗಳಲ್ಲಿ ವಾಸಿಸುವ ಒಟ್ಟು ಜನಸಂಖ್ಯೆಯ ೧/೩ ಭಾಗವು ಹಳ್ಳಿಗಳಲ್ಲಿ ವಾಸಿಸುವ ತಮ್ಮ ಸಂಬಂಧಿಕರನ್ನು ಹೊಂದಿಲ್ಲ ಮತ್ತು ಒಟ್ಟು ಜನಸಂಖ್ಯೆಯ ಅರ್ಧದಷ್ಟು ಹಳ್ಳಿಗಳಿಗೇ ಹೋಗಿಲ್ಲ. ಇವರೆಲ್ಲರ ಮನಸ್ಸಿನಲ್ಲಿ ಸಹಜವಾಗಿ ಕೃಷಿ ಬಗ್ಗೆ, ತಾವು ತಿನ್ನುವ ಆಹಾರದ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಬೇಕು ಎನ್ನುವ ಕುತೂಹಲ ಸಹಜವಾಗಿಯೇ ಇರುತ್ತದೆ.

ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆ ಮೇಲು ಎನ್ನುವ ಗಾದೆಯನ್ನು ನಾವು ಕೇಳಿದ್ದೇವೆ. ಪ್ರಕೃತಿಯ ಮಧ್ಯೆ ಮಾಡುವ ಕೃಷಿಯಲ್ಲಿ ಎಲ್ಲಾ ರೀತಿಯ ಜ್ಞಾನ ಪಡೆಯಬಹುದು ಎಂಬುದೇ ಈ ಗಾದೆಯ ಮಾತಿನ ಅರ್ಥ. ಅಂಕಿ ಅಂಶಗಳ ಪ್ರಕಾರ ಜಾಗತಿಕವಾಗಿ, ಕೃಷಿ ಪ್ರವಾಸೋದ್ಯಮ ಮಾರುಕಟ್ಟೆಯು ೨೦೧೯ರಲ್ಲಿ ೬೯.೨೪ ಶತಕೋಟಿ ಮೌಲ್ಯದ್ದಾಗಿದೆ. ೨೦೨೭ ರ ವೇಳೆಗೆ ೧೧೭.೩೭ ಬಿಲಿಯನ್ ಡಾಲರ್ ತಲುಪುವ ನಿರೀಕ್ಷೆಯಿದೆ.

ಈ ಮೇಲಿನ ಎಲ್ಲ ಮಾಹಿತಿಯನ್ನು ಮತ್ತೊಮ್ಮೆ ಅವಲೋಕನ ಮಾಡಿದರೆ ಕೃಷಿ ಪ್ರವಾಸೋದ್ಯಮ ಎನ್ನುವುದು ಕೃಷಿಕರಿಗೆ ಹೆಚ್ಚಿನ ಆದಾಯ ತಂದುಕೊಡುವ ಉದ್ಯಮವಾಗಿದ್ದು, ಆರೋಗ್ಯವೇ ಭಾಗ್ಯ ಎನ್ನುವ ಗಾದೆಗೆ ಹೆಚ್ಚಿನ ಅರ್ಥ ಕಲ್ಪಿಸುತ್ತದೆ. ಮೂಲತಃ ಕೃಷಿಕರಾಗಿರುವ ಆರ್.ಎಸ್. ನವೀನ್ ರವರು ಕಳೆದ ಹತ್ತು ವರ್ಷಗಳಿಂದ ಕೃಷಿ ಪ್ರವಾಸೋದ್ಯಮದ ಬಗ್ಗೆ ಆಸಕ್ತಿ ಹೊಂದಿ, ದಕ್ಷಿಣ ಭಾರತದ ಎಲ್ಲ ಕಡೆ ತಿರುಗಿ ಅನುಭವದ ಜ್ಞಾನ ಪಡೆದು, ಸಮಾನ ಮನಸ್ಕರ ಜೊತೆ ಸೇರಿ, ಅಗ್ರಿಯಾನ ಟೂರಿಸಂ (Agriyana Tourism Pvt Ltd) ಎನ್ನುವ ಕಂಪೆನಿ ಶುರು ಮಾಡಿ, ಕಾರ್ಯಪ್ರವೃತ್ತರಾಗಿದ್ದಾರೆ. ಹೆಚ್ಚಿನ ಮಾಹಿತಿಗೆ ಆರ್.ಎಸ್.ನವೀನ್‌ರ ಮೊಬೈಲ್ ಸಂಖ್ಯೆ ೮೮೮೪೭೬೪೪೬೪ ಅನ್ನು ಸಂಪರ್ಕ ಮಾಡಬಹುದು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago