• ಜಿ.ಕೃಷ್ಣ ಪ್ರಸಾದ್

ಇತ್ತೀಚಿನ ವರ್ಷಗಳಲ್ಲಿ ಒಂದು ವರ್ಷ ಬರಗಾಲವಿದ್ದರೆ ಮತ್ತೊಂದು ವರ್ಷ ಬಿಡದೇ ಸುರಿವ ಮಳೆ, ಈ ನಡುವೆ ಕಾಡು ಪ್ರಾಣಿ, ಕೂಲಿಕಾರರ ಸಮಸ್ಯೆಯಿಂದ ಕೃಷಿ ಮಾಡಲಾಗದ ಪರಿಸ್ಥಿತಿ.

ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಅರಣ್ಯ ಕಲ್ಪನೆಯನ್ನು ಸಾಕಾರಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಬಿದಿರು ರೈತರ ಆಶಾಕಿರಣವಾಗಿದೆ. ಒಮ್ಮೆ ನೆಟ್ಟು ಕಾಳಜಿ ಮಾಡಿದರೆ, ತನ್ನ ಪಾಡಿಗೆ ತಾನು ಬೆಳೆಯುತ್ತದೆ; ಆದಾಯ ತಂದು ಕೊಡುತ್ತದೆ.
ಸಾರವಿಲ್ಲದ ಮಣ್ಣಿನಲ್ಲೂ ಬಿದಿರು ಹುಲುಸಾಗಿ ಬೆಳೆಯುವುದರಿಂದ, ಪಾಳು ಬಿದ್ದ, ಕಲ್ಲು ಬಂಡೆ ಇರುವ ಜಾಗಗಳಲ್ಲೂ ಬಿದಿರನ್ನು ಸುಲಭವಾಗಿ ಬೆಳೆಯಬಹುದು. ನೆಟ್ಟ ಮೊದಲ ಮೂರು ವರ್ಷ ಆರೈಕೆ ಮಾಡಿದರೆ, ಮುಂದಿನ 30ರಿಂದ 100 ವರ್ಷಗಳವರೆಗೆ ನಮಗೆ ನಿರಂತರವಾಗಿ ಆದಾಯ ತರುತ್ತದೆ.

ಬಿದಿರಿನಲ್ಲಿ 1,500ಕ್ಕೂ ಹೆಚ್ಚು ತಳಿಗಳಿವೆ. ಬೇಲಿಗೆ ಬಳಕೆಯಾಗುವ ಸಣ್ಣ ಬಿದಿರಿನಿಂದ ಹಿಡಿದು ನೂರು ಅಡಿಮೀರಿ ಬೆಳೆಯುವ ಕೊಲಂಬಿಯಾ ಬಿದಿರಿನವರೆಗೆ ಇದರ ವೈವಿಧ್ಯ ಹಬ್ಬಿದೆ. ವಾಣಿಜ್ಯ ಉದ್ದೇಶಕ್ಕೆ ಸೂಕ್ತವಾದ ಹೆಬ್ಬಿದಿರು, ಶಮೆ ಬಿದಿರು, ಕಪ್ಪು ಬಿದಿರು, ಬರ್ಮಾ ಬಿದಿರು, ಗೋಲ್ಡನ್ ಬಿದಿರು, ಕೊಳಲು ಬಿದಿರು, ಒಂಟಿ ಬಿದಿರು ಜನಪ್ರಿಯ ತಳಿಗಳಾಗಿವೆ. ಅಲಂಕಾರಿಕ ಬಿದಿರಿನ ತಳಿಗಳಾದ ಹಳದಿ ಬಿದಿರು ಮತ್ತು ಬುದ್ದ ಬಿದಿರುಗಳನ್ನು ನಗರವಾಸಿಗಳೂ ಬೆಳೆಸಬಹುದು.

ಮಣ್ಣಿನ ಸವಕಳಿ ತಡೆಯಲು ಬಿದಿರು ಸಹಕಾರಿ. ನದಿ, ಹಳ್ಳ ಮತ್ತು ಕಾಲುವೆಗಳ ದಡದಲ್ಲಿ ನೆಲ ಕೊರೆತ ತಪ್ಪಿಸಬಹುದು. ಬಿದಿರನ್ನು ಸುಟ್ಟು ಬಯೋಚಾರ್ ಮಾಡಬಹುದು. ಮಾರುಕಟ್ಟೆಯಲ್ಲಿ ಇದ್ದಿಲಿಗೆ ಬೇಡಿಕೆ ಇದೆ. ಬಿದಿರು ಬಿದಿರು ಇಂಗಾಲವನ್ನು ಹೀರಿಕೊಂಡು, ವಾತಾವರಣದ ತಾಪಮಾನವನ್ನು ತಗ್ಗಿಸುತ್ತದೆ.

ಪರಿಸರ ಸ್ನೇಹಿ ಬಿದಿರಿನ ಮನೆಗಳು ಜನಪ್ರಿಯವಾಗುತ್ತಿವೆ. ಸಿಮೆಂಟ್ ಬದಲು ಬಿದಿರು ಬಳಸುವ ಪ್ರಯತ್ನಗಳೂ ಯಶಸ್ವಿಯಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ನ್ನು ಬಿದಿರಿನಿಂದ ಶೃಂಗರಿಸಿರುವುದು ವಿಶೇಷ.

ಬಿದಿರು ಕಳಲೆ ಸೇವನೆಯಿಂದ ರಕ್ತದೊತ್ತಡ, ಮಲಬದ್ಧತೆ, ಅಜೀರ್ಣ ಮತ್ತು ಹೃದಯ ಸಂಬಂಧಿ ರೋಗಗಳನ್ನೂ ತಹಬದಿಗೆ ತರುತ್ತದೆ. ಇನ್ನು ಪೆನ್‌ಸ್ಟಾಂಡ್, ಕೀ ಬಂಚ್, ಲ್ಯಾಂಪ್ ಶೆಡ್, ಬೆಡ್‌ ಲ್ಯಾಂಪ್, ಹಣ್ಣಿನ ಬುಟ್ಟಿ, ಬೀಸಣಿಗೆ ಮೊದಲಾದ ಅಲಂಕಾರಿಕ ವಸ್ತುಗಳನ್ನು ಮಾಡಬಹುದು. ಪೀಠೋಪಕರಣಗಳಂತೂ ಬಲು ಜನಪ್ರಿಯ.

ಇಡೀ ಹೊಲಕ್ಕೆ ಬಿದಿರು ಹಬ್ಬಿಸಬೇಕಿಲ್ಲ. ಬೇಲಿಗೆ ಮತ್ತು ಪಾಳು ಬಿದ್ದ ಜಾಗಗಳಲ್ಲಿ ಐದತ್ತು ಹಿಂಡು ನೆಟ್ಟರೆ ಮನೆಬಳಕೆಗೆ ಮತ್ತು ಸ್ಥಳೀಯ ಮಾರುಕಟ್ಟೆಗೆ ಸಾಕು. ಬಿದಿರಿನ ಗಳವೊಂದಕ್ಕೆ ನೂರರ ಆಸುಪಾಸಿನ ಬೆಲೆ ಇದೆ. ಇಡೀ ದೇಶದಲ್ಲಿ ಬಿದಿರಿನ ತೋಟಗಳು ಹೆಚ್ಚು ಇರುವುದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ. ಅಲ್ಲಿ ಸಾವಿರಾರು ರೈತರು ಬಿದಿರಿನ ಕೃಷಿ ಮಾಡುತ್ತಿದ್ದಾರೆ. ಬಿದಿರು ಮೂಲದ ಉದ್ದಿಮೆಗಳು ಅಲ್ಲಿ ತಲೆ ಎತ್ತಿವೆ.
ಮೈಸೂರು, ಚಾಮರಾಜನಗರ, ಕೊಡಗಿನ ರೈತರ ಹೊಲಗಳಲ್ಲಿ ಬಿದಿರು ನೆಲೆಯೂರಿದರೆ ರೈತರಿಗೆ ಆದಾಯದ ಮೂಲ ತೆರೆದುಕೊಳ್ಳುತ್ತದೆ. ಕಾಡುಪ್ರಾಣಿಗಳಿಗೆ ಆಹಾರವೂ ಸಿಗುತ್ತದೆ. ಕನ್ನಂಬಾಡಿ ಕಾಲುವೆಗಳ ಅಂಚಿನಲ್ಲಿ ಬಿದಿರು ಬೆಳೆಯುವ ಅವಕಾಶ ವಿಪುಲವಾಗಿದೆ. ಅರಣ್ಯ ಇಲಾಖೆ ಕೃಷಿ ಅರಣ್ಯ ಯೋಜನೆಯಡಿ ಬಿದಿರು ಬೆಳೆಯುವವರಿಗೆ ಪ್ರೋತ್ಸಾಹ ಧನ ನೀಡುತ್ತಿದೆ.

ರಾಷ್ಟ್ರೀಯ ಬಿದಿರು ಮಿಷನ್ ಕೂಡ ವಾಣಿಜ್ಯದ ಉದ್ದೇಶಕ್ಕೆ ಬಿದಿರು ಬೆಳೆಸುವವರಿಗೆ ಸಹಾಯಧನ ನೀಡುತ್ತದೆ. ರೈತರು ಇದರ ಸದುಪಯೋಗ ಪಡೆಯಬೇಕಿದೆ. ಬಿದಿರಿನ ತಳಿಗಳ ಪ್ರದರ್ಶನ ಮತ್ತು ಮಾರಾಟ ಏರ್ಪಾಡಾಗಿದೆ. ಆಸಕ್ತರು ಕೋಮಲ್ ಮೊ.ಸಂ. 98809 08608 ಸಂಪರ್ಕಿಸಬಹುದು.

“ಉದ್ಯಮಗಳ ಅಗತ್ಯವಿರುವ ಬಿದಿರು ಹೆಚ್ಚು ಪ್ರಚಾರ ಪಡೆಯುತ್ತಿದೆ. ಆಯಾ ಕೃಷಿ ವಲಯ ಮತ್ತು ಮಣ್ಣಿಗೆ ಸೂಕ್ತವಾದ ಬಿದಿರಿನ ತಳಿಗಳನ್ನು ಹುಡುಕಿಕೊಳ್ಳುವ ಮತ್ತು ತಮ್ಮದೇ ಮಾರುಕಟ್ಟೆಯನ್ನು ಹುಟ್ಟಿಹಾಕುವ ಜಾಣೆಯನ್ನು ರೈತರು ಬೆಳೆಸಿಕೊಳ್ಳಬೇಕು’
-ಶ್ರೀ ಪಡ್ರೆ, ಸಂಪಾದಕರು, ಅಡಕೆ ಪತ್ರಿಕೆ.

ಬನ್ನಿ! ಬಿದಿರು ಬೆಳೆಸೋಣ…
ವಾಣಿಜ್ಯ ಉದ್ದೇಶಕ್ಕೆ ಸೂಕ್ತವಾದ ಬಿದಿರಿನ ತಳಿಗಳ ಪರಿಚಯ ಮತ್ತು ಬಿದಿರಿನ ಕೃಷಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಸಹಜ ಸಮೃದ್ಧ-ಸಾವಯವ ಕೃಷಿಕರ ಬಳಗವು ದಿನಾಂಕ 10ನೇ ಆಗಸ್ಟ್ 2024ರಂದು ‘ಬಿದಿರಿನ ಬೇಸಾಯ’ ಕಾರ್ಯಕ್ರಮ ಏರ್ಪಡಿಸಿದೆ. ಮೈಸೂರಿನ ಮುಡಾ ಕಚೇರಿ ಪಕ್ಕದ ‘ದಿ ಇನ್‌ಸ್ಟಿಟೂಷನ್ ಆಫ್ ಇಂಜಿನಿಯರ್ ಸಭಾಂಗಣ’ದಲ್ಲಿ ಆಯೋಜಿಸಿರುವ ಈ ತರಬೇತಿ ಕಾರ್ಯಕ್ರಮದಲ್ಲಿ ಬಿದಿರು ತಜ್ಞರಾದ ಎ.ಸಿ.ಲಕ್ಷಣ, ಡಾ.ಸೀತಾಲಕ್ಷ್ಮೀ, ಡಾ.ರಾಮಕೃಷ್ಣ ಹೆಗಡೆ, ಪಿ.ದಯಾನಂದ ಮತ್ತು ಜಬೀವುಲ್ಲಾ ಬಿದಿರಿನ ತಳಿಗಳು ಮತ್ತು ಕೃಷಿ ಮಾಹಿತಿ ನೀಡಲಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

52 mins ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

53 mins ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

2 hours ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

2 hours ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

3 hours ago