ಕಾಫಿ ಬೆಲೆಯು ಏರಿಕೆ ಕಂಡಿದ್ದು, ಕಾಫಿ ಬೆಳೆಗಾರರಲ್ಲಿ ಮಂದಹಾಸ ಮೂಡಿದೆ.
ಪರಿಣಾಮ ಕಾಫಿ ಬೆಳೆಗಾರರು ಬೆಲೆ ಏರಿಕೆಯ ಲಾಭ ಪಡೆದುಕೊಂಡು ಕಾಫಿ ಕೊಯ್ಲು ಆರಂಭಿಸಿದ್ದಾರೆ. ೫೦ ಕೆಜಿ ಚೀಲ ತೂಕದ ರೊಬಸ್ಟಾ ಚೆರ್ರಿ ಕಾಫಿ ಬೆಲೆಯು ೧೧,೫೦೦ ರೂ. ತಲುಪಿದೆ. ರೊಬಸ್ಟಾ ಕಾಫಿ ಕೆಜಿಗೆ ೪೦೫ ರೂ. ಗಳಿಂದ ೪೧೦ ರೂ. ಆಸುಪಾಸಿನಲ್ಲಿದೆ. ಈ ಬಾರಿ ಬಹುತೇಕ ತೋಟ ಗಳಲ್ಲಿ ಒಂದು ಮೂಟೆ ರೊಬಸ್ಟಾ ಚೆರ್ರಿಯಲ್ಲಿ ೨೭ರಿಂದ ೨೮ ಕೆಜಿ ಇಳುವರಿ ಸಿಗುತ್ತಿದೆ. ಮೊದಲ ಕೊಯ್ಲಿನಲ್ಲಿ ಒಂದು ಚೀಲ ಕಾಫಿಗೆ ೨೯ ಕೆಜಿ ಇಳುವರಿ ಸಿಕ್ಕಿದೆ. ಇದರಿಂದ ಚೀಲವೊಂದಕ್ಕೆ ೧೧,೫೦೦ ರೂ. ಬೆಲೆ ಏರಿಕೆಯಾಗಿದೆ ಎಂದು ಕಾಫಿ ಬೆಳೆಗಾರರು ತಿಳಿಸಿದ್ದಾರೆ.
ಪ್ರತಿವರ್ಷ ಒಂದೇ ಬಾರಿಗೆ ಕಾಫಿ ಕೊಯ್ಲು ಮಾಡಲಾಗುತ್ತಿತ್ತು. ಈ ಬಾರಿ ಹಣ್ಣು ಮಾತ್ರ ಕೊಯ್ಯುವ ಕ್ರಮ ಹೆಚ್ಚಾಗಿದೆ. ಇದರಿಂದ ೨ನೇ ಕೊಯ್ಲಿನಲ್ಲಿ ಹೆಚ್ಚು ಹಣ್ಣು ಸಿಗಲಿದ್ದು, ಫಸಲಿನ ಗುಣಮಟ್ಟ ಮತ್ತು ತೂಕ ಹೆಚ್ಚಾಗುತ್ತದೆ ಎಂಬುದು ಬೆಳೆಗಾರರ ಅಂಬೋಣ. ಅಲ್ಲದೆ ಕಾಫಿ ಕೊಯ್ಯುವ ಕಾರ್ಮಿಕರಿಗೂ ಹೆಚ್ಚಿನ ಕೂಲಿ ಸಿಗುತ್ತಿದೆ. ರೊಬಸ್ಟಾ ಕಾಫಿಯಲ್ಲಿ ಶೇ. ೧೩ ರವರೆಗೆ ತೇವಾಂಶ ಇರಬಹುದು. ಅತಿ ಹೆಚ್ಚು ಒಣಗಿಸಿದರೆ ತೇವಾಂಶ ೧೦ಕ್ಕಿಂತ ಕಡಿಮೆಯಾ ಗುತ್ತದೆ. ಚೀಲವೊಂದಕ್ಕೆ ೨ ಕೆಜಿ ತೂಕ ಇಳಿಕೆ ಯಾಗುತ್ತದೆ ಎಂಬುದು ಬೆಳೆಗಾರರ ಲೆಕ್ಕಾಚಾರವಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…