ಡಿ.ಎನ್.ಹರ್ಷ

ಪ್ರಸ್ತುತ ಕೃಷಿ ಎಂದರೆ ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಒಂದು ಕಾಯಕ ಎಂಬ ಮಾತಿದೆ. ವರ್ಷಗಳ ಹಿಂದಷ್ಟೇ, ದೇಶದ ಬೆನ್ನೆಲು ಬಾಗಿದ್ದ ಕೃಷಿಗೆ ಈಗ ಕೃಷಿ ಕಾರ್ಮಿಕರ ಸಮಸ್ಯೆ ಹೆಚ್ಚಾಗುತ್ತಿದೆ.

ಇದಕ್ಕೆಲ್ಲಾ ಮೂಲ ಕಾರಣ ಕೃಷಿಕರ ಕುಟುಂಬ ದಲ್ಲಿ ಒಗ್ಗಟ್ಟಿನ ಕೊರತೆ. ದೂರದ ಬೆಟ್ಟ ನುಣ್ಣಗೆ ಎನ್ನುವ ಗಾದೆ ಮಾತಿನ ಹಾಗೆ ನಗರ ಬದುಕನ್ನು ಅರಸುತ್ತ ಹೋಗುವವರ ಸಂಖ್ಯೆಯೇ ಹೆಚ್ಚಾಗಿ ರುವುದು ಇಂದು ಕೃಷಿಕರ ಸಂಖ್ಯೆ
ಗಣನೀಯವಾಗಿ ಇಳಿಕೆಯಾಗಲು ಕಾರಣವಾಗಿದೆ.

ಇದರ ನಡುವೆ ಕೃಷಿಯಲ್ಲಿಯೂ ಲಾಭ ಗಳಿಸಬಹುದು, ಒಟ್ಟಾಗಿ ದುಡಿದರೆ ಅದರಲ್ಲಿಯೂ ಬದುಕು ಕಟ್ಟಿಕೊಳ್ಳಬಹುದು ಎಂಬುದಕ್ಕೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಿದರಹಳ್ಳಿ ಗ್ರಾಮದ ಬಿ.ಕೆ.ಶ್ರೀಧರ್ ಮತ್ತು ಅವರ ಸಹೋದರರು ಒಟ್ಟಿಗೆ ಕೂಡು ಕುಟುಂಬದಲ್ಲಿ ಕೃಷಿ ಬದುಕು ಸಾಗಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಮಾದರಿಯಾಗಿದ್ದಾರೆ.

ಶ್ರೀಧರ್ ಮತ್ತು ಸಹೋದರರು ತಮ್ಮ 12 ಎಕರೆ ಕೃಷಿ ಭೂಮಿಯಲ್ಲಿ ರೇಷ್ಮೆ ಭತ್ತ ಕಬ್ಬು, ತೆಂಗು, ಬಾಳೆ ಇತ್ಯಾದಿ ಬೆಳೆಗಳನ್ನು ಬೆಳೆಯುವ ಜತೆಗೆ ತಮ್ಮ ಮನೆಗೆ ಬೇಕಾದ ದ್ವಿದಳ ಧಾನ್ಯಗಳು, ರಾಗಿ, ತರಕಾರಿಯಂತಹ ಬೆಳೆಗಳನ್ನೂ ಬೆಳೆದು ಕೃಷಿಯ ಮೂಲಕ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ.
ದಿವಂಗತ ಬಿ.ಎಸ್.ಕೃಷ್ಣಮೂರ್ತಿ ಮತ್ತು ಲಲಿತಮ್ಮ ದಂಪತಿಗಳ ಪುತ್ರ ಬಿ.ಕೆ.ಶ್ರೀಧರ್, BE, M.Tech, PhD ಪದವೀಧರರಾಗಿದ್ದು, ಮೈಸೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪಾಧ್ಯಾಪಕರಾಗಿ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದು, ಅಪಾರ ಶಿಷ್ಯವೃಂದವನ್ನು ಹೊಂದಿದ್ದಾರೆ.

ಇಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡು ತಿರುವಾಗಲೇ ಶ್ರೀರಾಂಪುರದ ಕೇಂದ್ರೀಯ ರೇಷ್ಮೆ ಸಂಶೋಧನಾ ಸಂಸ್ಥೆಯಲ್ಲಿ ರೇಷ್ಮೆ ಕೃಷಿ ಬಗ್ಗೆ ತರಬೇತಿ ಪಡೆದು, ತಮ್ಮ ರೇಷ್ಮೆ ಕೃಷಿಯ ಇಳುವರಿಯನ್ನು 22 ಕೆ.ಜಿ.ಗಳಿಂದ 46 ಕೆ.ಜಿ.ಗೆ ಹೆಚ್ಚಿಸಿದ್ದು ವಿಶೇಷ

ಬಿ.ಕೆ.ಪ್ರಕಾಶ್, ಬಿ.ಕೆ.ಸತೀಶ್, ಬಿ.ಕೆ.ಶ್ರೀಪಾದ ಈ ಮೂವರು ಸಹೋದರರೂ ತಮ್ಮ ಅಣ್ಣನ ರೀತಿಯಲ್ಲೇ ಸಂಪೂರ್ಣವಾಗಿ ತಮ್ಮನ್ನು ತಾವು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

ಬಿ.ಕೆ.ಪ್ರಕಾಶ್, ಬಿ.ಕೆ.ಸತೀಶ್ ಇಬ್ಬರೂ ಡಿಪ್ಲೊಮೋ ವ್ಯಾಸಂಗ ಮಾಡಿದ್ದು, ಕೃಷಿಯ ಬಗೆಗಿನ ಪ್ರೀತಿಯಿಂದಾಗಿ ಹಳ್ಳಿಯಲ್ಲೇ ಉಳಿದು ಕೃಷಿ ಬದುಕು ಆರಂಭಿಸಿದರು.

ತಮ್ಮ ಭೂಮಿಯಲ್ಲಿ ರೇಷ್ಮೆ ಕೃಷಿಯನ್ನು ಕಳೆದ ನಲವತ್ತು ವರ್ಷಗಳಿಂದಲೂ ಯಶಸ್ವಿಯಾಗಿ ಮಾಡುತ್ತಿದ್ದು, ಕಡಿಮೆ ಖರ್ಚಿನಲ್ಲಿ ರೇಷ್ಮೆ ಹುಳು ಸಾಕಾಣಿಕೆ ಮಾಡುವ ಸಾಧನಗಳನ್ನು ಸ್ವತಃ ಇವರೇ ಮಾಡಿಕೊಂಡಿರುವುದು ವಿಶೇಷ.

ಇದರೊಂದಿಗೆ ತಮ ಕೃಷಿ ಭೂಮಿಯಲ್ಲಿ ಭತ್ತ, ಕಬ್ಬು, ಬಾಳೆಯ ಜತೆ 180ಕ್ಕೂ ಹೆಚ್ಚು ತೆಂಗಿನ ಮರಗಳನ್ನು ಬೆಳೆದಿದ್ದು, ಇವು ಮೂಲ ಆದಾಯ ತಂದು ಕೊಡುವ ಬೆಳೆಗಳಾಗಿವೆ. ಭತ್ತದ ಪೈರುಗಳನ್ನು ಹೆಚ್ಚು ಹೆಚ್ಚು ನಾಟಿ ಮಾಡುವ ಬದಲು, ತೆಂಡೆ ಹೊಡೆದು, ಒಂದು ಅಥವಾ ಎರಡು ಪೈರನ್ನು ನೆಡುವುದರಿಂದ ಇಳುವರಿ ಹೆಚ್ಚಾಗುತ್ತದೆ ಎಂಬುದು ಇವರ ಮಾತು. ಇದೇ ಮಾದರಿಯಲ್ಲಿ ಕಳೆದ ವರ್ಷ ಒಂದು ಎಕರೆಯಲ್ಲಿ 35 ಕ್ವಿಂಟಾಲ್ ಭತ್ತ ಬೆಳೆದು ಉತ್ತಮ ಲಾಭಗಳಿಸಿದ್ದಾರೆ. ಸುತ್ತ ಮುತ್ತಲ ಕೃಷಿಕರಿಗೆ ತಮ್ಮ ಅನುಭವದ ಜ್ಞಾನ ಹಂಚುವುದರ ಮೂಲಕ ಅವರನ್ನೂ ಲಾಭದಾಯಕ ಕೃಷಿಯತ್ತ ಸಾಗಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಹಳೇ ಬೇರು ಹೊಸ ಚಿಗುರು ಎನ್ನುವ ಹಾಗೆ, ಹಿರಿಯರ ಸಂಪ್ರದಾಯಗಳ ಅನುಭವದ ಜೊತೆ, ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರತಿಪಾದಿಸುವ ಡಾ.ಬಿ.ಕೆ.ಶ್ರೀಧರ್, ಎಲ್ಲ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಅಧ್ಯಾಪಕರಾಗಿದ್ದು, ಈಗ ಕೃಷಿ ಗುರುವಾಗಿ ತಮ್ಮ ತಾಂತ್ರಿಕ ಜ್ಞಾನ ಹಂಚುತ್ತಾ ಇದ್ದಾರೆ. ಯಾವುದೇ ಕೆಲಸವನ್ನು ಪ್ರೀತಿ, ಶ್ರದ್ಧೆಯಿಂದ ಮಾಡಿದಾಗ ಮಾತ್ರ ಶ್ರೇಯಸ್ಸು ಸಿಗುತ್ತದೆ ಎಂಬುದನ್ನು ಅನುಭವದಿಂದ ಅರಿತು ಕೊಂಡು, ತಮ್ಮ ಕುಟುಂಬ ವರ್ಗ, ಸಹವರ್ತಿಗಳು ಸೇರಿದಂತೆ ಎಲ್ಲರಿಗೂ ಅಚ್ಚುಮೆಚ್ಚಿನ ಅಣ್ಣ, ಗುರು ಆಗಿದ್ದಾರೆ. ಇವರನ್ನು ಸಂಪರ್ಕ ಮಾಡಲು ಮೊಬೈಲ್ ಸಂಖ್ಯೆ: 98447 44250.
harshayogi@gmail.com

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago