ಅನ್ನದಾತರ ಅಂಗಳ

ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆ: ಕೇಂದ್ರ ಸರ್ಕಾರ

ಬೆಳೆ ಋತುವಿಗೆ ಅನುಗುಣವಾಗಿ ರಾಜ್ಯಗಳಿಗೆ ಎಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬೇಕಿದೆ ಎಂಬ ಬಗ್ಗೆ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯು ಅಂದಾಜಿಸಿದ್ದು, ಇದಕ್ಕೆ ಅನುಗುಣವಾಗಿ ಬೇಡಿಕೆ ಪಟ್ಟಿ ಸ್ವೀಕರಿಸಲಾಗುತ್ತದೆ. ಬಳಿಕ ರಾಜ್ಯಗಳ ಮಾಸಿಕವಾರು ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆಗೆ ಕ್ರಮವಹಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.

ಪ್ರತಿ ಬೆಳೆ ಋತು ಆರಂಭಕ್ಕೂ ಮುನ್ನವೇ ರಾಜ್ಯಗಳಿಂದ ತಿಂಗಳವಾರು ಬೇಡಿಕೆ ಪಟ್ಟಿಯನ್ನು ಸ್ವೀಕರಿಸಲಾಗುತ್ತದೆ. ಈ ಬೇಡಿಕೆಗೆ ಅನುಗುಣವಾಗಿ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.

ದೇಶದಲ್ಲಿನ ರಸಗೊಬ್ಬರ ಉತ್ಪಾದನೆ ಮತ್ತು ಬೇಡಿಕೆ ನಡುವಿನ ಕೊರತೆಯ ಅಂತರವನ್ನು ಆಮದು ಮೂಲಕ ಸರಿದೂಗಿಸಲಾಗುತ್ತದೆ. ಕೊರೆತೆಯಾಗುವ ರಸಗೊಬ್ಬರವನ್ನು ಆಮದು ಮಾಡಿಕೊಳ್ಳಲಾಗುತ್ತದೆ.

ಬೆಳೆ ಋತುವಿನ ಆರಂಭಕ್ಕೂ ಮೊದಲೇ ಎಷ್ಟು ಪ್ರಮಾಣದಲ್ಲಿ ದೇಶೀಯವಾಗಿ ರಸಗೊಬ್ಬರ ಬೇಕಿದೆ ಎಂಬುದನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ. ಅಲ್ಲದೆ, ರಾಜ್ಯಗಳಿಗೆ ರವಾನಿಸಿದ ರಸಗೊಬ್ಬರವನ್ನು ಸಂಯೋಜಿತ ರಸಗೊಬ್ಬರ ಮಾನಿಟರಿಂಗ್ ಸಿಸ್ಟಂ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

44 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

49 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

54 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

59 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

1 hour ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

1 hour ago