ಬೆಳೆ ಋತುವಿಗೆ ಅನುಗುಣವಾಗಿ ರಾಜ್ಯಗಳಿಗೆ ಎಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬೇಕಿದೆ ಎಂಬ ಬಗ್ಗೆ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯು ಅಂದಾಜಿಸಿದ್ದು, ಇದಕ್ಕೆ ಅನುಗುಣವಾಗಿ ಬೇಡಿಕೆ ಪಟ್ಟಿ ಸ್ವೀಕರಿಸಲಾಗುತ್ತದೆ. ಬಳಿಕ ರಾಜ್ಯಗಳ ಮಾಸಿಕವಾರು ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ಪೂರೈಕೆಗೆ ಕ್ರಮವಹಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಪ್ರತಿ ಬೆಳೆ ಋತು ಆರಂಭಕ್ಕೂ ಮುನ್ನವೇ ರಾಜ್ಯಗಳಿಂದ ತಿಂಗಳವಾರು ಬೇಡಿಕೆ ಪಟ್ಟಿಯನ್ನು ಸ್ವೀಕರಿಸಲಾಗುತ್ತದೆ. ಈ ಬೇಡಿಕೆಗೆ ಅನುಗುಣವಾಗಿ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್ ತಿಳಿಸಿದ್ದಾರೆ.
ದೇಶದಲ್ಲಿನ ರಸಗೊಬ್ಬರ ಉತ್ಪಾದನೆ ಮತ್ತು ಬೇಡಿಕೆ ನಡುವಿನ ಕೊರತೆಯ ಅಂತರವನ್ನು ಆಮದು ಮೂಲಕ ಸರಿದೂಗಿಸಲಾಗುತ್ತದೆ. ಕೊರೆತೆಯಾಗುವ ರಸಗೊಬ್ಬರವನ್ನು ಆಮದು ಮಾಡಿಕೊಳ್ಳಲಾಗುತ್ತದೆ.
ಬೆಳೆ ಋತುವಿನ ಆರಂಭಕ್ಕೂ ಮೊದಲೇ ಎಷ್ಟು ಪ್ರಮಾಣದಲ್ಲಿ ದೇಶೀಯವಾಗಿ ರಸಗೊಬ್ಬರ ಬೇಕಿದೆ ಎಂಬುದನ್ನು ಅಂತಿಮಗೊಳಿಸಲಾಗುತ್ತದೆ ಎಂದಿದ್ದಾರೆ. ಅಲ್ಲದೆ, ರಾಜ್ಯಗಳಿಗೆ ರವಾನಿಸಿದ ರಸಗೊಬ್ಬರವನ್ನು ಸಂಯೋಜಿತ ರಸಗೊಬ್ಬರ ಮಾನಿಟರಿಂಗ್ ಸಿಸ್ಟಂ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…