ಎನ್. ಕೇಶವಮೂರ್ತಿ
ನಾನು ಖಾಸಗಿ ಹೈಬ್ರಿಡ್ ಬಿತ್ತನೆ ಬೀಜೋತ್ಪಾದನಾ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಅಲ್ಲಿ ದಪ್ಪ ಮೆಣಸಿನಕಾಯಿ ಬೆಳೆಸುವಾಗ ನಲವತ್ತೈದು ದಿನಗಳ ಎಳೇ ಸಸಿಯ ಕುಡಿ ಚಿವುಟಿ ನಾಟಿ ಮಾಡುತ್ತಿದ್ದರು. ಅಷ್ಟೇ ಅಲ್ಲದೇ ಗಿಡ ಬೆಳೆದು ಮೊದಲು ಬಿಟ್ಟ ಎರಡು ಸಣ್ಣ ಹೀಚುಕಾಯನ್ನೂ ಚಿವುಟಿ ಹಾಕುತ್ತಿದ್ದರು. ಆಗೆಲ್ಲ ನನ್ನಲ್ಲಿ ಮೂಡಿದ್ದ ಪ್ರಶ್ನೆ ಹೀಚು ಕಾಯಿಯನ್ನು ಚಿವುಟದೆ ಬಿಟ್ಟಿದ್ದರೆ ದಪ್ಪ ಕಾಯಿಯಾಗುತ್ತಿತ್ತಲ್ಲ? ಎಂಬುದು. ಆಗ ಹಿರಿಯ ವಿಜ್ಞಾನಿಯೊಬ್ಬರು ನನಗೆ ಕುಡಿ ಚಿವುಟಿ ಗಿಡ ಬೆಳೆಸುವುದರ ಮಹತ್ವವನ್ನು ವಿವರಿಸಿದರು.

ಯಾವುದೇ ಗಿಡ ಮೊದಲು ತನ್ನ ಸಸ್ಯ ಬೆಳವಣಿಗೆ ಪೂರ್ಣವಾಗಿ ಮುಗಿಸಬೇಕು ಅಂದರೆ ಅದರ ಕಾಂಡ ದಪ್ಪವಾಗಬೇಕು, ರೆಂಬೆ ಕೊಂಬೆಗಳು ವಿಸ್ತಾರವಾಗಿಯೂ ಎತ್ತರವಾಗಿಯೂ ಹರಡಿಕೊಳ್ಳಬೇಕು. ಗಿಡಕ್ಕೆ ಫಸಲಿನ ಭಾರ ಹೊರುವ ತಾಕತ್ತು ಬರಬೇಕು. ಅಲ್ಲಿಯವರೆಗೆ ಬರಿಯ ಗಿಡ ಬೆಳೆಸಬೇಕೇ ಹೊರತು, ಹೂವು ಬಂದು ಹೀಚಾಗಲು ಬಿಡಬಾರದು. ಒಂದು ಸಾರಿ ಹೂವಿನ ಬೆಳವಣಿಗೆಗೆ ಅವಕಾಶ ನೀಡಿದರೆ, ಮುಂದೆ ಆ ಸಸ್ಯ ತನ್ನ ಸಂತಾನ ಅಭಿವೃದ್ಧಿ ಮಾಡುವ ಸಲುವಾಗಿ ಹೂ ಅರಳಿಸಿ, ಕಾಯಿಕಟ್ಟುವ ಕಾಯಕ ಆರಂಭಿಸುತ್ತದೆ. ಆಗ ಮತ್ತೆ ಆ ಗಿಡದ ಬೆಳವಣಿಗೆ ಆಗುವುದಿಲ್ಲ ಎಂದರು. ಇದನ್ನು ನೀವೂ ಗಮನಿಸಿರಬಹುದು. ಎಷ್ಟೋ ಬಾರಿ ಸಣ್ಣ ಗಿಡದಲ್ಲೇ ನೂರಾರು ಕಾಯಿ ತುಂಬಿ, ಗಿಡ ಬಾಗಿ, ರೆಂಬೆ ಬಿದ್ದು ಹೋಗಿರುತ್ತೆ. ಆದರೆ ಗಿಡ ಸದೃಢವಾಗಿ ಬೆಳೆದಿದ್ದೇ ಆದಲ್ಲಿ ಈ ಸಮಸ್ಯೆ ಬರುವುದಿಲ್ಲ. ಹಾಗಾಗಿ ಗಿಡದ ಕುಡಿ ಚಿವುಟುವುದು ಒಂದು ಉತ್ತಮ ಬೇಸಾಯ ವಿಧಾನ.

ತೊಗರಿ ಕಣಜ ಎಂದೇ ಹೆಸರಾಗಿರುವ ಕಲಬುರಗಿಗೆ ಹೋಗಿದ್ದಾಗ ಅಲ್ಲಿನ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ತೊಗರಿ ಬೆಳೆಗಾರರೊಬ್ಬರು ಅಭಿವೃದ್ಧಿಪಡಿಸಿರುವ ತೊಗರಿ ಕುಡಿ ಕತ್ತರಿಸುವ ಒಂದು ಸರಳ ಸಾಧನ ತೋರಿಸಿದರು. ತೊಗರಿಯಲ್ಲಿ ಹೆಚ್ಚಿನ ಇಳುವರಿ ಪಡೆಯಬೇಕಾದರೆ ಅದರ ಬೆಳೆಯುವ ಕುಡಿಗಳನ್ನು ಕತ್ತರಿಸಬೇಕು. ಒಂದೆರಡು ಗಿಡ ಆದ್ರೆ ಕೈಲಿ ಚಿವುಟಬಹುದು. ಅದೇ ನೂರಾರು ಎಕರೆ ಆದರೆ ಏನು ಮಾಡುವುದು? ಆದರೆ ಈ ರೈತರು ಒಂದು ಉಪಾಯ ಕಂಡುಕೊಂಡಿದ್ದರು. ಈ ರೈತ ಒಂದು ಕೋಲಿನ ಮುಂಭಾಗಕ್ಕೆ ತಿರುಗುವ ದುಂಡನೆಯ ಕತ್ತರಿ ಜೋಡಿಸಿ, ಅದಕ್ಕೆ ಬ್ಯಾಟರಿ ಅಳವಡಿಸಿ ಗರ್ರನೆ ತಿರುಗುವಂತೆ ಮಾಡಿದ್ದರು. ಕೈಲಿ ಈ ಕೋಲು ಹಿಡಿದು, ಬಹಳ ಸುಲಭವಾಗಿ ಎಕರೆಗಟ್ಟಲೆ ತೊಗರಿ ಹೊಲದ ಕುಡಿ ಕತ್ತರಿಸಬಹುದಿತ್ತು. ಸರಿಯಾದ ಸಮಯದಲ್ಲಿ ಕುಡಿ ಕತ್ತರಿಸಿದ ತೋಗರಿ ಗಿಡಗಳಲ್ಲಿ ಫಸಲು ಜೊಂಪೆಜೊಂಪೆಯಾಗಿ ತೂಗುತ್ತಿತ್ತು.

ನುಗ್ಗೇನೂ ಮುರಿದು ಬೆಳೆಸು ಅಂತಾ ಹಳ್ಳಿ ನಾಣ್ಣುಡಿ ಇದೆ. ಸುಮ್ಮನೆ ಹಾಗೇ ಬೆಳೆಯಲು ಬಿಟ್ಟರೆ ನುಗ್ಗೆ ಫಸಲು ಬಿಡುವುದಿಲ್ಲ. ಅದನ್ನು ಕತ್ತರಿಸಬೇಕು. ಕರಿಬೇವು, ಮಾವು, ಸೀಬೆ, ದಾಳಿಂಬೆ ಹೀಗೆ ಅನೇಕ ತೋಟಗಾರಿಕಾ ಬೆಳೆಗಳನ್ನೂ ಕತ್ತರಿಸಿ ಬೆಳೆಸಬೇಕು. ಕುಡಿ ಚಿವುಟಿದಷ್ಟೂ ಗಿಡ ಸೊಂಪಾಗಿ ಬೆಳೆಯುತ್ತದೆ. ಗಿಡ ಬೆಳೆದಷ್ಟೂ, ಹೂವಿನ ಬೆಳವಣಿಗೆ ಜಾಸ್ತಿ. ಹೆಚ್ಚಾಗಿ ಹೂ ಅರಳಿದರೆ, ಮೊಗ್ಗು, ಹೀಚೂ ಜಾಸ್ತಿ, ಇದರಿಂದ ಇಳುವರಿಯೂ ಹೆಚ್ಚಾಗಲಿದೆ. ಮಲೆನಾಡಿನ ಜನರ ಒಂದು ಅಭ್ಯಾಸ ಗಮನಿಸಿ. ಅವರು ಬಗೆಬಗೆಯ ಸಸ್ಯಗಳ ಕುಡಿ ಬಳಸಿ ಪಲ್ಯ, ಚಟ್ನಿ ಮಾಡಿ ದಿನನಿತ್ಯದ ಆಹಾರವಾಗಿ ಬಳಸುತ್ತಾರೆ. ಗಿಡದ ಕುಡಿಗಳಲ್ಲಿ ಬೆಳವಣಿಗೆ ಚೋದಕಗಳ ಪ್ರಮಾಣ ಜಾಸ್ತಿ. ಅದು ಮಾನವನ ಆರೋಗ್ಯಕ್ಕೂ ಸಹಕಾರಿ. ಹಾಗೇ ಗಿಡಗಳ ಬೆಳವಣಿಗೆಗೂ ಸಹಕಾರಿ.

ಕುಡಿ ಚಿವುಟುವುದು ಒಳ್ಳೆಯದು ಅಂತಾ, ಗಿಡ ಪೂರ್ತಿ ಚಿವುಟಬಾರದು. ಇಳುವರಿ ಇರಲಿ ಆಗ ಗಿಡವೇ ಇರುವುದಿಲ್ಲ. ತಜ್ಞರ ಸಲಹೆ ಪಡೆದು ಯಾವ ಮಟ್ಟದಲ್ಲಿ ಕುಡಿ ಚಿವುಟುವ ಕೆಲಸ ಮಾಡಬೇಕು. keshavamurty.n@gmail.com

 

ಆಂದೋಲನ ಡೆಸ್ಕ್

Recent Posts

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…

1 hour ago

ಟಿ.ನರಸೀಪುರ| ಆನೆ ದಾಳಿಗೆ ರೈತ ಬಲಿ

ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್‌ ಠಾಣೆ ವ್ಯಾಪ್ತಿಯ…

5 hours ago

ಮೈಸೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಪೂರೈಸುತ್ತಿದ್ದ ಇಬ್ಬರ ಬಂಧನ

ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

5 hours ago

ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಿ: ದಿನೇಶ್‌ ಗೂಳಿಗೌಡ

ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್‌ ಸದಸ್ಯ ಹಾಗೂ ಕರ್ನಾಟಕ ರಾಜ್ಯ…

5 hours ago

ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…

5 hours ago

ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ಅಂತಿಮ ಹಂತಕ್ಕೆ ತಲುಪಿದ ಎಸ್‌ಐಟಿ ತನಿಖೆ

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…

5 hours ago