ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್‌ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ಹರಾಜು ಪ್ರಕ್ರಿಯೆ ನಡೆಯುತ್ತದೆ. ಕಳೆದ ಬುಧವಾರ (ಸೆ.11) ಕ್ವಿಂಟಾಲ್ ಗೆ ಕನಿಷ್ಠ 3,000 ರೂ. ಗರಿಷ್ಟ 5,000 ರೂ. ಇತ್ತು. ಆದರೆ ಮೂರು ದಿನಗಳ ಅಂತರದಲ್ಲಿ ಮತ್ತೆ 200 ರೂ. ಏರಿಕೆಯಾಗಿದೆ. ಶ್ರಾವಣ ಮಾಸ ಮುಗಿದ ಬಳಿಕ ಮಾಂಸಾಹಾರ ಹೋಟೆಲ್, ರೆಸ್ಟೋರೆಂಟ್, ಬಾರ್‌ಗಳಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿರು ವುದರಿಂದ ಈರುಳ್ಳಿ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. ಅಲ್ಲದೆ ಈ ಬಾರಿ ಉತ್ತರ ಭಾರತದಲ್ಲಿ ಅತಿವೃಷ್ಟಿಯಿಂದಾಗಿ ಈರುಳ್ಳಿ ಫಸಲು ಹಾಳಾಗಿದ್ದು, ಗುಜರಾತ್, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶಕ್ಕೆ ಹೆಚ್ಚು ರವಾನೆಯಾಗುತ್ತಿದೆ. ಅಲ್ಲದೆ ಮುಂಬೈ, ಪುಣೆ, ಸೂರತ್, ದೆಹಲಿ ಮುಂತಾದ ನಗರಗಳಲ್ಲೂ ಬೇಡಿಕೆ ಹೆಚ್ಚಾಗಿರುವುದರ ಜತೆಗೆ ಈ ಬಾರಿಯ ಮುಂಗಾರು ಫಸಲು ಇನ್ನೂ ಮಾರುಕಟ್ಟೆಗೆ ಬಂದಿಲ್ಲದ ಪರಿಣಾಮ ದರ ಏರಿಕೆಯಾಗಿದೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.

ಆಂದೋಲನ ಡೆಸ್ಕ್

Recent Posts

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

11 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

22 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

37 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

39 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

42 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

45 mins ago