ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ಹರಾಜು ಪ್ರಕ್ರಿಯೆ ನಡೆಯುತ್ತದೆ. ಕಳೆದ ಬುಧವಾರ (ಸೆ.11) ಕ್ವಿಂಟಾಲ್ ಗೆ ಕನಿಷ್ಠ 3,000 ರೂ. ಗರಿಷ್ಟ 5,000 ರೂ. ಇತ್ತು. ಆದರೆ ಮೂರು ದಿನಗಳ ಅಂತರದಲ್ಲಿ ಮತ್ತೆ 200 ರೂ. ಏರಿಕೆಯಾಗಿದೆ. ಶ್ರಾವಣ ಮಾಸ ಮುಗಿದ ಬಳಿಕ ಮಾಂಸಾಹಾರ ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿರು ವುದರಿಂದ ಈರುಳ್ಳಿ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. ಅಲ್ಲದೆ ಈ ಬಾರಿ ಉತ್ತರ ಭಾರತದಲ್ಲಿ ಅತಿವೃಷ್ಟಿಯಿಂದಾಗಿ ಈರುಳ್ಳಿ ಫಸಲು ಹಾಳಾಗಿದ್ದು, ಗುಜರಾತ್, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶಕ್ಕೆ ಹೆಚ್ಚು ರವಾನೆಯಾಗುತ್ತಿದೆ. ಅಲ್ಲದೆ ಮುಂಬೈ, ಪುಣೆ, ಸೂರತ್, ದೆಹಲಿ ಮುಂತಾದ ನಗರಗಳಲ್ಲೂ ಬೇಡಿಕೆ ಹೆಚ್ಚಾಗಿರುವುದರ ಜತೆಗೆ ಈ ಬಾರಿಯ ಮುಂಗಾರು ಫಸಲು ಇನ್ನೂ ಮಾರುಕಟ್ಟೆಗೆ ಬಂದಿಲ್ಲದ ಪರಿಣಾಮ ದರ ಏರಿಕೆಯಾಗಿದೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…