ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ಹರಾಜು ಪ್ರಕ್ರಿಯೆ ನಡೆಯುತ್ತದೆ. ಕಳೆದ ಬುಧವಾರ (ಸೆ.11) ಕ್ವಿಂಟಾಲ್ ಗೆ ಕನಿಷ್ಠ 3,000 ರೂ. ಗರಿಷ್ಟ 5,000 ರೂ. ಇತ್ತು. ಆದರೆ ಮೂರು ದಿನಗಳ ಅಂತರದಲ್ಲಿ ಮತ್ತೆ 200 ರೂ. ಏರಿಕೆಯಾಗಿದೆ. ಶ್ರಾವಣ ಮಾಸ ಮುಗಿದ ಬಳಿಕ ಮಾಂಸಾಹಾರ ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿರು ವುದರಿಂದ ಈರುಳ್ಳಿ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. ಅಲ್ಲದೆ ಈ ಬಾರಿ ಉತ್ತರ ಭಾರತದಲ್ಲಿ ಅತಿವೃಷ್ಟಿಯಿಂದಾಗಿ ಈರುಳ್ಳಿ ಫಸಲು ಹಾಳಾಗಿದ್ದು, ಗುಜರಾತ್, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶಕ್ಕೆ ಹೆಚ್ಚು ರವಾನೆಯಾಗುತ್ತಿದೆ. ಅಲ್ಲದೆ ಮುಂಬೈ, ಪುಣೆ, ಸೂರತ್, ದೆಹಲಿ ಮುಂತಾದ ನಗರಗಳಲ್ಲೂ ಬೇಡಿಕೆ ಹೆಚ್ಚಾಗಿರುವುದರ ಜತೆಗೆ ಈ ಬಾರಿಯ ಮುಂಗಾರು ಫಸಲು ಇನ್ನೂ ಮಾರುಕಟ್ಟೆಗೆ ಬಂದಿಲ್ಲದ ಪರಿಣಾಮ ದರ ಏರಿಕೆಯಾಗಿದೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…