ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ಹರಾಜು ಪ್ರಕ್ರಿಯೆ ನಡೆಯುತ್ತದೆ. ಕಳೆದ ಬುಧವಾರ (ಸೆ.11) ಕ್ವಿಂಟಾಲ್ ಗೆ ಕನಿಷ್ಠ 3,000 ರೂ. ಗರಿಷ್ಟ 5,000 ರೂ. ಇತ್ತು. ಆದರೆ ಮೂರು ದಿನಗಳ ಅಂತರದಲ್ಲಿ ಮತ್ತೆ 200 ರೂ. ಏರಿಕೆಯಾಗಿದೆ. ಶ್ರಾವಣ ಮಾಸ ಮುಗಿದ ಬಳಿಕ ಮಾಂಸಾಹಾರ ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿರು ವುದರಿಂದ ಈರುಳ್ಳಿ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. ಅಲ್ಲದೆ ಈ ಬಾರಿ ಉತ್ತರ ಭಾರತದಲ್ಲಿ ಅತಿವೃಷ್ಟಿಯಿಂದಾಗಿ ಈರುಳ್ಳಿ ಫಸಲು ಹಾಳಾಗಿದ್ದು, ಗುಜರಾತ್, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶಕ್ಕೆ ಹೆಚ್ಚು ರವಾನೆಯಾಗುತ್ತಿದೆ. ಅಲ್ಲದೆ ಮುಂಬೈ, ಪುಣೆ, ಸೂರತ್, ದೆಹಲಿ ಮುಂತಾದ ನಗರಗಳಲ್ಲೂ ಬೇಡಿಕೆ ಹೆಚ್ಚಾಗಿರುವುದರ ಜತೆಗೆ ಈ ಬಾರಿಯ ಮುಂಗಾರು ಫಸಲು ಇನ್ನೂ ಮಾರುಕಟ್ಟೆಗೆ ಬಂದಿಲ್ಲದ ಪರಿಣಾಮ ದರ ಏರಿಕೆಯಾಗಿದೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…