ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಪ್ರತಿ ಬುಧವಾರ ಮತ್ತು ಶನಿವಾರ ಹರಾಜು ಪ್ರಕ್ರಿಯೆ ನಡೆಯುತ್ತದೆ. ಕಳೆದ ಬುಧವಾರ (ಸೆ.11) ಕ್ವಿಂಟಾಲ್ ಗೆ ಕನಿಷ್ಠ 3,000 ರೂ. ಗರಿಷ್ಟ 5,000 ರೂ. ಇತ್ತು. ಆದರೆ ಮೂರು ದಿನಗಳ ಅಂತರದಲ್ಲಿ ಮತ್ತೆ 200 ರೂ. ಏರಿಕೆಯಾಗಿದೆ. ಶ್ರಾವಣ ಮಾಸ ಮುಗಿದ ಬಳಿಕ ಮಾಂಸಾಹಾರ ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಾಗಿರು ವುದರಿಂದ ಈರುಳ್ಳಿ ದರದಲ್ಲಿ ನಿರಂತರವಾಗಿ ಏರಿಕೆ ಕಂಡು ಬಂದಿದೆ. ಅಲ್ಲದೆ ಈ ಬಾರಿ ಉತ್ತರ ಭಾರತದಲ್ಲಿ ಅತಿವೃಷ್ಟಿಯಿಂದಾಗಿ ಈರುಳ್ಳಿ ಫಸಲು ಹಾಳಾಗಿದ್ದು, ಗುಜರಾತ್, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶಕ್ಕೆ ಹೆಚ್ಚು ರವಾನೆಯಾಗುತ್ತಿದೆ. ಅಲ್ಲದೆ ಮುಂಬೈ, ಪುಣೆ, ಸೂರತ್, ದೆಹಲಿ ಮುಂತಾದ ನಗರಗಳಲ್ಲೂ ಬೇಡಿಕೆ ಹೆಚ್ಚಾಗಿರುವುದರ ಜತೆಗೆ ಈ ಬಾರಿಯ ಮುಂಗಾರು ಫಸಲು ಇನ್ನೂ ಮಾರುಕಟ್ಟೆಗೆ ಬಂದಿಲ್ಲದ ಪರಿಣಾಮ ದರ ಏರಿಕೆಯಾಗಿದೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…