ಅನ್ನದಾತರ ಅಂಗಳ

ತಂದೆಯ ಆಸೆಯಂತೆ ಸಾವಯವ ಪದ್ಧತಿಯಲ್ಲಿ ಭತ್ತ ಬೆಳೆದೆ

• ಜಿ.ಎಂ.ಪ್ರವೀಣ್ ಕುಮಾರ್

ನನ್ನ ತಂದೆ ರೈತರಾಗಿದ್ದರಿಂದ ನನಗೂ ಚಿಕ್ಕಂದಿ ನಿಂದಲೂ ವ್ಯವಸಾಯದ ನಂಟಿತ್ತು. ಅವರು ಮಧುಮೇಹ ಹಾಗೂ ಹೃದಯ ಕಾಯಿಲೆ ಯಿಂದ ಬಳಲುತ್ತಿದ್ದರು. ನಮ್ಮ ಮುಖ್ಯ ಆಹಾರ ಅನ್ನ ಆಗಿರುವುದರಿಂದ, ಸಾವಯವ ಮಾದರಿ ಯಲ್ಲಿ ಭತ್ತ ಬೆಳೆಯಬೇಕು ಎಂದು ಅವರು ಆಗಾಗ್ಗೆ ಹೇಳುತ್ತಿದ್ದರು. ಆದರೆ ಅವರ ಈ ಆಸೆ ಈಡೇರಲೇ ಇಲ್ಲ, 2005ರಲ್ಲಿ ತೀರಿಕೊಂಡರು.

ಈಗಿನ ಪೀಳಿಗೆಯಲ್ಲಿ, ಎಲ್ಲರಿಗೂ ಒಂದಿ ಲ್ಲೊಂದು ಕಾಯಿಲೆ ಸರ್ವೇಸಾಮಾನ್ಯವಾಗಿದೆ. ನಮ್ಮ ಊರಿನಲ್ಲಿ, ನೆರೆ ಹೊರೆ ಹಳ್ಳಿಗಳಲ್ಲಿ, ಯಾರೂ ಸಾವಯವ ಮಾದರಿಯಲ್ಲಿ ಭತ್ತ ಬೆಳೆಯುತ್ತಿರಲಿಲ್ಲ. ನಮ್ಮ ತಂದೆಯ ಈ ಆಸೆ ಆಗಾಗ್ಗೆ ನನ್ನನ್ನು ಕಾಡುತ್ತಿತ್ತು. 2017ರಲ್ಲಿ ಈಶ್ವರನ್ ಪಿ.ತೀರ್ಥರವರ ಪರಿಚಯವಾಯಿತು. ನಾನು ಇನ್‌ಫೋಸಿಸ್‌ನಿಂದ 3 ತಿಂಗಳು ರಜೆ ಪಡೆದು, ಅವರ ಮಾರ್ಗದರ್ಶನದಿಂದ ಸಾವಯವ ಭತ್ತ ಬೆಳೆದೆ. ಕೆಲವು ಸ್ನೇಹಿತರಿಗೆ ಹಂಚಿದೆ, ಅವರು ದೊಡ್ಡ ಶಹಬ್ಬಾಸ್ ಗಿರಿಯನ್ನೇ ಕೊಟ್ಟರು. ಅಲ್ಲಿಂದ ಇಲ್ಲಿಯವರೆಗೆ ನನ್ನ ತಾಯಿಯ ಸಹಾಯದಿಂದ, 8 ಗುಂಟೆಯಲ್ಲಿ ಸಾವಯವ ಭತ್ತ ಬೆಳೆಯುವುದನ್ನು ಮುಂದುವರಿಸಿಕೊಂಡು ಬಂದಿದ್ದೇನೆ. ‘ಸಿದ್ದ ಸಣ್ಣ’ ಎಂಬ ಭತ್ತದ ತಳಿಯನ್ನು ಬೆಳೆದಿದ್ದೇನೆ.

2017ರ ಜನವರಿ ತಿಂಗಳಿಂದ, ಎಂಟು ತಿಂಗಳ ಕಾಲ ಯಾವುದೇ ವಾಣಿಜ್ಯ ಬೆಳೆಗಳನ್ನು ಬೆಳೆಯದೆ, ಹಸಿರೆಲೆ ಗೊಬ್ಬರ ಬೆಳೆಗಳಾದ ಸೆಣಬು, ಹುರುಳಿ, ಎಳ್ಳನ್ನು ಬಿತ್ತನೆ ಮಾಡಿ, ಹೂವು ಬಿಡುವ ಸಂದರ್ಭದಲ್ಲಿ ಉತ್ತು ಭೂಮಿಗೆ ಸೇರಿಸಿದೆವು ಮತ್ತು ಸೆಣಬಿನಲ್ಲಿ ಎನ್.ಪಿ.ಎಚ್. ಹೇರಳವಾಗಿರುತ್ತದೆ. ಹೀಗೆ ಮಾಡುವುದರಿಂದ ಡಯಿಂಚಾ ಪ್ರಮಾಣ ಜಾಸ್ತಿಯಾಗುತ್ತದೆ.

ನಂತರ ಸೆಪ್ಟೆಂಬರ್‌ನಲ್ಲಿ, 6 ಗಾಡಿ ಕುರಿ ಗೊಬ್ಬರ ಹಾಕಿ ರಾಗಿ ಬೆಳೆದೆವು. ಬಳಿಕ ನವೆಂಬರ್ ನಲ್ಲಿ ಜೀವಾಮೃತವನ್ನು ಸಿಂಪಡಿಸಿದೆವು. ಬಳಿಕ ಡಿಸೆಂಬರ್‌ನಲ್ಲಿ ರಾಗಿ ಕಟಾವು ಮಾಡಿ, ಡಯಿಂಚಾ ಬಿತ್ತನೆ ಮಾಡಿದೆವು.

ಬಿಲ್ವ ಪತ್ರೆ ಕಷಾಯವನ್ನು ಡಿಸೆಂಬರ್‌ನಿಂದ, ಫೆಬ್ರವರಿವರೆಗೆ, ತಿಂಗಳಿಗೊಮ್ಮೆ ಮೂರು ಸಲ ಸಿಂಪಡಿಸಿದೆವು. ಇದರಿಂದ ಶತ್ರು ಕೀಟಗಳ ನಾಶವಾಗುತ್ತದೆ.

ನಂತರ ಜನವರಿ 15ರಂದು ಭತ್ತ ವಟ್ಟಲು ಹಾಕಿ, ಫೆಬ್ರವರಿ 10ರಂದು ನಾಟಿ ಮಾಡಿದೆವು. 10 ರಿಂದ 15 ದಿನಗಳಿಗೊಮ್ಮೆ, ಕಳೆ ತೆಗೆದೆವು. ಇದರಿಂದ ಗಿಡಗಳು ಚೆನ್ನಾಗಿ ಉಸಿರಾಡಲು ಸಹಾಯಕ. ಪೈರುಗಳಿಗೆ ತುಳಸಿ ಕಷಾಯವನ್ನು
ಮಾರ್ಚ್‌ನಿಂದ ಮೂರು ಸಲ, 15 ದಿನಗಳಿ ಗೊಮ್ಮೆ ಸಿಂಪಡಿಸಿದೆವು. ಇದರಿಂದ ಭತ್ತದ ಕಾಳುಗಳು ದಪ್ಪವಾಗುತ್ತವೆ. ಆಗಾಗ್ಗೆ ನಾಟಿ ಹಸುವಿನ ಸೆಗಣಿಯನ್ನು ನೀರಿನ ಜೊತೆ ಬಿಟ್ಟೆವು. ಇಷ್ಟೆಲ್ಲ ಸಾವಯವ ಬಳಕೆಯ ಬಳಿಕ ಆರೋಗ್ಯಕರ ಸಾವಯವ ಭತ್ತ ಬೆಳೆದೆವು. ಈ ಪದ್ಧತಿಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಲು ಆಸಕ್ತ ರೈತರು ಕೈಜೋಡಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.

(ಲೇಖಕರು ಬಿ.ಇ.ಎಲೆಕ್ಟ್ರಾನಿಕ್ಸ್‌ನಲ್ಲಿ ಪದವೀಧರರಾಗಿದ್ದು, ಇನ್ಫೋಸಿಸ್‌ನಲ್ಲಿ 17 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.)

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

13 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

13 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

13 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

13 hours ago