• ಜಿ.ಕೃಷ್ಣ ಪ್ರಸಾದ್
ನಾಲ್ಕು ವರ್ಷಗಳ ಕೆಳಗೆ ರಾಜಸ್ಥಾನದ ಬಾನಸವಾಡ ಪಟ್ಟಣದ ಬೀಜಮೇಳಕ್ಕೆ ಹೋಗಿದ್ದೆ. ಬೀಜಮೇಳ ಆಯೋಜನೆಯಾಗಿದ್ದ ‘ವಾಗ್ದಾರ’ ಎಂಬ ಸಂಸ್ಥೆಯ ಆವರಣದಲ್ಲಿ ಸಿಂಗಪುರ ಚೆರಿ ಮರದ ರೀತಿ ಹರಡಿಕೊಂಡ ಹಿಪ್ಪುನೇರಳೆ ಗಿಡವಿತ್ತು.

ಗಿಡದ ತುಂಬಾ ಹಣ್ಣುಗಳು. ಕಿತ್ತಷ್ಟೂ ಬೊಗಸೆ ತುಂಬುತ್ತಿದ್ದವು. ನಾನಿದ್ದ ಎರಡೂ ದಿನ ಸಾಕು ಬೇಕಷ್ಟು ರೇಷ್ಮೆ ಹಣ್ಣು ತಿಂದಿದ್ದೆ.

ನಮ್ಮೂರಲ್ಲೂ ಹಿಪ್ಪು ನೇರಳೆ ಬೆಳೆಸುತ್ತಿದ್ದೆವು. ಆದರೆ ರೇಷ್ಮೆ ಹುಳುವಿನ ಮೇವಿಗೆ ಎಳೆಯ ಸೊಪ್ಪು ಕತ್ತರಿಸುತ್ತಿದ್ದರಿಂದ ಅದು ಬೆಳೆದು ಹಣ್ಣಾಗುವ ಅವಕಾಶ ಇರುತ್ತಿರಲಿಲ್ಲ. ಬದು ವಿನಲ್ಲಿ ತಪ್ಪಿಸಿಕೊಂಡ ಗಿಡಗಳಲ್ಲಿ ಅಪರೂಪಕ್ಕೆ ಒಂದೆರಡು ರೇಷ್ಮೆ ಹಣ್ಣುಗಳು ಸಿಗುತ್ತಿದ್ದವು.

ಇಲ್ಲಿ ನೋಡಿದರೆ ಗಿಡದ ತುಂಬಾ ಹಣ್ಣಿನ ಸುಗ್ಗಿ. ಅದರ ರುಚಿಗೆ ಮನಸೋತು ಒಂದಷ್ಟು ಕಡ್ಡಿಗಳನ್ನು ತಂದು ತೋಟದಲ್ಲಿ ನೆಟ್ಟಿದ್ದೆ. ಮೊನ್ನೆ ತೋಟಕ್ಕೆ ಹೋದಾಗ ನಾಲ್ಕು ವರ್ಷಗಳ ಹಿಂದೆ ನೆಟ್ಟ ರಾಜಸ್ಥಾನದ ಹಿಪ್ಪುನೇರಳೆ ಗಿಡ ಸಣ್ಣ ಮರವಾಗಿ, ಹಣ್ಣು ಹೊತ್ತು ತೊನೆಯುತ್ತಿತ್ತು. ಮನಸೋ ಇಚ್ಛೆ ತಿಂದು ಸಂಭ್ರಮಪಟ್ಟೆ.

ಹಿಪ್ಪು ನೇರಳೆ ಹಣ್ಣಿನ ತಳಿಗಳು: ಹಿಪ್ಪು ನೇರಳೆಯಲ್ಲಿ ನೂರಾರು ತಳಿಗಳಿವೆ. ತಮಿಳುನಾಡಿನ ಹೊಸೂರಿನಲ್ಲಿರುವ ರೇಷ್ಮೆ ಸಂಶೋಧನಾ ಕೇಂದ್ರದಲ್ಲಿ 1,269 ತಳಿಗಳ ಸಂಗ್ರಹವಿದೆ. ರೇಷ್ಮೆ ಕೃಷಿಗೆ ಬಳಸುವ ಸಾಮಾನ್ಯ ಹಿಪ್ಪು ನೇರಳೆ ತಳಿಗಳು ಹಣ್ಣಿಗೆ ಸೂಕ್ತವಲ್ಲ. ಮರವಾಗುವ, ಸಿಹಿ ರುಚಿ ಇರುವ ಉದ್ದನಾದ ಹಣ್ಣಿನ ವಿಶೇಷ ತಳಿಗಳ ಬೆಳೆಸಬೇಕು. ಈ ತಳಿಗಳು ಸಾಕು ಬೇಕಷ್ಟು ಹಣ್ಣು ಕೊಡುತ್ತವೆ; ನೆರಳೂ ನೀಡುತ್ತವೆ.

ನೆಟ್ಟ ಒಂದು ವರ್ಷಕ್ಕೆ ಹಣ್ಣು ಸಿಕ್ಕರೂ, ಸಮೃದ್ಧವಾಗಿ ಫಲ ನೀಡಲು ಮೂರು-ನಾಲ್ಕು ವರ್ಷ ಕಾಯಬೇಕು. ರೋಗ ಕೀಟಗಳ ಬಾಧೆ ಯಿಲ್ಲ. ಹೆಚ್ಚು ನೀರು, ಆರೈಕೆ ಕೇಳುವುದಿಲ್ಲ.

ಮೌಲ್ಯವರ್ಧನೆಯ ಅವಕಾಶಗಳು: ಹಣ್ಣುಗಳನ್ನು ಮಾರುಕಟ್ಟೆಗೆ ತರುವುದು ಕಷ್ಟ. ಹಾಲಿನಂತೆ ಫ್ರಿಜ್‌ನಲ್ಲಿ ಸಂಗ್ರಹಿಸಿಡಬೇಕು. ಇಲ್ಲವೆ ರೈತ ಸಂತೆಗಳಲ್ಲಿ ನೇರ ಮಾರಾಟ ಮಾಡಬೇಕು. ರೇಷ್ಮೆ ಹಣ್ಣನ್ನು ಒಣ ದ್ರಾಕ್ಷಿಯಂತೆ ನಿರ್ಜಲೀಕರಣ ಮಾಡಿ ಮಾರುವುದು ಹೆಚ್ಚು ಲಾಭದಾಯಕ. ಮಹಾರಾಷ್ಟ್ರದ ಕಂಪೆನಿಯೊಂದು ಇದಾಗಲೇ ಒಣ ರೇಷ್ಮೆ ಹಣ್ಣನ್ನು ಮಾರುಕಟ್ಟೆಗೆ ತಂದಿದೆ.

ನನ್ನ ತೋಟದ ಹಿಪ್ಪು ನೇರಳೆ ಹಣ್ಣನ್ನು ಎರಡು ದಿನ ಡೈಯರ್‌ನಲ್ಲಿಟ್ಟು ಒಣಗಿಸಿ ನೋಡಿದೆ. ಒಣ ದ್ರಾಕ್ಷಿಯಂತೆ ರುಚಿಯಾಗಿತ್ತು. ಬೇಗ ಬೂಸ್ಟ್ ಬರುವುದರಿಂದ, ಒಣಗಿಸುವಾಗ ಜಾಗ್ರತೆ ವಹಿಸಬೇಕು. ಹಿಪ್ಪುನೇರಳೆ ಹಣ್ಣು ರುಬ್ಬಿ, ಜೇನುತುಪ್ಪ ಸೇರಿಸಿದರೆ ರುಚಿಕರ ಜಾಮ್ ಸಿದ್ಧವಾಗುತ್ತದೆ. ಎಳೆಯ ಹಿಪ್ಪುನೇರಳೆ ಎಲೆಯ ಚೂರುಗಳನ್ನು ಕುದಿಯುವ ನೀರಿಗೆ ಹಾಕಿ ‘ಹರ್ಬಲ್ ಟೀ ತಯಾರಿಸಬಹುದು. ಎಲೆಗಳನ್ನು ಒಣಗಿಸಿ, ಪುಡಿಮಾಡಿ ಕೂಡ ಚಹ ತಯಾರಿಸಬಹುದು. ಇದರ ಸೇವನೆಯಿಂದ ಸುಖಕರ ನಿದ್ದೆ ಬರುತ್ತದೆ. ನರಗಳ ಸೆಳೆತ ಶಕ್ತಿ ಕಡಿಮೆಯಾಗುತ್ತದೆ. ಯಾವನೋ ಪುಣ್ಯಾತ್ಮ ರೇಷ್ಮೆ ಎಲೆ ಪುಡಿ ಮಾಡುವ ವಿಧಾನವನ್ನೂ ಪೇಟೆಂಟ್ ಮಾಡಿಕೊಂಡಿದ್ದಾನಂತೆ!

ಥಾಯ್‌ ಲ್ಯಾಂಡ್ ದೇಶದ ಹಣ್ಣಿನ ಅಂಗಡಿಗಳಲ್ಲಿ ಇದರ ಹಣ್ಣು ಮಾರಾಟಕ್ಕೆ ಸಿಗುತ್ತದೆ.

ಜಾಮ್ ಜಲ್ಲಿ ಮೊದಲಾದ ಇದರ ಮೌಲ್ಯವರ್ಧಿತ ಪದಾರ್ಥಗಳು ಲಭ್ಯ. ಮೈಸೂರು- ಕೆಆರ್‌ಎಸ್ ರಸ್ತೆಯಲ್ಲಿ ಬೆಳಗೊಳ ಸಮೀಪ ಇರುವ ಬೆಳವಲ ಪರಿಸರ ತೋಟ’ ದಲ್ಲಿ ಹಣ್ಣಿನ ತಳಿಯ ಹಿಪ್ಪು ನೇರಳೆ ಗಿಡಗಳು ಲಭ್ಯವಿವೆ. ಆಸಕ್ತರು ಮದನ್ ಮೊ. ಸಂ. 7411048468 ಸಂಪರ್ಕಿಸಬಹುದು.

ಔಷಧಿ ಗುಣಗಳ ಖಜಾನೆ: 
ಹಿಪ್ಪು ನೇರಳೆ ಹಣ್ಣಿನ ಬಳಕೆಯಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ. ದೃಷ್ಟಿ ದೋಷ ಸುಧಾರಿಸುತ್ತದೆ. ರಕ್ತ ಶುದ್ದೀಕರಣಕ್ಕೆ ಸಹಕಾರಿ, ನರದೌರ್ಬಲ್ಯದಿಂದ ಬಳಲುವವರಿಗೂ ಇದು
ಔಷಧಿ, ಹಿಪ್ಪು ನೇರಳೆ ಹಣ್ಣು ವಿಟಮಿನ್ ಸಿ, ವಿಟಮಿನ್ ಇ, ಪೊಟಾಷಿಯಂ ಮತ್ತು ಕಬ್ಬಿಣದಿಂದ ಸಮೃದ್ಧವಾಗಿದೆ. ಹಾಗಾಗಿ ರಕ್ತಪುಷ್ಟಿ ಹೆಚ್ಚಿಸಲು ಸಹಕಾರಿ. ಹಿಪ್ಪು ನೇರಳೆ ಹಣ್ಣು
ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಲು ಸಹಕಾರಿ, ಹಾಗಾಗಿ ಮಧುಮೇಹಿಗಳು ಅಂಜಿಕೆಯಿಲ್ಲದೆ ಹಿಪ್ಪು ನೇರಳೆ ಹಣ್ಣು ಚಪ್ಪರಿಸಬಹುದು. ನಮ್ಮ ದೇಹದ ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಅನಗತ್ಯ ಕೊಬ್ಬು ಈ ಹಣ್ಣಿನ ಸೇವನೆಯಿಂದ ಕಡಿಮೆಯಾಗುತ್ತದೆ. ಇದರಲ್ಲಿ ಅಧಿಕ ಪ್ರಮಾಣದ ಕಬ್ಬಿಣದ ಅಂಶ ಇದ್ದು, ಇದು ನಮ್ಮ ದೇಹದಲ್ಲಿ ರಕ್ತ ಚಲನೆಯನ್ನು ವೃದ್ಧಿಸುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

15 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

17 mins ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

19 mins ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

24 mins ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

30 mins ago