ಅನ್ನದಾತರ ಅಂಗಳ

ಕೃಷಿ ಉತ್ಪನ್ನಗಳ ರಫ್ತು ಪ್ರಮಾಣದಲಿ ಹೆಚ್ಚಳ

೨೦೨೪-೨೫ನೇ ಹಣಕಾಸು ವರ್ಷದಲ್ಲಿ ಭಾರತದ ಅಕ್ಕಿ ಮತ್ತು ವಾಣಿಜ್ಯ ಬೆಳೆಗಳ ರ- ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಕಾಫಿ, ಚಹಾ, ತಂಬಾಕು ಮತ್ತು ಪಸಾಲೆ ಪದಾರ್ಥ ಗಳ ರ- ೯. ೧೬ ಬಿಲಿಯನ್ ಡಾಲರ್‌ಗಳಿಗೆ ತಲುಪಿದೆ. ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳ ಸೇರಿದಂತೆ ಕೃಷಿ ಉತ್ಪನ್ನಗಳ ಒಟ್ಟು ರಫ್ತಿನ ಪ್ರಮಾಣ ಶೇ. ೧೩ರಷ್ಟು ಹೆಚ್ಚಳವಾಗಿದೆ.

ವಾಣಿಜ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಭಾರತದಿಂದ ಅಕ್ಕಿ ಹಾಗೂ ವಾಣಿಜ್ಯ ಬೆಳೆಗಳ ರ- ಪ್ರಮಾಣ ಕಳೆದ ಹಣಕಾಸು ವರ್ಷದಲ್ಲಿ ಗಣನೀಯ ವಾಗಿ ಹೆಚ್ಚಳವಾಗಿದೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿ ಸಿದರೆ ಇವುಗಳ ರ- ಪ್ರಮಾಣ ಶೇ. ೧೭. ೧ರಷ್ಟು ಹೆಚ್ಚಳ ಕಂಡಿದ್ದರೆ, ರ- ವಹಿವಾಟು ೭. ೮೨ ಬಿಲಿಯನ್ ಡಾಲರ್ ಗಳಿಂದ ೯. ೧೬ ಬಿಲಿಯನ್ ಡಾಲರ್‌ಗೆ ಜಿಗಿದಿದೆ.

ವರ್ಜೀನಿಯಾ ತಂಬಾಕು ರಫ್ತಿನಲ್ಲಿ ಶೇ. ೩೬. ೬ರಷ್ಟು ಹೆಚ್ಚಳವಾಗಿದ್ದರೆ, ಕಾಫಿ ಶೇ. ೪೦, ಚಹಾ ಶೇ. ೧೦. ೮, ಸಾಂಬಾರ ಪದಾರ್ಥಗಳು ಶೇ. ೪. ೭ರಷ್ಟು ರ- ಏರಿಕೆಯಾಗಿದೆ.

ಅಕ್ಕಿ ರಫ್ತಿನಲ್ಲಿ ಗಣನೀಯ ಹೆಚ್ಚಳ: ೨೦೨೪-೨೫ನೇ ಸಾಲಿನಲ್ಲಿ ಕೃಷಿ ಹಾಗೂ ಸಂಸ್ಕರಿತ ಆಹಾರ ಪದಾರ್ಥಗಳ ರ- ೨೫. ೧೪ ಬಿಲಿಯನ್ ಡಾಲರ್ ತಲುಪಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮೊತ್ತ ಶೇ. ೧೩ರಷ್ಟು ಹೆಚ್ಚಳವಾಗಿದೆ. ಈ ಹೆಚ್ಚಳದಲ್ಲಿ ಅಕ್ಕಿಯ ಪಾಲು ದೊಡ್ಡದು. ಕಳೆದ ಹಂಗಾಮಿನಲ್ಲಿ ಉತ್ತಮ -ಸಲು ಬಂದ ಕಾರಣ ಭಾರತದಿಂದ ಕೃಷಿ ಉತ್ಪನ್ನಗಳ ರ- ಪ್ರಮಾಣ ಸಾಕಷ್ಟು ಏರಿಕೆ ಕಂಡಿದ್ದು, ೨೦೨೪ರ ಸೆಪ್ಟೆಂಬರ್ ವರೆಗೆ ಅಕ್ಕಿ ರಫ್ತಿಗೆ ಇದ್ದ ನಿರ್ಬಂಧ ಸಡಿಲಿಸಿದ ಕಾರಣ ಅಕ್ಕಿ ರ- ಶೇ. ೨೦ರಷ್ಟು ಹೆಚ್ಚಳವಾಗಿದೆ. ಕಳೆದ ಒಂದು ದಶಕ ದಿಂದಲೂ ಭಾರತವು ವಿಶ್ವದ ಅತಿದೊಡ್ಡ ಅಕ್ಕಿ ರ- ರಾಷ್ಟ್ರವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮೊದಲಾದ ದೇಶಗಳ ನಡುವೆ ಭಾರತ ಅಗ್ರಪಂಕ್ತಿಯನ್ನು ಕಾಯ್ದುಕೊಂಡಿದೆ. ಕೃಷಿ ಉತ್ಪನ್ನಗಳ ಜೊತೆಗೆ ಹೈನೋದ್ಯಮದಿಂದ ಹಾಲು, ಮೊಟ್ಟೆ, ಮಾಂಸ, ಕೋಳಿ ಮಾಂಸಗಳ ರ- ಕೂಡ ಹೆಚ್ಚಳವಾಗಿರುವುದನ್ನು ವಾಣಿಜ್ಯ ಸಚಿವಾಲಯದ ಮಾಹಿತಿ ಹೊರಹಾಕಿದೆ.

ಆಂದೋಲನ ಡೆಸ್ಕ್

Recent Posts

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

1 hour ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

5 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

6 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

12 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

12 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

12 hours ago