ಅನ್ನದಾತರ ಅಂಗಳ

ಡಾ.ರಾಜ್‌ರಿಂದ ಸ್ಫೂರ್ತಿ; ರೈತರಾದ ಯಮುನಾ

ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ.

ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ ಸಮಗ್ರ ಕೃಷಿ ಮಾಡುತ್ತಿರುವ ಇವರು 2 ಎಕರೆಯಲ್ಲಿ ಡ್ರಾಗನ್ ಫುಟ್, ಉಳಿದ ಮೂರು ಎಕರೆಯಲ್ಲಿ ಮಾವು, ಆಮ್ಲ, ನೇರಳೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಸಂಪೂರ್ಣ ಸಾವಯವ ಕೃಷಿ ಪದ್ಧತಿ ಅನುಸರಿಸುವ ಇವರು, ಆರಂಭದಲ್ಲಿ ತಮ್ಮ ಜಮೀನಿನಲ್ಲಿ ಸರಿಯಾಗಿ ನೀರು ಸಿಗುತ್ತಿಲ್ಲದ ಪರಿಣಾಮ ಮತ್ತು ಜಮೀನು ಕಲ್ಲುಭೂಮಿಯಾಗಿದ್ದರಿಂದ ಪ್ರಾಯೋಗಿಕವಾಗಿ ಡ್ರಾಗನ್ ಫುಟ್ ಬೆಳೆಯಲು ಆರಂಭಿಸಿದರು. ನಂತರ ಮಳೆ ಉತ್ತಮವಾದ್ದರಿಂದ ಜಮೀನಿನಲ್ಲಿಯೂ ನೀರು ಸಿಗಲು ಆರಂಭಿಸಿತು. ಬಳಿಕ ಜಲ ಮರುಪೂರಣ ಮಾಡಿಕೊಂಡಿದ್ದು, ನೀರು ಲಭಿಸುತ್ತಿದೆ. ಈ ನೀರನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದಾರೆ.

ಮೇ ತಿಂಗಳ ಕೊನೆಯ ವಾರದಿಂದ ಫಲ ನೀಡಲು ಆರಂಭವಾಗುವ ಡ್ರಾಗನ್ ಫುಟ್ ಅಕ್ಟೋಬರ್ ತಿಂಗಳವರೆಗೂ ಫಲ ನೀಡಲಿದೆ. ಒಟ್ಟಾರೆ ಈ ಕೃಷಿಯಿಂದ ಉತ್ತಮ ಆದಾಯ ಪಡೆಯುತ್ತಿರುವ ಯಮುನಾ ಸೂರ್ಯನಾರಾಯಣರವರು ಡಾ.ರಾಜ್ ಕುಮಾರ್ ರವರ ಬಂಗಾರದ ಮನುಷ್ಯ ಚಿತ್ರದಿಂದ ಸ್ಫೂರ್ತಿ ಪಡೆದು ರೈತರಾದೆವು ಎನ್ನುತ್ತಾರೆ.

andolanait

Recent Posts

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

5 mins ago

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

5 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

5 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

5 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

5 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

5 hours ago