ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ.
ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ ಸಮಗ್ರ ಕೃಷಿ ಮಾಡುತ್ತಿರುವ ಇವರು 2 ಎಕರೆಯಲ್ಲಿ ಡ್ರಾಗನ್ ಫುಟ್, ಉಳಿದ ಮೂರು ಎಕರೆಯಲ್ಲಿ ಮಾವು, ಆಮ್ಲ, ನೇರಳೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಸಂಪೂರ್ಣ ಸಾವಯವ ಕೃಷಿ ಪದ್ಧತಿ ಅನುಸರಿಸುವ ಇವರು, ಆರಂಭದಲ್ಲಿ ತಮ್ಮ ಜಮೀನಿನಲ್ಲಿ ಸರಿಯಾಗಿ ನೀರು ಸಿಗುತ್ತಿಲ್ಲದ ಪರಿಣಾಮ ಮತ್ತು ಜಮೀನು ಕಲ್ಲುಭೂಮಿಯಾಗಿದ್ದರಿಂದ ಪ್ರಾಯೋಗಿಕವಾಗಿ ಡ್ರಾಗನ್ ಫುಟ್ ಬೆಳೆಯಲು ಆರಂಭಿಸಿದರು. ನಂತರ ಮಳೆ ಉತ್ತಮವಾದ್ದರಿಂದ ಜಮೀನಿನಲ್ಲಿಯೂ ನೀರು ಸಿಗಲು ಆರಂಭಿಸಿತು. ಬಳಿಕ ಜಲ ಮರುಪೂರಣ ಮಾಡಿಕೊಂಡಿದ್ದು, ನೀರು ಲಭಿಸುತ್ತಿದೆ. ಈ ನೀರನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದಾರೆ.
ಮೇ ತಿಂಗಳ ಕೊನೆಯ ವಾರದಿಂದ ಫಲ ನೀಡಲು ಆರಂಭವಾಗುವ ಡ್ರಾಗನ್ ಫುಟ್ ಅಕ್ಟೋಬರ್ ತಿಂಗಳವರೆಗೂ ಫಲ ನೀಡಲಿದೆ. ಒಟ್ಟಾರೆ ಈ ಕೃಷಿಯಿಂದ ಉತ್ತಮ ಆದಾಯ ಪಡೆಯುತ್ತಿರುವ ಯಮುನಾ ಸೂರ್ಯನಾರಾಯಣರವರು ಡಾ.ರಾಜ್ ಕುಮಾರ್ ರವರ ಬಂಗಾರದ ಮನುಷ್ಯ ಚಿತ್ರದಿಂದ ಸ್ಫೂರ್ತಿ ಪಡೆದು ರೈತರಾದೆವು ಎನ್ನುತ್ತಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…