ಅನ್ನದಾತರ ಅಂಗಳ

ಡಾ.ರಾಜ್‌ರಿಂದ ಸ್ಫೂರ್ತಿ; ರೈತರಾದ ಯಮುನಾ

ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ.

ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ ಸಮಗ್ರ ಕೃಷಿ ಮಾಡುತ್ತಿರುವ ಇವರು 2 ಎಕರೆಯಲ್ಲಿ ಡ್ರಾಗನ್ ಫುಟ್, ಉಳಿದ ಮೂರು ಎಕರೆಯಲ್ಲಿ ಮಾವು, ಆಮ್ಲ, ನೇರಳೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಸಂಪೂರ್ಣ ಸಾವಯವ ಕೃಷಿ ಪದ್ಧತಿ ಅನುಸರಿಸುವ ಇವರು, ಆರಂಭದಲ್ಲಿ ತಮ್ಮ ಜಮೀನಿನಲ್ಲಿ ಸರಿಯಾಗಿ ನೀರು ಸಿಗುತ್ತಿಲ್ಲದ ಪರಿಣಾಮ ಮತ್ತು ಜಮೀನು ಕಲ್ಲುಭೂಮಿಯಾಗಿದ್ದರಿಂದ ಪ್ರಾಯೋಗಿಕವಾಗಿ ಡ್ರಾಗನ್ ಫುಟ್ ಬೆಳೆಯಲು ಆರಂಭಿಸಿದರು. ನಂತರ ಮಳೆ ಉತ್ತಮವಾದ್ದರಿಂದ ಜಮೀನಿನಲ್ಲಿಯೂ ನೀರು ಸಿಗಲು ಆರಂಭಿಸಿತು. ಬಳಿಕ ಜಲ ಮರುಪೂರಣ ಮಾಡಿಕೊಂಡಿದ್ದು, ನೀರು ಲಭಿಸುತ್ತಿದೆ. ಈ ನೀರನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದಾರೆ.

ಮೇ ತಿಂಗಳ ಕೊನೆಯ ವಾರದಿಂದ ಫಲ ನೀಡಲು ಆರಂಭವಾಗುವ ಡ್ರಾಗನ್ ಫುಟ್ ಅಕ್ಟೋಬರ್ ತಿಂಗಳವರೆಗೂ ಫಲ ನೀಡಲಿದೆ. ಒಟ್ಟಾರೆ ಈ ಕೃಷಿಯಿಂದ ಉತ್ತಮ ಆದಾಯ ಪಡೆಯುತ್ತಿರುವ ಯಮುನಾ ಸೂರ್ಯನಾರಾಯಣರವರು ಡಾ.ರಾಜ್ ಕುಮಾರ್ ರವರ ಬಂಗಾರದ ಮನುಷ್ಯ ಚಿತ್ರದಿಂದ ಸ್ಫೂರ್ತಿ ಪಡೆದು ರೈತರಾದೆವು ಎನ್ನುತ್ತಾರೆ.

andolanait

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

10 mins ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

3 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

3 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

3 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago