ಸಾವಯವ ಕೃಷಿ ಪದ್ಧತಿಯ ಮೂಲಕ ಡ್ರಾಗನ್ ಫುಟ್ ಬೆಳೆದು ವಿಶೇಷ ರೈತರೆನಿಸಿಕೊಂಡಿದ್ದಾರೆ ಬನ್ನೂರು ಸಮೀಪದ ನೀರಿನಹಳ್ಳಿ ಗ್ರಾಮದ ರೈತರಾದ ಯಮುನಾ ಸೂರ್ಯನಾರಾಯಣ.
ಯಮುನಾ ಸೂರ್ಯನಾರಾಯಣರವರು ತಮ್ಮ 5 ಎಕರೆ ಜಮೀನಿನಲ್ಲಿ 2 ಎಕರೆ ಡ್ರಾಗನ್ ಫುಟ್ ಬೆಳೆದು ಸಾಧನೆ ಮಾಡಿದ್ದಾರೆ. ಒಟ್ಟಾರೆ ಸಮಗ್ರ ಕೃಷಿ ಮಾಡುತ್ತಿರುವ ಇವರು 2 ಎಕರೆಯಲ್ಲಿ ಡ್ರಾಗನ್ ಫುಟ್, ಉಳಿದ ಮೂರು ಎಕರೆಯಲ್ಲಿ ಮಾವು, ಆಮ್ಲ, ನೇರಳೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಸಂಪೂರ್ಣ ಸಾವಯವ ಕೃಷಿ ಪದ್ಧತಿ ಅನುಸರಿಸುವ ಇವರು, ಆರಂಭದಲ್ಲಿ ತಮ್ಮ ಜಮೀನಿನಲ್ಲಿ ಸರಿಯಾಗಿ ನೀರು ಸಿಗುತ್ತಿಲ್ಲದ ಪರಿಣಾಮ ಮತ್ತು ಜಮೀನು ಕಲ್ಲುಭೂಮಿಯಾಗಿದ್ದರಿಂದ ಪ್ರಾಯೋಗಿಕವಾಗಿ ಡ್ರಾಗನ್ ಫುಟ್ ಬೆಳೆಯಲು ಆರಂಭಿಸಿದರು. ನಂತರ ಮಳೆ ಉತ್ತಮವಾದ್ದರಿಂದ ಜಮೀನಿನಲ್ಲಿಯೂ ನೀರು ಸಿಗಲು ಆರಂಭಿಸಿತು. ಬಳಿಕ ಜಲ ಮರುಪೂರಣ ಮಾಡಿಕೊಂಡಿದ್ದು, ನೀರು ಲಭಿಸುತ್ತಿದೆ. ಈ ನೀರನ್ನು ಬಳಸಿಕೊಂಡು ಕೃಷಿ ಮಾಡುತ್ತಿದ್ದಾರೆ.
ಮೇ ತಿಂಗಳ ಕೊನೆಯ ವಾರದಿಂದ ಫಲ ನೀಡಲು ಆರಂಭವಾಗುವ ಡ್ರಾಗನ್ ಫುಟ್ ಅಕ್ಟೋಬರ್ ತಿಂಗಳವರೆಗೂ ಫಲ ನೀಡಲಿದೆ. ಒಟ್ಟಾರೆ ಈ ಕೃಷಿಯಿಂದ ಉತ್ತಮ ಆದಾಯ ಪಡೆಯುತ್ತಿರುವ ಯಮುನಾ ಸೂರ್ಯನಾರಾಯಣರವರು ಡಾ.ರಾಜ್ ಕುಮಾರ್ ರವರ ಬಂಗಾರದ ಮನುಷ್ಯ ಚಿತ್ರದಿಂದ ಸ್ಫೂರ್ತಿ ಪಡೆದು ರೈತರಾದೆವು ಎನ್ನುತ್ತಾರೆ.
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…