ಅನ್ನದಾತರ ಅಂಗಳ

ಸರ್ಕಾರದ ಸಹಾಯಧನ ಪಡೆದು ಸೌರ ಪಂಪ್‌ಸೆಟ್ ಅಳವಡಿಸಿ

ಪಿಎಂ ಕುಸುಮ್-ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ತಾನ್ ಮಹಾಭಿಯಾನ್ (PM-KUSUM:
Pradhan Mantri Kisan Urja Suraksha evam Uttan Mahaabhiyan)ಕಾಂಪೋನೆಂಟ್-ಬಿ ಅಡಿಯಲ್ಲಿ ಜಾಲಮುಕ್ತ ಸೌರ ಚಾಲಿತ ಪಂಪ್‌ಸೆಟ್ ಗಳನ್ನು ಅಳವಡಿಸುವ ಯೋಜನೆಯನ್ನು ಕೆಆರ್ ಇಡಿಎಲ್ (KREDL) ಮೂಲಕ ರಾಜ್ಯವ್ಯಾಪ್ತಿಯಲ್ಲಿ ಬರುವ ಎಲ್ಲ ವಿದ್ಯುತ್ ಸರಬರಾಜು ನಿಗಮಗಳ ಸಹಯೋಗದೊಂದಿಗೆ ಕೈಗೊಳ್ಳಲಾಗಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ಸೌರ ಪಂಪ್‌ಸೆಟ್‌ಗೆ ಶೇ.೩೦ರಷ್ಟು ಕೇಂದ್ರದಿಂದ ಸಹಾಯಧನದೊಂದಿಗೆ ಗರಿಷ್ಟ ೭.೫ ಎಚ್‌ಪಿ (೭.೫ hp) ಸಾಮರ್ಥ್ಯವಿರುವ ಪಂಪ್‌ಸೆಟ್‌ಗಳನ್ನು ಪಡೆದುಕೊಳ್ಳಬಹದಾಗಿದೆ.

ರೈತರು ೧೦ ಎಚ್‌ಪಿ (೧೦ hp) ಸಾಮರ್ಥ್ಯ ವಿರುವ ಪಂಪ್‌ಸೆಟ್‌ಗಳನ್ನು ಕೂಡ ಅಳವಡಿಸಬಹುದು. ಆದರೆ, ಪ್ರತಿ ಪಂಪ್‌ಸೆಟ್‌ಗೆ ಕೇಂದ್ರದ ಸಹಾಯಧನ ೭.೫ ಎಚ್‌ಪಿ ಸಾಮ್ಯರ್ಥದ ಪಂಪ್ ಸೆಟ್ ದರದ ಶೇ.೩೦ಕ್ಕೆ ಸೀಮಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಶೇ. ೩೦ ಸಹಾಯಧನ ಹೊರತುಪಡಿಸಿ, ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದ ರೈತ ಫಲಾನುಭವಿಗಳಿಗೆ, ಕೊಳವೆ ಅಥವಾ ತೆರೆದ ಬಾವಿಗಳಿಗೆ ಸೌರ ಪಂಪ್‌ಸೆಟ್ ಒದಗಿಸಲು ಶೇ.೩೦ ಸಹಾಯಧನದ ಒದಗಿಸಲಾಗುತ್ತಿದೆ.

ಇದಲ್ಲದೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ರೈತರಿಗೆ ಶೇ.೫೦ ಸಹಾಯಧನದ ಒದಗಿಸಲಾಗುತ್ತಿದೆ. ಉಳಿದ ಮೊತ್ತವನ್ನು ರೈತರು ಪಾವತಿಸಬೇಕಾಗುತ್ತದೆ. (ಸಾಮಾನ್ಯ ವರ್ಗ ಶೇ.೪೦, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶೇ.೨೦). ಅರ್ಹ ರೈತ ಫಲಾನುಭವಿಗಳು ಯಾವುದೇ ಕಚೇರಿಗಳಿಗೆ ಭೇಟಿ ನೀಡದೇ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಕೆಗೆ ನಿಯಮಗಳು:

* ರೈತರು ಜಮೀನಿನಲ್ಲಿ ಬಾವಿಯನ್ನು ಕೊರೆಸಿರಬೇಕು
* ಈ ಯೋಜನೆಯು ಹೊಸ ಕೃಷಿ ಪಂಪ್‌ಸೆಟ್‌ಗಳಿಗೆ ಮಾತ್ರ ಅನ್ವಯ
* ಹಾಲಿ ವಿದ್ಯುತ್ ಸಂಪರ್ಕ ಹೊಂದಿರುವ ಪಂಪ್‌ಸೆಟ್‌ಗಳು ಅರ್ಹವಿರುವುದಿಲ್ಲ
* ಈಗಾಗಲೇ ಗಂಗಾಕಲ್ಯಾಣ ಯೋಜನೆಯಡಿ ಲಾಭವನ್ನು ಪಡೆದಿರುವ ರೈತರು ಅರ್ಹರಲ್ಲ
* ಪಿಎಂ-ಕುಸುಮ್, ಕಾಂಪೋನೆಂಟ್-ಬಿ ಮಾರ್ಗಸೂಚಿಯ ಅನ್ವಯ ‘ಡಾರ್ಕ್ ಝೋನ್’ ಎಂದು ಘೋಷಿಸರುವ ಪ್ರದೇಶಗಳಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ
* ಅರ್ಜಿದಾರರು ಕೇವಲ ಒಂದು ಸೌರ ಪಂಪ್‌ಸೆಟ್‌ಗೆ ಅರ್ಜಿ ಸಲ್ಲಿಸಬಹುದು
* ಈಗಾಗಲೇ ಇತರೆ ಅನುದಾನಿತ ಸರ್ಕಾರಿ ಪ್ರಾಯೋಜಿತ ಯೋಜನೆಗಳಡಿ ಸೌರ ಪಂಪ್‌ಸೆಟ್ ಪಡೆದಿದ್ದರೆ ಅಂತಹ ಅರ್ಜಿದಾರರು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹರಿರುವುದಿಲ್ಲ
* ಎಲ್ಲ ವರ್ಗದ ಅರ್ಜಿಗಳಲ್ಲಿ ವಿಶೇಷಚೇತನರಿಗೆ ಶೇ.೫ ರಷ್ಟು ಮೀಸಲಾತಿ ಒದಗಿಸಲಾಗುತ್ತದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

* ಭೂ ಮಾಲೀಕತ್ವ ಇರುವ ಅರ್ಜಿದಾರರ ಹೆಸರು
* ವಾಸಸ್ಥಳ ಮತ್ತು ವಿಳಾಸ, ಗ್ರಾಮ, ತಾಲ್ಲೂಕು, ಜಿಲ್ಲೆ
* ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ
* ಆರ್‌ಟಿಸಿ ಮತ್ತಿತರೆ ಅವಶ್ಯ ದಾಖಲೆಗಳು
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://kredlinfo.in/Applnoffgridswp

ಆಂದೋಲನ ಡೆಸ್ಕ್

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

11 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago