ಅನ್ನದಾತರ ಅಂಗಳ

ಸರ್ಕಾರದ ಸಹಾಯಧನ ಪಡೆದು ಸೌರ ಪಂಪ್‌ಸೆಟ್ ಅಳವಡಿಸಿ

ಪಿಎಂ ಕುಸುಮ್-ಪ್ರಧಾನ ಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ತಾನ್ ಮಹಾಭಿಯಾನ್ (PM-KUSUM:
Pradhan Mantri Kisan Urja Suraksha evam Uttan Mahaabhiyan)ಕಾಂಪೋನೆಂಟ್-ಬಿ ಅಡಿಯಲ್ಲಿ ಜಾಲಮುಕ್ತ ಸೌರ ಚಾಲಿತ ಪಂಪ್‌ಸೆಟ್ ಗಳನ್ನು ಅಳವಡಿಸುವ ಯೋಜನೆಯನ್ನು ಕೆಆರ್ ಇಡಿಎಲ್ (KREDL) ಮೂಲಕ ರಾಜ್ಯವ್ಯಾಪ್ತಿಯಲ್ಲಿ ಬರುವ ಎಲ್ಲ ವಿದ್ಯುತ್ ಸರಬರಾಜು ನಿಗಮಗಳ ಸಹಯೋಗದೊಂದಿಗೆ ಕೈಗೊಳ್ಳಲಾಗಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿ ಸೌರ ಪಂಪ್‌ಸೆಟ್‌ಗೆ ಶೇ.೩೦ರಷ್ಟು ಕೇಂದ್ರದಿಂದ ಸಹಾಯಧನದೊಂದಿಗೆ ಗರಿಷ್ಟ ೭.೫ ಎಚ್‌ಪಿ (೭.೫ hp) ಸಾಮರ್ಥ್ಯವಿರುವ ಪಂಪ್‌ಸೆಟ್‌ಗಳನ್ನು ಪಡೆದುಕೊಳ್ಳಬಹದಾಗಿದೆ.

ರೈತರು ೧೦ ಎಚ್‌ಪಿ (೧೦ hp) ಸಾಮರ್ಥ್ಯ ವಿರುವ ಪಂಪ್‌ಸೆಟ್‌ಗಳನ್ನು ಕೂಡ ಅಳವಡಿಸಬಹುದು. ಆದರೆ, ಪ್ರತಿ ಪಂಪ್‌ಸೆಟ್‌ಗೆ ಕೇಂದ್ರದ ಸಹಾಯಧನ ೭.೫ ಎಚ್‌ಪಿ ಸಾಮ್ಯರ್ಥದ ಪಂಪ್ ಸೆಟ್ ದರದ ಶೇ.೩೦ಕ್ಕೆ ಸೀಮಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಶೇ. ೩೦ ಸಹಾಯಧನ ಹೊರತುಪಡಿಸಿ, ರಾಜ್ಯ ಸರ್ಕಾರದಿಂದ ಸಾಮಾನ್ಯ ವರ್ಗದ ರೈತ ಫಲಾನುಭವಿಗಳಿಗೆ, ಕೊಳವೆ ಅಥವಾ ತೆರೆದ ಬಾವಿಗಳಿಗೆ ಸೌರ ಪಂಪ್‌ಸೆಟ್ ಒದಗಿಸಲು ಶೇ.೩೦ ಸಹಾಯಧನದ ಒದಗಿಸಲಾಗುತ್ತಿದೆ.

ಇದಲ್ಲದೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗಗಳ ರೈತರಿಗೆ ಶೇ.೫೦ ಸಹಾಯಧನದ ಒದಗಿಸಲಾಗುತ್ತಿದೆ. ಉಳಿದ ಮೊತ್ತವನ್ನು ರೈತರು ಪಾವತಿಸಬೇಕಾಗುತ್ತದೆ. (ಸಾಮಾನ್ಯ ವರ್ಗ ಶೇ.೪೦, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶೇ.೨೦). ಅರ್ಹ ರೈತ ಫಲಾನುಭವಿಗಳು ಯಾವುದೇ ಕಚೇರಿಗಳಿಗೆ ಭೇಟಿ ನೀಡದೇ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಕೆಗೆ ನಿಯಮಗಳು:

* ರೈತರು ಜಮೀನಿನಲ್ಲಿ ಬಾವಿಯನ್ನು ಕೊರೆಸಿರಬೇಕು
* ಈ ಯೋಜನೆಯು ಹೊಸ ಕೃಷಿ ಪಂಪ್‌ಸೆಟ್‌ಗಳಿಗೆ ಮಾತ್ರ ಅನ್ವಯ
* ಹಾಲಿ ವಿದ್ಯುತ್ ಸಂಪರ್ಕ ಹೊಂದಿರುವ ಪಂಪ್‌ಸೆಟ್‌ಗಳು ಅರ್ಹವಿರುವುದಿಲ್ಲ
* ಈಗಾಗಲೇ ಗಂಗಾಕಲ್ಯಾಣ ಯೋಜನೆಯಡಿ ಲಾಭವನ್ನು ಪಡೆದಿರುವ ರೈತರು ಅರ್ಹರಲ್ಲ
* ಪಿಎಂ-ಕುಸುಮ್, ಕಾಂಪೋನೆಂಟ್-ಬಿ ಮಾರ್ಗಸೂಚಿಯ ಅನ್ವಯ ‘ಡಾರ್ಕ್ ಝೋನ್’ ಎಂದು ಘೋಷಿಸರುವ ಪ್ರದೇಶಗಳಲ್ಲಿ ಈ ಯೋಜನೆಯು ಅನ್ವಯಿಸುವುದಿಲ್ಲ
* ಅರ್ಜಿದಾರರು ಕೇವಲ ಒಂದು ಸೌರ ಪಂಪ್‌ಸೆಟ್‌ಗೆ ಅರ್ಜಿ ಸಲ್ಲಿಸಬಹುದು
* ಈಗಾಗಲೇ ಇತರೆ ಅನುದಾನಿತ ಸರ್ಕಾರಿ ಪ್ರಾಯೋಜಿತ ಯೋಜನೆಗಳಡಿ ಸೌರ ಪಂಪ್‌ಸೆಟ್ ಪಡೆದಿದ್ದರೆ ಅಂತಹ ಅರ್ಜಿದಾರರು ಈ ಯೋಜನೆಯ ಲಾಭವನ್ನು ಪಡೆಯಲು ಅರ್ಹರಿರುವುದಿಲ್ಲ
* ಎಲ್ಲ ವರ್ಗದ ಅರ್ಜಿಗಳಲ್ಲಿ ವಿಶೇಷಚೇತನರಿಗೆ ಶೇ.೫ ರಷ್ಟು ಮೀಸಲಾತಿ ಒದಗಿಸಲಾಗುತ್ತದೆ

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

* ಭೂ ಮಾಲೀಕತ್ವ ಇರುವ ಅರ್ಜಿದಾರರ ಹೆಸರು
* ವಾಸಸ್ಥಳ ಮತ್ತು ವಿಳಾಸ, ಗ್ರಾಮ, ತಾಲ್ಲೂಕು, ಜಿಲ್ಲೆ
* ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ
* ಆರ್‌ಟಿಸಿ ಮತ್ತಿತರೆ ಅವಶ್ಯ ದಾಖಲೆಗಳು
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://kredlinfo.in/Applnoffgridswp

ಆಂದೋಲನ ಡೆಸ್ಕ್

Recent Posts

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

50 mins ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

6 hours ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…

6 hours ago

ಓದುಗರ ಪತ್ರ: ಆನ್‌ಲೈನ್ ಕಾರ್ಯಭಾರದಿಂದ ಶಿಕ್ಷಕರಿಗೆ ಮುಕ್ತಿ ನೀಡಿ

ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್‌ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…

6 hours ago

ಮಲ್ಲಳ್ಳಿ ಗ್ರಾಮಕ್ಕಿಲ್ಲ ಮೂಲ ಸೌಕರ್ಯ!

ಲಕ್ಷ್ಮೀಕಾಂತ್ ಕೊಮಾರಪ್ಪ ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ…

6 hours ago