ಅನ್ನದಾತರ ಅಂಗಳ

ಸಮಗ್ರ ಕೃಷಿಯಲ್ಲಿ ಸಾರ್ಥಕತೆ ಕಂಡ ಕೆಂಪನಕೊಪ್ಪಲಿನ ಜಗದೀಶ್‌

ಭೇರ್ಯ ಮಹೇಶ್
ಸಮಗ್ರ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿ ಖಂಡಿತವಾಗಿಯೂ ಲಾಭದಾಯಕವಾಗಿರುತ್ತದೆ ಎಂಬುದನ್ನು ಕೆ. ಆರ್. ನಗರ ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ. ಪಿ. ಜಗದೀಶ್ ಸಾಧಿಸಿ ತೋರಿಸಿದ್ದಾರೆ.

ತಂದೆಯಿಂದ ಬಳುವಳಿಯಾಗಿ ಬಂದ ಕೃಷಿ ಕಾಯಕದಲ್ಲಿಯೇ ಖುಷಿಯನ್ನು ಕಾಣುವ ಕನಸು ಕಟ್ಟಿಕೊಂಡ ಜಗದೀಶ್, ತನಗಿರುವ ಮೂರೂವರೆ ಎಕರೆ ಜಮೀನಿನಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಉತ್ತಮ ಕೃಷಿ ಕಾಯಕದಲ್ಲಿ ತೊಡಗಿರುವ ಇವರನ್ನು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆಗಳು ‘ಆಧುನಿಕ ಪ್ರಗತಿಪರ ರೈತ’ ಎಂದು ಗುರುತಿಸಿ ಗೌರವಿಸಿವೆ. ಇತರೆ ರೈತರು ಕೂಡ ಇವರ ತೋಟಕ್ಕೆ ಭೇಟಿ ನೀಡಿ ಸಮಗ್ರ ಕೃಷಿ ಪದ್ದತಿ ಮತ್ತು ಮಿಶ್ರ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ.

ಸಾಮಾನ್ಯವಾಗಿ ಕೃಷಿ ಲಾಭದಾಯಕವಲ್ಲ, ಬೆಳೆನಷ್ಟ, ರೋಗರುಜಿನಗಳ ಕಾಟ, ಬೆಲೆ ಕುಸಿತದಿಂದ ಚೇತರಿಸಿಕೊಳ್ಳುವುದೇ ರೈತರಿಗೆ ಕಷ್ಟ ಎಂದು ಅನೇಕ ಮಂದಿ ಕೃಷಿಯಿಂದಲೇ ವಿಮುಖರಾಗುತ್ತಾರೆ. ಆದರೆ ಕೆ. ಪಿ. ಜಗದೀಶ್ ವಿವಿಧ ತೋಟಗಾರಿಕೆ, ಮಿಶ್ರ ಬೆಳೆಗಳಿಂದಲೇ ಹೆಚ್ಚು ಲಾಭ ಗಳಿಸುತ್ತಾ ಕೃಷಿಯಲ್ಲಿಯೂ ಲಾಭ ಗಳಿಸಬಹುದು ಎಂಬುದನ್ನು ತೋರಿಸಿದ್ದಾರೆ. ಇವರ ತೋಟದಲ್ಲಿ ಸೀಬೆ, ನೇರಳೆ, ತೆಂಗು, ಮಾವು, ಸಪೋಟ, ಡ್ರಾಗನ್ ಫ್ರೂಟ್, ಪಪ್ಪಾಯ, ನಿಂಬೆ, ಏಲಕ್ಕಿ ಸೇರಿದಂತೆ ಹಲವು ರೀತಿಯ ಬೆಳೆಗಳನ್ನು ಮೂಲಕ ಬೆಳೆದಿದ್ದಾರೆ.

ಕೃಷಿಯಲ್ಲೂ ಸಮಗ್ರ ಯೋಜನೆ
ರೈತರು ಅಧಿಕ ಇಳುವರಿ ಅಥವಾ ಅಧಿಕ ಲಾಭದ ಹಿನ್ನೆಲೆಯಲ್ಲಿ ಒಂದೇ ಬೆಳೆಗೆ ಜೋತುಬೀಳ ಬಾರದು. ಇರುವ ಜಮೀನಿನಲ್ಲಿಯೇ ಅನೇಕ ಅಲ್ಪಾವಧಿ ಮತ್ತು ದೀರ್ಘಾವಧಿ ಬೆಳೆಗಳನ್ನು ಬೆಳೆಯಬೇಕು. ಕಡಿಮೆ ಖರ್ಚು ಮಾಡಿ ಲಾಭ ಪಡೆಯುವ ಬೆಳೆ ಬೆಳೆಯಬೇಕು. ಒಂದು ಬೆಳೆ ಕೈಕೊಟ್ಟರೆ ಮತ್ತೊಂದು ಬೆಳೆ ರೈತರ ಕೈಹಿಡಿಯುತ್ತದೆ. ಪ್ರಕೃತಿಯ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟ, ಬೆಲೆ ಕುಸಿತ ರೈತರನ್ನು ಹೆಚ್ಚು ಬಾಧಿಸುವುದುಂಟು ಇರುವ ಜಮೀನಿನಲ್ಲಿ ಅನೇಕ ಬೆಳೆಗಳನ್ನು ಬೆಳೆಯುವುದರಿಂದ ಇಂತಹ ನಷ್ಟದಿಂದ ದೂರವಾಗಬಹುದು ಎನ್ನುತ್ತಾರೆ ಕೃಷಿಕ ಕೆ. ಪಿ. ಜಗದೀಶ್.

ಜಗದೀಶ್, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದು, ಅವರಿಂದ ಸಲಹೆ ಪಡೆಯುತ್ತಾರೆ. ಕೃಷಿಯಲ್ಲೂ ಹೊಸ ಹೊಸ ಅನ್ವೇಷಣೆಯನ್ನು ಮಾಡುವುದು ಅವರ ಚಿಂತನೆಯಾಗಿದೆ. ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಸೊಪ್ಪು, ಎರೆಹುಳ ಗೊಬ್ಬರ, ಬೇವಿನ ಹಿಂಡಿ ಜೊತೆಗೆ ಸಾವಯವ ಜೀವಾಮೃತವನ್ನು ಬಳಸುತ್ತಾರೆ.

ಜಗದೀಶ್ ಉಪಕಸುಬಾಗಿ ಕುರಿ, ಕೋಳಿ, ನಾಟಿ ಹಸು ಸಾಕಾಣಿಕೆ ಮಾಡುತ್ತಾರೆ. ಅವರ ಪತ್ನಿಯೂ ಕೃಷಿಗೆ ಸಾಥ್ ನೀಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

10 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

11 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago