ಅನ್ನದಾತರ ಅಂಗಳ

ಸಮಗ್ರ ಕೃಷಿಯಲ್ಲಿ ಸಾರ್ಥಕತೆ ಕಂಡ ಕೆಂಪನಕೊಪ್ಪಲಿನ ಜಗದೀಶ್‌

ಭೇರ್ಯ ಮಹೇಶ್
ಸಮಗ್ರ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿ ಖಂಡಿತವಾಗಿಯೂ ಲಾಭದಾಯಕವಾಗಿರುತ್ತದೆ ಎಂಬುದನ್ನು ಕೆ. ಆರ್. ನಗರ ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ. ಪಿ. ಜಗದೀಶ್ ಸಾಧಿಸಿ ತೋರಿಸಿದ್ದಾರೆ.

ತಂದೆಯಿಂದ ಬಳುವಳಿಯಾಗಿ ಬಂದ ಕೃಷಿ ಕಾಯಕದಲ್ಲಿಯೇ ಖುಷಿಯನ್ನು ಕಾಣುವ ಕನಸು ಕಟ್ಟಿಕೊಂಡ ಜಗದೀಶ್, ತನಗಿರುವ ಮೂರೂವರೆ ಎಕರೆ ಜಮೀನಿನಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಉತ್ತಮ ಕೃಷಿ ಕಾಯಕದಲ್ಲಿ ತೊಡಗಿರುವ ಇವರನ್ನು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆಗಳು ‘ಆಧುನಿಕ ಪ್ರಗತಿಪರ ರೈತ’ ಎಂದು ಗುರುತಿಸಿ ಗೌರವಿಸಿವೆ. ಇತರೆ ರೈತರು ಕೂಡ ಇವರ ತೋಟಕ್ಕೆ ಭೇಟಿ ನೀಡಿ ಸಮಗ್ರ ಕೃಷಿ ಪದ್ದತಿ ಮತ್ತು ಮಿಶ್ರ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ.

ಸಾಮಾನ್ಯವಾಗಿ ಕೃಷಿ ಲಾಭದಾಯಕವಲ್ಲ, ಬೆಳೆನಷ್ಟ, ರೋಗರುಜಿನಗಳ ಕಾಟ, ಬೆಲೆ ಕುಸಿತದಿಂದ ಚೇತರಿಸಿಕೊಳ್ಳುವುದೇ ರೈತರಿಗೆ ಕಷ್ಟ ಎಂದು ಅನೇಕ ಮಂದಿ ಕೃಷಿಯಿಂದಲೇ ವಿಮುಖರಾಗುತ್ತಾರೆ. ಆದರೆ ಕೆ. ಪಿ. ಜಗದೀಶ್ ವಿವಿಧ ತೋಟಗಾರಿಕೆ, ಮಿಶ್ರ ಬೆಳೆಗಳಿಂದಲೇ ಹೆಚ್ಚು ಲಾಭ ಗಳಿಸುತ್ತಾ ಕೃಷಿಯಲ್ಲಿಯೂ ಲಾಭ ಗಳಿಸಬಹುದು ಎಂಬುದನ್ನು ತೋರಿಸಿದ್ದಾರೆ. ಇವರ ತೋಟದಲ್ಲಿ ಸೀಬೆ, ನೇರಳೆ, ತೆಂಗು, ಮಾವು, ಸಪೋಟ, ಡ್ರಾಗನ್ ಫ್ರೂಟ್, ಪಪ್ಪಾಯ, ನಿಂಬೆ, ಏಲಕ್ಕಿ ಸೇರಿದಂತೆ ಹಲವು ರೀತಿಯ ಬೆಳೆಗಳನ್ನು ಮೂಲಕ ಬೆಳೆದಿದ್ದಾರೆ.

ಕೃಷಿಯಲ್ಲೂ ಸಮಗ್ರ ಯೋಜನೆ
ರೈತರು ಅಧಿಕ ಇಳುವರಿ ಅಥವಾ ಅಧಿಕ ಲಾಭದ ಹಿನ್ನೆಲೆಯಲ್ಲಿ ಒಂದೇ ಬೆಳೆಗೆ ಜೋತುಬೀಳ ಬಾರದು. ಇರುವ ಜಮೀನಿನಲ್ಲಿಯೇ ಅನೇಕ ಅಲ್ಪಾವಧಿ ಮತ್ತು ದೀರ್ಘಾವಧಿ ಬೆಳೆಗಳನ್ನು ಬೆಳೆಯಬೇಕು. ಕಡಿಮೆ ಖರ್ಚು ಮಾಡಿ ಲಾಭ ಪಡೆಯುವ ಬೆಳೆ ಬೆಳೆಯಬೇಕು. ಒಂದು ಬೆಳೆ ಕೈಕೊಟ್ಟರೆ ಮತ್ತೊಂದು ಬೆಳೆ ರೈತರ ಕೈಹಿಡಿಯುತ್ತದೆ. ಪ್ರಕೃತಿಯ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟ, ಬೆಲೆ ಕುಸಿತ ರೈತರನ್ನು ಹೆಚ್ಚು ಬಾಧಿಸುವುದುಂಟು ಇರುವ ಜಮೀನಿನಲ್ಲಿ ಅನೇಕ ಬೆಳೆಗಳನ್ನು ಬೆಳೆಯುವುದರಿಂದ ಇಂತಹ ನಷ್ಟದಿಂದ ದೂರವಾಗಬಹುದು ಎನ್ನುತ್ತಾರೆ ಕೃಷಿಕ ಕೆ. ಪಿ. ಜಗದೀಶ್.

ಜಗದೀಶ್, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದು, ಅವರಿಂದ ಸಲಹೆ ಪಡೆಯುತ್ತಾರೆ. ಕೃಷಿಯಲ್ಲೂ ಹೊಸ ಹೊಸ ಅನ್ವೇಷಣೆಯನ್ನು ಮಾಡುವುದು ಅವರ ಚಿಂತನೆಯಾಗಿದೆ. ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಸೊಪ್ಪು, ಎರೆಹುಳ ಗೊಬ್ಬರ, ಬೇವಿನ ಹಿಂಡಿ ಜೊತೆಗೆ ಸಾವಯವ ಜೀವಾಮೃತವನ್ನು ಬಳಸುತ್ತಾರೆ.

ಜಗದೀಶ್ ಉಪಕಸುಬಾಗಿ ಕುರಿ, ಕೋಳಿ, ನಾಟಿ ಹಸು ಸಾಕಾಣಿಕೆ ಮಾಡುತ್ತಾರೆ. ಅವರ ಪತ್ನಿಯೂ ಕೃಷಿಗೆ ಸಾಥ್ ನೀಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

9 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

9 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

10 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

10 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

10 hours ago