ಅನ್ನದಾತರ ಅಂಗಳ

ಸಮಗ್ರ ಕೃಷಿಯಲ್ಲಿ ಸಾರ್ಥಕತೆ ಕಂಡ ಕೆಂಪನಕೊಪ್ಪಲಿನ ಜಗದೀಶ್‌

ಭೇರ್ಯ ಮಹೇಶ್
ಸಮಗ್ರ ಕೃಷಿ ಪದ್ಧತಿ ಮತ್ತು ಮಿಶ್ರ ಬೆಳೆ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿ ಖಂಡಿತವಾಗಿಯೂ ಲಾಭದಾಯಕವಾಗಿರುತ್ತದೆ ಎಂಬುದನ್ನು ಕೆ. ಆರ್. ನಗರ ತಾಲ್ಲೂಕಿನ ಕೆಂಪನಕೊಪ್ಪಲು ಗ್ರಾಮದ ಪ್ರಗತಿಪರ ರೈತ ಕೆ. ಪಿ. ಜಗದೀಶ್ ಸಾಧಿಸಿ ತೋರಿಸಿದ್ದಾರೆ.

ತಂದೆಯಿಂದ ಬಳುವಳಿಯಾಗಿ ಬಂದ ಕೃಷಿ ಕಾಯಕದಲ್ಲಿಯೇ ಖುಷಿಯನ್ನು ಕಾಣುವ ಕನಸು ಕಟ್ಟಿಕೊಂಡ ಜಗದೀಶ್, ತನಗಿರುವ ಮೂರೂವರೆ ಎಕರೆ ಜಮೀನಿನಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆದು ಉತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಉತ್ತಮ ಕೃಷಿ ಕಾಯಕದಲ್ಲಿ ತೊಡಗಿರುವ ಇವರನ್ನು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆಗಳು ‘ಆಧುನಿಕ ಪ್ರಗತಿಪರ ರೈತ’ ಎಂದು ಗುರುತಿಸಿ ಗೌರವಿಸಿವೆ. ಇತರೆ ರೈತರು ಕೂಡ ಇವರ ತೋಟಕ್ಕೆ ಭೇಟಿ ನೀಡಿ ಸಮಗ್ರ ಕೃಷಿ ಪದ್ದತಿ ಮತ್ತು ಮಿಶ್ರ ಬೆಳೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಾರೆ.

ಸಾಮಾನ್ಯವಾಗಿ ಕೃಷಿ ಲಾಭದಾಯಕವಲ್ಲ, ಬೆಳೆನಷ್ಟ, ರೋಗರುಜಿನಗಳ ಕಾಟ, ಬೆಲೆ ಕುಸಿತದಿಂದ ಚೇತರಿಸಿಕೊಳ್ಳುವುದೇ ರೈತರಿಗೆ ಕಷ್ಟ ಎಂದು ಅನೇಕ ಮಂದಿ ಕೃಷಿಯಿಂದಲೇ ವಿಮುಖರಾಗುತ್ತಾರೆ. ಆದರೆ ಕೆ. ಪಿ. ಜಗದೀಶ್ ವಿವಿಧ ತೋಟಗಾರಿಕೆ, ಮಿಶ್ರ ಬೆಳೆಗಳಿಂದಲೇ ಹೆಚ್ಚು ಲಾಭ ಗಳಿಸುತ್ತಾ ಕೃಷಿಯಲ್ಲಿಯೂ ಲಾಭ ಗಳಿಸಬಹುದು ಎಂಬುದನ್ನು ತೋರಿಸಿದ್ದಾರೆ. ಇವರ ತೋಟದಲ್ಲಿ ಸೀಬೆ, ನೇರಳೆ, ತೆಂಗು, ಮಾವು, ಸಪೋಟ, ಡ್ರಾಗನ್ ಫ್ರೂಟ್, ಪಪ್ಪಾಯ, ನಿಂಬೆ, ಏಲಕ್ಕಿ ಸೇರಿದಂತೆ ಹಲವು ರೀತಿಯ ಬೆಳೆಗಳನ್ನು ಮೂಲಕ ಬೆಳೆದಿದ್ದಾರೆ.

ಕೃಷಿಯಲ್ಲೂ ಸಮಗ್ರ ಯೋಜನೆ
ರೈತರು ಅಧಿಕ ಇಳುವರಿ ಅಥವಾ ಅಧಿಕ ಲಾಭದ ಹಿನ್ನೆಲೆಯಲ್ಲಿ ಒಂದೇ ಬೆಳೆಗೆ ಜೋತುಬೀಳ ಬಾರದು. ಇರುವ ಜಮೀನಿನಲ್ಲಿಯೇ ಅನೇಕ ಅಲ್ಪಾವಧಿ ಮತ್ತು ದೀರ್ಘಾವಧಿ ಬೆಳೆಗಳನ್ನು ಬೆಳೆಯಬೇಕು. ಕಡಿಮೆ ಖರ್ಚು ಮಾಡಿ ಲಾಭ ಪಡೆಯುವ ಬೆಳೆ ಬೆಳೆಯಬೇಕು. ಒಂದು ಬೆಳೆ ಕೈಕೊಟ್ಟರೆ ಮತ್ತೊಂದು ಬೆಳೆ ರೈತರ ಕೈಹಿಡಿಯುತ್ತದೆ. ಪ್ರಕೃತಿಯ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟ, ಬೆಲೆ ಕುಸಿತ ರೈತರನ್ನು ಹೆಚ್ಚು ಬಾಧಿಸುವುದುಂಟು ಇರುವ ಜಮೀನಿನಲ್ಲಿ ಅನೇಕ ಬೆಳೆಗಳನ್ನು ಬೆಳೆಯುವುದರಿಂದ ಇಂತಹ ನಷ್ಟದಿಂದ ದೂರವಾಗಬಹುದು ಎನ್ನುತ್ತಾರೆ ಕೃಷಿಕ ಕೆ. ಪಿ. ಜಗದೀಶ್.

ಜಗದೀಶ್, ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳೊಂದಿಗೆ ನಿರಂತರ ಸಂಪರ್ಕ ದಲ್ಲಿದ್ದು, ಅವರಿಂದ ಸಲಹೆ ಪಡೆಯುತ್ತಾರೆ. ಕೃಷಿಯಲ್ಲೂ ಹೊಸ ಹೊಸ ಅನ್ವೇಷಣೆಯನ್ನು ಮಾಡುವುದು ಅವರ ಚಿಂತನೆಯಾಗಿದೆ. ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಸೊಪ್ಪು, ಎರೆಹುಳ ಗೊಬ್ಬರ, ಬೇವಿನ ಹಿಂಡಿ ಜೊತೆಗೆ ಸಾವಯವ ಜೀವಾಮೃತವನ್ನು ಬಳಸುತ್ತಾರೆ.

ಜಗದೀಶ್ ಉಪಕಸುಬಾಗಿ ಕುರಿ, ಕೋಳಿ, ನಾಟಿ ಹಸು ಸಾಕಾಣಿಕೆ ಮಾಡುತ್ತಾರೆ. ಅವರ ಪತ್ನಿಯೂ ಕೃಷಿಗೆ ಸಾಥ್ ನೀಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago