ಅನ್ನದಾತರ ಅಂಗಳ

ಕೋಟೆಕೆರೆ ಶೇಷ ಕುಮಾರ್ ಅವರ ಕೃಷಿ ಟೂರಿಸಂ

ಡಿ.ಎನ್.ಹರ್ಷ

ನಗರ ಪ್ರದೇಶಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಮಾಡುತ್ತಿದ್ದಾಗಿನಿಂದಲೂ ಕೃಷಿ ಮೇಲಿನ ಪ್ರೀತಿಯಿಂದಾಗಿ ಕಳೆದ ಐದು ದಶಕಗಳಿಂದ ಕೃಷಿಯಲ್ಲಿ ಪ್ರೀತಿಯನ್ನು ಬೆಳೆಸಿಕೊಂಡು ಈಗ ನಿವೃತ್ತಿಯ ಬಳಿಕ ಸಂಪೂರ್ಣವಾಗಿ ಕೃಷಿ ಕಾಯಕದಲ್ಲಿ ತೊಡಗಿಕೊಂಡಿರುವ ೭೪ ವರ್ಷ ಪ್ರಾಯದ ಆರ್.ಶೇಷ ಕುಮಾರ್ ಯುವಕರಿಗೆ ಮಾದರಿಯಾಗಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೋಟೆಕೆರೆ ಗ್ರಾಮದಲ್ಲಿರುವ ತಮ್ಮ ನಾಲ್ಕು ಎಕರೆ ಕೃಷಿ ಭೂಮಿಯಲ್ಲಿ ೬೫ಕ್ಕೂ ಹೆಚ್ಚು ವಿದೇಶಿ ತಳಿಗಳ ಹಣ್ಣುಗಳನ್ನು ಬೆಳೆಯುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇವರು ಹಲವು ತಳಿಗಳ ಮಾವಿನ ಹಣ್ಣು, ಹಲಸು, ಸಪೋಟ, ಸೀಬೆ ಸೇರಿದಂತೆ ಅನೇಕ ಬಗೆಯ ಹಣ್ಣುಗಳನ್ನು ನೈಸರ್ಗಿಕ ಕೃಷಿ ಪದ್ಧತಿ ಯನ್ನು ಅಳವಡಿಸಿಕೊಂಡು ಬೆಳೆದಿದ್ದಾರೆ.

ನಾಲ್ಕು ಎಕರೆ ಪೈಕಿ ಮೂರು ಎಕರೆಯಲ್ಲಿ ಹೈಡೆನ್ಸಿಟಿ ಪದ್ಧತಿಯನ್ನು ಅಳವಡಿಸಿಕೊಂಡು ಸುಮಾರು ೧,೯೦೦ಕ್ಕೂ ಅಧಿಕ ಹಣ್ಣಿನ ಗಿಡ-ಮರಗಳನ್ನು ಬೆಳೆಸಿದ್ದಾರೆ. ಉಳಿದ ಒಂದು ಎಕರೆಯಲ್ಲಿ ತಮ್ಮ ಮನೆಗೆ ಬೇಕಾದ ದ್ವಿದಳ ಧಾನ್ಯಗಳು, ರಾಗಿ, ಜೋಳ ಸೇರಿದಂತೆ ಏಕದಳ ಧಾನ್ಯಗಳನ್ನು ಬೆಳೆದುಕೊಳ್ಳುತ್ತಿದ್ದಾರೆ.

ಇನ್ನು ಇವರ ಜಮೀನಿಗೆ ಬೇಕಾದ ಜೀವಾಮೃತವನ್ನೂ ಇವರೇ ತಯಾರಿಸಿಕೊಳ್ಳುತ್ತಾರೆ. ಬೇವು, ಹಿಪ್ಪೆ, ಹೊಂಗೆ ಹಿಂಡಿಗಳನ್ನು ಬಳಸಿಕೊಂಡು ಜೀವಾಮೃತ ರೂಪದಲ್ಲಿ ಗೊಬ್ಬರ ತಯಾರಿಸಿ ಬಳಸುವುದರಿಂದ ಮಣ್ಣಿನಲ್ಲಿ ಅಗತ್ಯ ಸೂಕ್ಷಾ ಣು ಜೀವಿಗಳು ವೃದ್ಧಿಯಾಗಿ ಉತ್ತಮ ಇಳುವರಿ ಪಡೆಯಬಹುದು ಎಂಬುದು ಶೇಷ ಕುಮಾರ್‌ರವರ ಮಾತು.

ಇನ್ನು ಇವರ ತೋಟದಲ್ಲಿ ಬೆಳೆದ ತರಕಾರಿ, ಹಣ್ಣು ಹಾಗೂ ಇತರ ಕೃಷಿ ಉತ್ಪನ್ನಗಳನ್ನು ಇವರೇ ಕಟ್ಟಿಕೊಂಡಿರುವ ಸಮಾನ ಮನಸ್ಕರ ತಂಡದೊಂದಿಗೆ ಹಲವು ವರ್ಷಗಳಿಂದ ಮೈಸೂರಿನ ವಿಜಯನಗರದಲ್ಲಿ ವಾರಕ್ಕೊಮ್ಮೆ ನಡೆಯುವ ‘ಸಕ್ಕತ್ ಸೊಪ್ಪು’ ಎಂಬ ವಿಶೇಷ ಸಂತೆಯಲ್ಲಿ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಾರೆ.

ತಮ್ಮ ಜಮೀನಿನಲ್ಲಿ ವಿದ್ಯುತ್ ಸಮಸ್ಯೆ ಎದುರಾಗಬಾರದು ಎಂದು ಶೇಷ ಕುಮಾರ್ ಕಳೆದ ಹತ್ತು ವರ್ಷಗಳಿಂದ ಸೋಲಾರ್ ಮತ್ತು ಪವನ ವಿದ್ಯುಚ್ಚಕ್ತಿಯನ್ನು ಅಳವಡಿಸಿಕೊಂಡಿದ್ದಾರೆ. ತಮ್ಮ ಫಾರ್ಮ್‌ಗೆ ಭೇಟಿ ನೀಡುವ ಇತರೆ ಕೃಷಿಕರಿಗೂ ಉತ್ತಮ ಮಾಹಿತಿಯನ್ನು ನೀಡುತ್ತಾರೆ.

ಸುಮಾರು ೨೦ಕ್ಕೂ ಅಧಿಕ ದೇಶಗಳಿಗೆ ಭೇಟಿ ನೀಡಿರುವ ಶೇಷ ಕುಮಾರ್, ಅಲ್ಲಿನ ಕೃಷಿ ಪ್ರವಾಸ ತಾಣಗಳನ್ನು ನೋಡಿ, ಸ್ಥಳೀಯವಾಗಿ ಆಗ್ರೋ ಟೂರಿಸಂ ಸೆಂಟರ್ ತೆರೆಯುವ ಕನಸು ಕಂಡಿದ್ದರು. ಆಗ್ರೋ ಟೂರಿಸಂ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಬಳಿಕ ತಮ್ಮ ಕೃಷಿ ಭೂಮಿಯಲ್ಲಿ ಆಗ್ರೋ ಟೂರಿಸಂ ಸ್ಥಾಪಿಸಿ ತಮ್ಮ ಜಮೀನಿಗೆ ಭೇಟಿ ನೀಡುವ ರೈತರಿಗೆ ಊಟ, ವಸತಿ ಜತೆಗೆ ಆಧುನಿಕ ಕೃಷಿಯ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.

ಸದ್ಯ ಇವರ ತೋಟದಲ್ಲಿ ೨೦ಕ್ಕೂ ಅಧಿಕ ಜನರು ಉಳಿದುಕೊಳ್ಳಬಹುದಾದ ರೀತಿಯಲ್ಲಿ ಎಂಟು ನೈಸರ್ಗಿಕ ಕಾಟೇಜ್ಗಳು, ಅಡುಗೆ ಮನೆಗಳನ್ನು ನಿರ್ಮಾಣ ಮಾಡಿದ್ದು, ಆಗ್ರೋ ಟೂರಿಸಂ ಆರಂಭಿಸಿದ್ದಾರೆ. ಇವರ ತೋಟಕ್ಕೆ ಬರುವ ಬಹುಪಾಲು ಅತಿಥಿಗಳನ್ನು ಇವರ ಜಮೀನಿನಲ್ಲಿ ಬೆಳೆದಿರುವ ಲಿಪೋಟೋ, ಬ್ಲಾಕ್ ಸಪೋಟ, ರೆಡ್ ಸಪೋಟ, ಮ್ಯಾಂಗೋ ಸ್ಟೀಮ್, ಅಸ್ಟಿನ್ ಸೇರಿದಂತೆ ೬೫ಕ್ಕೂ ಅಧಿಕ ತಳಿಗಳ ವಿದೇಶಿ ಹಣ್ಣುಗಳು ಆಕರ್ಷಿಸುತ್ತಿವೆ. ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಕೃಷಿಯ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶವಿಟ್ಟುಕೊಂಡಿದ್ದಾರೆ.

ಶೇಷ ಕುಮಾರ್‌ರವರಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಮೈಸೂರಿನ ಸ್ವಯಂ ಸೇವಾ ಸಂಸ್ಥೆ ವಿಶ್ವೇಶ್ವರಯ್ಯ ಡೆವಲಪ್ಮೆಂಟ್ ಆರ್ಗನೈಜೇಷನ್ ವತಿಯಿಂದ ‘ಕೃಷಿ ಸಮ್ಮಾನ ಪುರಸ್ಕಾರ’ ಸಂದಿದೆ. ಅನೇಕ ಪ್ರತಿಷ್ಠಿತ ಸಂಘ ಸಂಸ್ಥೆಗಳು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿವೆ. ಇವರನ್ನು ಸಂಪರ್ಕಿಸಲು: ೯೯೭೨೯-೬೨೧೧೪

ಆಂದೋಲನ ಡೆಸ್ಕ್

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

32 mins ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

50 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

1 hour ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

2 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

2 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

3 hours ago